ಮುಡಾ ಪ್ರಕರಣ: ಮಾಜಿ ಆಯುಕ್ತ ದಿನೇಶ್ ಕುಮಾರ್ ED ವಶಕ್ಕೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (Muda) ಹಗರಣ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ವಿಚಾರಣೆ ಆಗಮಿಸಿದ್ದ ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ.
GT Dinesh Kumar
ಜಿಟಿ ದಿನೇಶ್ ಕುಮಾರ್
Updated on

ಬೆಂಗಳೂರು/ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (Muda) ಹಗರಣ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ವಿಚಾರಣೆ ಆಗಮಿಸಿದ್ದ ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಮುಡಾ ಹಗರಣ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿತ್ತು. ಇಂದು ದಿನೇಶ್ ಕುಮಾರ್ ಬೆಂಗಳೂರಿನ ಶಾಂತಿನಗರದಲ್ಲಿ ಇಡಿ ಕಚೇರಿಗೆ ಆಗಮಿಸಿದ್ದರು. ಈ ವೇಳೆ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿ ಇದೀಗ ಅವರನ್ನು ವಶಕ್ಕೆ ಪಡೆದಿದ್ದಾರೆ. ರಾಜ್ಯ ಸರ್ಕಾರ ಮುಡಾ ಅಕ್ರಮ ಪ್ರಕರಣದಲ್ಲಿ ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್ ವಿರುದ್ಧ ತನಿಖೆ ನಡೆಸಲು ಹಸಿರು ನಿಶಾನೆ ನೀಡಿತ್ತು.

GT Dinesh Kumar
ಕ್ರೈಸ್ತ ಬ್ರಾಹ್ಮಣ, ಕ್ರೈಸ್ತ ಒಕ್ಕಲಿಗ, ಕ್ರೈಸ್ತ ಕುರುಬ Hindu ಉಪಜಾತಿ ಸೇರ್ಪಡೆ ವಿರುದ್ಧ ರಾಜ್ಯಪಾಲರಿಗೆ BJP ದೂರು!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com