ಚಾಮರಾಜನಗರ: ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಲಾರಿಗೆ ಟೊಮ್ಯಾಟೊ ತುಂಬಿಕೊಂಡು ಹೋಗುತ್ತಿದ್ದ ಆಟೋ ಡಿಕ್ಕಿ ಹೊಡೆದಿದೆ. ಅಪಘಾತವಾಗುತ್ತಿದ್ದಂತೆ ರಸ್ತೆಗೆ ಟೊಮ್ಯಾಟೊ ಬಾಕ್ಸ್‌ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Representational image
ಸಾಂದರ್ಭಿಕ ಚಿತ್ರ
Updated on

ಚಾಮರಾಜನಗರ: ಬೆಳ್ಳಂಬೆಳಗ್ಗೆ ಭೀಕರ ಅಪಘಾತಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ.

ಕೊಳ್ಳೇಗಾಲದ ಯಳಂದೂರು ಮಾರ್ಗಮಧ್ಯದ ಎಳೆ ಪಿಳ್ಳಾರಿ ದೇವಸ್ಥಾನದ ಬಳಿ ಘಟನೆ ನಡೆದಿದೆ. ಸುಮಂತ್ (22), ನಿತಿನ್ ಕುಮಾರ್ (16) ಸಾವನ್ನಪ್ಪಿದ ದುರ್ದೈವಿಗಳು.

ಲಾರಿಗೆ ಟೊಮ್ಯಾಟೊ ತುಂಬಿಕೊಂಡು ಹೋಗುತ್ತಿದ್ದ ಆಟೋ ಡಿಕ್ಕಿ ಹೊಡೆದಿದೆ. ಅಪಘಾತವಾಗುತ್ತಿದ್ದಂತೆ ರಸ್ತೆಗೆ ಟೊಮ್ಯಾಟೊ ಬಾಕ್ಸ್‌ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎಳೆಪಿಳ್ಳಾರಿ ಸಮೀಪದ ಜಮೀನಿನಿಂದ ಕಬ್ಬು ತುಂಬಿಸಿಕೊಂಡ ಲಾರಿ ಕಾರ್ಖಾನೆಗೆ ತೆರಳಲು ರಸ್ತೆಯ ಬಳಿ ನಿಂತಿತ್ತು. ಈ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಗೂಡ್ಸ್ ಅಟೋ ಹಿಂಬದಿಂದ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಈ ಸಂಬಂಧ ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Representational image
6 ತಿಂಗಳ ಗರ್ಭಿಣಿ ಪತ್ನಿ ಹತ್ಯೆಗೈದು ಅಪಘಾತ ಎಂದು ಬಿಂಬಿಸಿದ್ದ ಪತಿ ಸೇರಿ ಮೂವರ ಬಂಧನ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com