ಶಾರ್ಟ್ ಸರ್ಕ್ಯೂಟ್'ನಿಂದ ಮನೆಯಲ್ಲಿ ಅಗ್ನಿ ಅವಘಡ: ಒಂದೇ ಕುಟುಂಬದ ನಾಲ್ವರಿಗೆ ಗಾಯ

ಬೆಳಗಿನ ಜಾವ 2.40 ರ ಸುಮಾರಿಗೆ ನೆಲ ಮಹಡಿಯಲ್ಲಿರುವ ಮೀಟರ್ ಬೋರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೆಲ ಮಹಡಿಯಲ್ಲಿ ನಿಲ್ಲಿಸಿದ್ದ ಎರಡು ವಾಹನಗಳಿಗೂ ಬೆಂಕಿ ಹೊತ್ತಿಕೊಂಡಿದ್ದು, ಕಟ್ಟಡದಾದ್ಯಂತ ದಟ್ಟ ಹೊಗೆ ಆವರಿಸಿದೆ.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಢ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಗಾಯಗೊಂಡಿರುವ ಘಟನೆ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಕೃಷ್ಣಾ ಲೇಔಟ್‌ನ 3 ನೇ ಕ್ರಾಸ್ ಬಳಿಯ ಮೂರು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ಘಟನೆ ವೇಳೆ ಮೊದಲ ಮಹಡಿಯಲ್ಲಿ ಮಲಗಿದ್ದ ಶೀಲಾ (44), ಗೋಪಿ (49), ಅಭಿಷೇಕ್ (18) ಮತ್ತು ರಮ್ಯಾ (28) ಎಂಬ ನಾಲ್ವರು ಗಾಯಗೊಂಡಿದ್ದಾರೆ.

ಬೆಳಗಿನ ಜಾವ 2.40 ರ ಸುಮಾರಿಗೆ ನೆಲ ಮಹಡಿಯಲ್ಲಿರುವ ಮೀಟರ್ ಬೋರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೆಲ ಮಹಡಿಯಲ್ಲಿ ನಿಲ್ಲಿಸಿದ್ದ ಎರಡು ವಾಹನಗಳಿಗೂ ಬೆಂಕಿ ಹೊತ್ತಿಕೊಂಡಿದ್ದು, ಕಟ್ಟಡದಾದ್ಯಂತ ದಟ್ಟ ಹೊಗೆ ಆವರಿಸಿದೆ.

ಕೂಡಲೇ ನೆರೆಹೊರೆಯವರು, ಗೋಪಿ ಕುಟುಂಬದವರಿಗೆ ಕರೆ ಮಾಡಿ ಎಚ್ಚರಿಸಿದ್ದಾರೆ. ಆದರೆ, ಕೆಳಮಹಡಿಯಲ್ಲಿ ಮನೆಯಲ್ಲಿದ್ದ ಗೋಪಿ ಕುಟುಂಬದವರು, ಹೊಗೆ ಸೇವಿಸಿ ತೀವ್ರವಾಗಿ ಅಸ್ವಸ್ಥರಾಗಿದ್ದು, ಹೊರ ಬರಲಾಗದೆ ಸಂಕಷ್ಟಕ್ಕೆ ತುತ್ತಾಗಿದ್ದರು. ಈ ಘಟನೆ ಬಗ್ಗೆ ಮಾಹಿತಿ ಪಡೆದ ಬೇಗೂರು ಠಾಣೆ ಹೊಯ್ಸಳ ವಾಹನದ ಪೊಲೀಸರು, ತಕ್ಷಣವೇ ಘಟನಾ ಸ್ಥಳಕ್ಕೆ ತೆರಳಿ, ಸ್ಥಳೀಯರ ನೆರವಿನಿಂದ ಗೋಪಿ ಕುಟುಂಬವನ್ನು ರಕ್ಷಿಸಿದ್ದಾರೆ.

File photo
ತಿಗಳರಪೇಟೆ ಅಗ್ನಿ ಅವಘಡ: ದುರಂತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ, ಕಟ್ಟಡ ಮಾಲೀಕರ ಬಂಧನ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com