ಬೆಂಗಳೂರು ನಮ್ಮ ಮನೆ, ಬೇರೆ ಏರಿಯಾಗೆ ಸ್ಥಳಾಂತರ ಅಷ್ಟೇ: ಡಿಸಿಎಂ DKS ಎಚ್ಚರಿಕೆಗೆ ಬೆದರಿದ BlackBuck ಸಿಇಒ

ಉದ್ಯಮಿಗಳು ರಾಜ್ಯ ಬಿಟ್ಟು ಹೋಗುವುದಾದರೇ ಹೋಗಲಿ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇದೀಗ ಆನ್‌ಲೈನ್ ಟ್ರಕ್ಕಿಂಗ್ ಪ್ಲಾಟ್‌ಫಾರ್ಮ್ BlackBuck ಸಹ-ಸಂಸ್ಥಾಪಕ ಮತ್ತು ಸಿಇಒ ರಾಜೇಶ್ ಯಬಾಜಿ ಥಂಡ ಹೊಡೆದಿದ್ದಾರೆ.
DK Shivakumar-Rajesh Yabaji
ಡಿಕೆ ಶಿವಕುಮಾರ್-ರಾಜೇಶ್ ಯಬಾಜಿ
Updated on

ಬೆಂಗಳೂರು: ಉದ್ಯಮಿಗಳು ರಾಜ್ಯ ಬಿಟ್ಟು ಹೋಗುವುದಾದರೇ ಅವರನ್ನು ನಾವು ತಡೆಯಲ್ಲ. ಆದರೆ ಈ ಮೂಲಕ ಸರ್ಕಾರಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಖಡಕ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇದೀಗ ಆನ್‌ಲೈನ್ ಟ್ರಕ್ಕಿಂಗ್ ಪ್ಲಾಟ್‌ಫಾರ್ಮ್ BlackBuck ಸಹ-ಸಂಸ್ಥಾಪಕ ಮತ್ತು ಸಿಇಒ ರಾಜೇಶ್ ಯಬಾಜಿ (Rajesh Yabaji) ಥಂಡ ಹೊಡೆದಿದ್ದು ಬೆಂಗಳೂರು ನಮ್ಮ ತವರು, ನಾವು ಬೆಂಗಳೂರಿನಲ್ಲೇ ಬೇರೆ ಏರಿಯಾಗೆ ಸ್ಥಳಾಂತರವಾಗುತ್ತಿದ್ದೇವೆ ಅಷ್ಟೇ ಎಂದು ಹೇಳಿದ್ದಾರೆ.

ಹದಗೆಟ್ಟಿರುವ ರಸ್ತೆಗಳ ಪರಿಸ್ಥಿತಿ ಮತ್ತು ದೀರ್ಘ ಪ್ರಯಾಣದ ಸಮಯವನ್ನು ಉಲ್ಲೇಖಿಸಿ, ನಗರದ ಹೊರ ವರ್ತುಲ ರಸ್ತೆ (ORR) ಪ್ರದೇಶದಿಂದ ತನ್ನ ಕಚೇರಿಯನ್ನು ಸ್ಥಳಾಂತರಿಸಲು ನಿರ್ಧರಿಸಿರುವುದಾಗಿ ಬೆಂಗಳೂರು ಮೂಲದ ಲಾಜಿಸ್ಟಿಕ್ಸ್ ಸ್ಟಾರ್ಟ್ಅಪ್ ಬ್ಲ್ಯಾಕ್‌ಬಕ್ ನ ಸಿಇಒ ರಾಜೇಶ್ ಯಬಾಜಿ ಹೇಳಿದ್ದರು. ಅವರ ಈ ಹೇಳಿಕೆಯು ಬೆಂಗಳೂರಿನ ಮೂಲಸೌಕರ್ಯ ಸಮಸ್ಯೆಗಳ ಕುರಿತು ರಾಜ್ಯ ಸರ್ಕಾರದ ವಿರುದ್ಧ ದೊಡ್ಡ ಪ್ರಮಾಣದ ಚರ್ಚೆ ಮತ್ತು ಟೀಕೆಗೆ ಕಾರಣವಾಯಿತು. ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನ್‌ದಾಸ್ ಪೈ ಮತ್ತು ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ ಅವರಂತಹ ನಗರದಲ್ಲಿನ ಉದ್ಯಮದ ಅನುಭವಿಗಳು ರಾಜ್ಯ ಸರ್ಕಾರವನ್ನು ತಕ್ಷಣ ಮಧ್ಯಪ್ರವೇಶಿಸುವಂತೆ ಒತ್ತಾಯಿಸಿದರು.

"ಬ್ಲ್ಯಾಕ್‌ಬಕ್ 2015ರಲ್ಲಿ ಬೆಂಗಳೂರಿನಿಂದ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಕೋರಮಂಗಲದ ಸೋನಿ ಸಿಗ್ನಲ್ ಬಳಿಯ ಒಂದು ಸಣ್ಣ ಕಚೇರಿಯಿಂದ ಪ್ರಾರಂಭವಾಯಿತು. ನಾವು ನಮ್ಮ ಕಾರ್ಯಾಚರಣೆಗಳು ಮತ್ತು ತಂಡಗಳನ್ನು ವಿಸ್ತರಿಸುತ್ತಿದ್ದಂತೆ, ದೊಡ್ಡ ಕಚೇರಿ ಸ್ಥಳಗಳು ಮತ್ತು ಉತ್ತಮ ಸೂಕ್ತವಾದ ಸೌಲಭ್ಯಗಳಿಗಾಗಿ ನಾವು 2016ರಲ್ಲಿ ಬೆಳ್ಳಂದೂರು ಹೊರ ವರ್ತುಲ ರಸ್ತೆ (ORR) ಗೆ ಸ್ಥಳಾಂತರಗೊಂಡೆವು ಎಂದು ಯಬಾಜಿ 'X' ನಲ್ಲಿ ಪೋಸ್ಟ್ ಮಾಡಿದ್ದಾರೆ. ORR, ಬೆಂಗಳೂರು ನಗರ ಮತ್ತು ಕರ್ನಾಟಕ ರಾಜ್ಯವು ಕಂಪನಿಗೆ ಅಗತ್ಯವಿರುವ ಸಂಪನ್ಮೂಲಗಳು, ಮೂಲಸೌಕರ್ಯ, ಪ್ರತಿಭಾ ಸಾಂದ್ರತೆ ಮತ್ತು ಅವಕಾಶಗಳೊಂದಿಗೆ ದೊಡ್ಡ ಕಂಪನಿಯಾಗಿ ಬೆಳೆಯಲು ಅನುವು ಮಾಡಿಕೊಟ್ಟಿದೆ. ಇದು ಭಾರತದಾದ್ಯಂತ ಟ್ರಕ್ಕಿಂಗ್ ಪರಿಸರ ವ್ಯವಸ್ಥೆಯಾದ್ಯಂತ ಅರ್ಥಪೂರ್ಣ ಪರಿಣಾಮ ಬೀರುತ್ತದೆ ಎಂದು ಯಬಾಜಿ ಹೇಳಿದರು.

ಕಳೆದ ದಶಕದಲ್ಲಿ ಕರ್ನಾಟಕ ತಂತ್ರಜ್ಞಾನ-ಪರಿಸರ ವ್ಯವಸ್ಥೆಯ ಅತಿದೊಡ್ಡ ಫಲಾನುಭವಿಗಳಲ್ಲಿ ಒಂದಾಗಿ, ಬೆಂಗಳೂರು ನಗರವು ಎಲ್ಲವನ್ನೂ ಸಾಧಿಸಲು ಸಹಾಯ ಮಾಡಿದೆ. ಮುಂದೆ ನಮ್ಮ ಸಾಮರ್ಥ್ಯವನ್ನು ಅನ್ಲಾಕ್ ಮಾಡುವಲ್ಲಿ ಅದು ಹೇಗೆ ಪ್ರಮುಖ ಪಾತ್ರ ವಹಿಸುತ್ತದೆ ಎಂಬುದನ್ನು ಕಂಪನಿಯು ಸಂಪೂರ್ಣವಾಗಿ ಅರ್ಥಮಾಡಿಕೊಂಡಿದೆ ಎಂದು ಗಮನಿಸಿದರು. ಆದ್ದರಿಂದ, ನಾವು ನಗರದಿಂದ ಹೊರಗೆ ಸ್ಥಳಾಂತರಗೊಳ್ಳುವ ಬಗ್ಗೆ ಯೋಚಿಸುತ್ತಿದ್ದೇವೆ ಎಂದು ಕೆಲವು ಮಾಧ್ಯಮಗಳು ಮಾಡಿರುವ ಹೇಳಿಕೆಗಳನ್ನು ನಾವು ಏಕಪಕ್ಷೀಯವಾಗಿ ನಿರಾಕರಿಸುತ್ತೇವೆ. ನಾವು ನಗರದೊಳಗೆ ಬೇರೆ ಸ್ಥಳಕ್ಕೆ ಮಾತ್ರ ಸ್ಥಳಾಂತರಗೊಳ್ಳುತ್ತಿದ್ದೇವೆ. ಇದು ನಮ್ಮ ಉದ್ಯೋಗಿಗಳಿಗೆ ಸುಲಭ ಪ್ರಯಾಣಕ್ಕೆ ಅನುಕೂಲವಾಗುತ್ತದೆ ಎಂದು ಯಬಾಜಿ ಹೇಳಿದರು.

DK Shivakumar-Rajesh Yabaji
BlackBuck: 'ಹೋಗೋರನ್ನ ತಡೆಯಲ್ಲ.. ಸರ್ಕಾರವನ್ನ ಬ್ಲ್ಯಾಕ್‌ಮೇಲ್‌ ಮಾಡೋಕೆ ಬರಬೇಡಿ'; DCM DK Shivakumar

ನಾವು ಬೆಂಗಳೂರು ನಗರದಲ್ಲಿಯೇ ಮುಂದುವರಿಸುವುದಲ್ಲದೆ, ನಮ್ಮ ಹೆಜ್ಜೆಗುರುತನ್ನು ಇಲ್ಲಿ ವಿಸ್ತರಿಸುತ್ತೇವೆ ಎಂದು ಯಬಾಜಿ ಹೇಳಿದರು. ಬೆಂಗಳೂರು ನಮಗೆ ತವರಾಗಿದೆ. ನಮ್ಮ ಅಗತ್ಯತೆಗಳು ಮತ್ತು ಸಮಸ್ಯೆಗಳನ್ನು ಸಂಬಂಧಿತ ಸರ್ಕಾರಿ ಅಧಿಕಾರಿಗಳಿಗೆ ತಿಳಿಸಿ ಅವುಗಳನ್ನು ಪರಿಹರಿಸಲು ಬೆಂಬಲವನ್ನು ಪಡೆಯಲು ನಾವು ಬದ್ಧರಾಗಿರುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com