File photo
ಆಶಾ ಕಾರ್ಯಕರ್ತೆಯರು (ಸಂಗ್ರಹ ಚಿತ್ರ)

ಜಾತಿಗಣತಿ ಸಮೀಕ್ಷೆ 2025: ಆಶಾ ಕಾರ್ಯಕರ್ತರಿಗೆ 2,000 ರೂ ಗೌರವ ಧನ ಘೋಷಿಸಿದ ಸರ್ಕಾರ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 10 ರವರೆಗೆ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಲಿದೆ.
Published on

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ- 2025 ರಲ್ಲಿ ಭಾಗವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ 2,000 ರೂ. ಗೌರವ ಧನವನ್ನು ಬುಧವಾರ ಘೋಷಣೆ ಮಾಡಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 10 ರವರೆಗೆ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಲಿದೆ.

ಆರೋಗ್ಯ ಇಲಾಖೆಯಿಂದ ನೇಮಿಸಲ್ಪಟ್ಟ ಆಶಾ ಕಾರ್ಯಕರ್ತರು ಸುಮಾರು ಶೇ.90ರಷ್ಟು ಮನೆಗಳಿಗೆ ಭೇಟಿ ನೀಡಿ ಜಾಗೃತಿ ಅಭಿಯಾನ ಅಪ್ಲಿಕೇಶನ್ ಮೂಲಕ UHID ಸಂಖ್ಯೆಗಳು ಮತ್ತು ಮೊಬೈಲ್ ಫೋನ್ ಸಂಖ್ಯೆಗಳನ್ನು ಸಂಗ್ರಹಿಸಬೇಕಿದೆ.

ಈ ಕರ್ತವ್ಯವನ್ನು ನಿರ್ವಹಿಸುವ ಪ್ರತಿಯೊಬ್ಬ ಆಶಾ ಕಾರ್ಯಕರ್ತೆಗೆ 2,000 ರೂ. ಗೌರವ ಧನವನ್ನು ನೀಡಲಾಗುತ್ತದೆ, ಇದನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಬಜೆಟ್ ಶೀರ್ಷಿಕೆಯಡಿಯಲ್ಲಿ ಒದಗಿಸಲಾದ ಅನುದಾನದಿಂದ ಬಿಡುಗಡೆ ಮಾಡಲಾಗುತ್ತದೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಕ ವಿತರಿಸಲಾಗುತ್ತದೆ ಎಂದು ತಿಳಿಸಿದೆ.

File photo
ಗೌರವಧನ ನೀಡದ ಸರ್ಕಾರ: ಜಾತಿ ಗಣತಿ ಸಮೀಕ್ಷೆಗೆ ಆಶಾ ಕಾರ್ಯಕರ್ತೆಯರು ಬಹಿಷ್ಕಾರ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com