ಧರ್ಮಸ್ಥಳ ಪ್ರಕರಣ: ಎಸ್‌ಐಟಿ ಮುಂದೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಜರು, ಹೇಳಿಕೆ ದಾಖಲು

ಈಮಧ್ಯೆ, ಸೌಜನ್ಯ ಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಬೆಳ್ತಂಗಡಿ ಪೊಲೀಸರ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.
Curious onlookers gather at a bridge across the Nethravathi river (Representative Image)
ನೇತ್ರಾವತಿ ನದಿ ಬಳಿ ಜಮಾಯಿಸಿರುವ ಜನರು (ಪ್ರಾತಿನಿಧಿಕ ಚಿತ್ರ)
Updated on

ಮಂಗಳೂರು: ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಮತ್ತು ಮಾಜಿ ಅಧ್ಯಕ್ಷ ಕೇಶವಗೌಡ ಬೆಳಲು ಶುಕ್ರವಾರ ಹೇಳಿಕೆ ದಾಖಲಿಸಿದ್ದಾರೆ.

ದೇವಾಲಯ ಆಡಳಿತವನ್ನು ಬೆಂಬಲಿಸಿ ಹಲವಾರು ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಮತ್ತು ಧರ್ಮಸ್ಥಳ ಗ್ರಾಮದಲ್ಲಿನ ಸಾಮೂಹಿಕ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಆರೋಪಿಸಿದ್ದಕ್ಕಾಗಿ ಎಸ್‌ಐಟಿ ಅವರಿಗೆ ನೋಟಿಸ್ ನೀಡಿತ್ತು.

ಈಮಧ್ಯೆ, ಸೌಜನ್ಯ ಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಬೆಳ್ತಂಗಡಿ ಪೊಲೀಸರ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 26 ರಂದು, ನ್ಯಾಯಾಲಯದ ವಾರಂಟ್ ಪಡೆದು ಎಸ್‌ಐಟಿ ಅಧಿಕಾರಿಗಳು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿವಾಸದಲ್ಲಿ ಶೋಧ ನಡೆಸಿದ್ದರು. ಈ ಕಾರ್ಯಾಚರಣೆಯ ವೇಳೆ, ಶಸ್ತ್ರಾಸ್ತ್ರಗಳು ಮತ್ತು ಬಂದೂಕನ್ನು ವಶಪಡಿಸಿಕೊಳ್ಳಲಾಯಿತು. ತಿಮರೋಡಿ ಅವರು ಅವುಗಳನ್ನು ಅಕ್ರಮವಾಗಿ ಹೊಂದಿದ್ದರು ಎಂದು ಆರೋಪಿಸಲಾಗಿದೆ. ನಂತರ, ಎಸ್‌ಐಟಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು. ಶುಕ್ರವಾರ ಅಧಿಕಾರಿಗಳು ಅವರ ಮನೆಗೆ ಹೋದಾಗ, ಅವರು ಇರಲಿಲ್ಲ. ಹೀಗಾಗಿ, ಅವರ ಮನೆಯ ಮುಂದೆ ನೋಟಿಸ್ ಅಂಟಿಸಲಾಗಿದೆ.

Curious onlookers gather at a bridge across the Nethravathi river (Representative Image)
ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡ ಬಳಿ ಅಸ್ಥಿಪಂಜರಗಳ ಅವಶೇಷ ಪತ್ತೆ!

ಈ ಮಧ್ಯೆ, ಧರ್ಮಸ್ಥಳ ಗ್ರಾಮದ ಸಿಕೆ ಚಂದ್ರ ಅವರು ಸೌಜನ್ಯ ಅವರ ತಾಯಿ ಕುಸುಮಾವತಿ ವಿರುದ್ಧ ಎಸ್‌ಐಟಿಗೆ ದೂರು ನೀಡಿದ್ದಾರೆ. ಕುಸುಮಾ ಅವರು ತಮ್ಮ ಪತಿಯನ್ನು 'ಸ್ಲೋ ಪಾಯ್ಸನ್'ನಿಂದ ಕೊಲ್ಲಲಾಗಿದೆ ಎಂದು ಕೆಲವು ಯೂಟ್ಯೂಬ್ ಚಾನೆಲ್‌ಗಳಿಗೆ ಸುಳ್ಳು ಮತ್ತು ದಾರಿತಪ್ಪಿಸುವ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

'ತಮ್ಮ ಮಗಳ ಸಾವಿನಲ್ಲಿ ಹೆಸರಿಸಿದ್ದ ವ್ಯಕ್ತಿಗಳನ್ನು ಮತ್ತು ಧರ್ಮಸ್ಥಳದ ಇತರರನ್ನು ಆಧಾರರಹಿತ ಹೇಳಿಕೆಗಳೊಂದಿಗೆ ಪರೋಕ್ಷವಾಗಿ ಜೋಡಿಸಲು ಪ್ರಯತ್ನಿಸಿದರು' ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com