Pavagada: ಪತಿ ವರದಕ್ಷಿಣೆ ಕಿರುಕುಳ, ಇಬ್ಬರು ಪುಟ್ಟ ಮಕ್ಕಳ ಕೊಂದು ತಾಯಿ ಆತ್ಮಹತ್ಯೆ!

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪನಕೆರೆಯಲ್ಲಿ ಈ ದುರಂತ ಘಟನೆ ನಡೆದಿದ್ದು, ಇಬ್ಬರು ಮುದ್ದು ಮಕ್ಕಳನ್ನು ಕೊಂದ ತಾಯಿ ತಾನೂ ನೇಣಿಗೆ ಶರಣಾಗಿದ್ದಾರೆ.
Stop Suicide (file pic)
ಸಾಂಕೇತಿಕ ಚಿತ್ರonline desk
Updated on

ತುಮಕೂರು: ರಾಜ್ಯದಲ್ಲಿ ಮತ್ತೊಂದು ಭೀಕರ ದುರಂತ ಸಂಭವಿಸಿದ್ದು, ಪತಿಯ ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಪತ್ನಿ ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಕೊಂದು ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪನಕೆರೆಯಲ್ಲಿ ಈ ದುರಂತ ಘಟನೆ ನಡೆದಿದ್ದು, ಇಬ್ಬರು ಮುದ್ದು ಮಕ್ಕಳನ್ನು ಕೊಂದ ತಾಯಿ ತಾನೂ ನೇಣಿಗೆ ಶರಣಾಗಿದ್ದಾರೆ.

23 ವರ್ಷದ ಸರಿತಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಆತ್ಮಹತ್ಯೆಗೂ (Suicide) ಮುನ್ನ 4 ವರ್ಷದ ಮಗ ಕೌಶಿಕ್ ಹಾಗೂ 2 ವರ್ಷದ ಮಗು ಯುಕ್ತಿಯನ್ನು ಕೊಲೆ ಮಾಡಿದ್ದಾರೆ. ಬಳಿಕ ತಾವೂ ಸಾವನ್ನಪ್ಪಿದ್ದಾರೆ.

ಈ ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇಂದು ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಸರಿತಾ ತನ್ನ ಇಬ್ಬರು ಮಕ್ಕಳ ಹತ್ಯೆಗೈದಿದ್ದು, ಬಳಿಕ ತಾನು ನೇಣಿಗೆ ಶರಣಾಗಿದ್ದಾರೆ.

Stop Suicide (file pic)
ರಾತ್ರೋರಾತ್ರಿ ರೌಡಿಗಳ ಬೆಚ್ಚಿ ಬೀಳಿಸಿದ Bengaluru police, 1,478 ರೌಡಿಗಳ ಮನೆ ಮೇಲೆ ದಾಳಿ

ಏನಿದು ಘಟನೆ?

ಮೂಲತಃ ಕಡಪನಕೆರೆಯ ಸರಿತಾ ತನ್ನದೇ ಊರಿನ ಸಂತೋಷ್ ಜೊತೆ ವಿವಾಹವಾಗಿದ್ದರು. ಕಳೆದ 6 ವರ್ಷಗಳ ಹಿಂದೆ ಸಂತೋಷ್ ಜೊತೆ ವಿವಾಹವಾಗಿತ್ತು. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಸಂತೋಷ್ ಈ ಘಟನೆ ನಡೆದ ವೇಳೆ ಮನೆಯಲ್ಲಿರಲಿಲ್ಲ.

ಮದುವೆಯಾದಾಗಿನಿಂದ ಪತಿ ಹಾಗೂ ಆತನ ಕುಟುಂಬದಿಂದ ಸರಿತಾ ಅವರಿಗೆ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ವರದಕ್ಷಿಣೆ ಕಿರುಕುಳ ನೀಡಿದ್ದ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ತಾಯಿ ಸರಿತಾ ನೊಂದು ಮಕ್ಕಳ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com