ಮೈಸೂರು: ಪಂಚಭೂತಗಳಲ್ಲಿ ಸಾಹಿತಿ ಎಸ್‌.ಎಲ್‌ ಭೈರಪ್ಪ ಲೀನ; ಸಕಲ ಸರ್ಕಾರಿ ಗೌರವಗಳೊಂದಿಗೆ `ಅಕ್ಷರ ಮಾಂತ್ರಿಕ' ನ ಅಂತ್ಯಕ್ರಿಯೆ

ಭೈರಪ್ಪನವರ ಇಚ್ಛೆಯಂತೆ ಅಂತ್ಯ ಸಂಸ್ಕಾರದಲ್ಲಿ ಉದಯೋನ್ಮುಖ ಲೇಖಕಿ ಸಹನಾ ವಿಜಯ್‌ಕುಮಾರ್ ಸಹ ಉಪಸ್ಥಿತರಿದ್ದರು. ಅಂತಿಮ ವಿಧಿವಿಧಾನಗಳ ಬಳಿಕ ಪುತ್ರರ ಜೊತೆಗೆ ಸಹನಾ ವಿಜಯ್‌ಕುಮಾರ್ ಭೈರಪ್ಪ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.
SL Bhyrappa Last Rites
ಎಸ್ ಎಲ್ ಭೈರಪ್ಪ ಅಂತ್ಯಕ್ರಿಯೆ
Updated on

ಮೈಸೂರು: ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ 12:30ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ನಡೆಯಿತು.

ಪತ್ನಿ ಸರಸ್ವತಿ, ಕುಟುಂಬಸ್ಥರು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವು ಗಣ್ಯರು ಸರಸ್ವತಿ ಪುತ್ರನಿಗೆ ಕಣ್ಣೀರಿನ ವಿದಾಯ ಹೇಳಿದರು.

ಪುತ್ರರಾದ ರವಿಶಂಕರ್‌, ಉದಯ್‌ ಶಂಕರ್‌ ಅಂತಿಮ ವಿಧಿ ವಿಧಾನ ನೆರವೇರಿಸಿದರು, ಭೈರಪ್ಪನವರ ಇಚ್ಛೆಯಂತೆ ಅಂತ್ಯ ಸಂಸ್ಕಾರದಲ್ಲಿ ಉದಯೋನ್ಮುಖ ಲೇಖಕಿ ಸಹನಾ ವಿಜಯ್‌ಕುಮಾರ್ ಸಹ ಉಪಸ್ಥಿತರಿದ್ದರು. ಅಂತಿಮ ವಿಧಿವಿಧಾನಗಳ ಬಳಿಕ ಪುತ್ರರ ಜೊತೆಗೆ ಸಹನಾ ವಿಜಯ್‌ಕುಮಾರ್ ಭೈರಪ್ಪ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಎಸ್ ಎಲ್ ಭೈರಪ್ಪ ಪಂಚಭೂತಗಳಲ್ಲಿ ಲೀನವಾದರು.

ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಭೈರಪ್ಪ ಅವರ ಅಂತ್ಯ ಸಂಸ್ಕಾರ ನಡೆಯಿತು. ಪೊಲೀಸ್ ಅಧಿಕಾರಿ ಶಿವಾನಂದ ನೇತೃತ್ವದ ಹತ್ತು ಜನರ ತಂಡವು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿತು.

SL Bhyrappa Last Rites
ಯುವಜನರಲ್ಲಿ ಓದಿನ ಹುಚ್ಚು ಹಿಡಿಸಿದ್ದ ಸಾಹಿತಿ ದಿಗ್ಗಜ SL Bhyrappa: ಹಲವು ಕೃತಿಗಳು ದಾಖಲೆ!

ಅದಕ್ಕೂ ಮೊದಲು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಶಾಸಕ ಟಿ.ಎಸ್.ಶ್ರೀವತ್ಸ ಮುಂತಾದವರು ಅಂತಿಮ ನಮನ ಸಲ್ಲಿಸಿದರು. ರಾಷ್ಟ್ರಧ್ವಜವನ್ನು ಪ್ರಹ್ಲಾದ್ ಜೋಷಿ ಹಾಗೂ ಡಾ.ಎಚ್.ಸಿ.ಮಹದೇವಪ್ಪ ಅವರು ಭೈರಪ್ಪ ಮಕ್ಕಳಾದ ರವಿಶಂಕರ್ ಹಾಗೂ ಉದಯ್ ಶಂಕರ್ ಅವರಿಗೆ ಹಸ್ತಾಂತರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com