ಲೈಂಗಿಕ ದೌರ್ಜನ್ಯ, ಬೆದರಿಕೆ ಪ್ರಕರಣ: ಹಿಂದೂ ಜಾಗರಣ ವೇದಿಕೆ ಮುಖಂಡನ ವಿರುದ್ಧ ಎಫ್‌ಐಆರ್!

ಲಿಖಿತ ದೂರಿನ ಆಧಾರದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಪೊಲೀಸ್ ಠಾಣೆಯಲ್ಲಿ ಶನಿವಾರ ಎಫ್‌ಐಆರ್ ದಾಖಲಿಸಲಾಗಿದೆ.
Representative Image
ಪೊಲೀಸ್ (ಸಾಂಕೇತಿಕ ಚಿತ್ರ)online desk
Updated on

ಮಂಗಳೂರು: ಖಾಸಗಿ ಚಿತ್ರಗಳನ್ನು ಇಟ್ಟುಕೊಂಡು, ಬೆದರಿಕೆಯೊಡ್ಡಿ ತನ್ನ ಮೇಲೆ ಪದೇ ಪದೆ ಕಿರುಕುಳ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ ನಂತರ, ಹಿಂದೂ ಜಾಗರಣ ವೇದಿಕೆ ನಾಯಕ ಸಮಿತ್ ರಾಜ್ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಲಿಖಿತ ದೂರಿನ ಆಧಾರದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಪೊಲೀಸ್ ಠಾಣೆಯಲ್ಲಿ ಶನಿವಾರ ಎಫ್‌ಐಆರ್ ದಾಖಲಿಸಲಾಗಿದೆ.

ಪೊಲೀಸರ ಪ್ರಕಾರ, ರಾಜ್ ಕಳೆದ 15 ದಿನಗಳಿಂದ ತನಗೆ ಕಿರುಕುಳ ನೀಡುತ್ತಿದ್ದಾನೆ. ಛಾಯಾಚಿತ್ರಗಳನ್ನು ಬಳಸಿ ಬೆದರಿಸುತ್ತಿದ್ದಾನೆ ಮತ್ತು ವಿರೋಧಿಸಿದಾಗ 'ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ' ಎಂದು ಮಹಿಳೆ ಆರೋಪಿಸಿದ್ದಾರೆ.

'ದೂರು ಮತ್ತು ಪ್ರಾಥಮಿಕ ಸಾಕ್ಷ್ಯಗಳ ಆಧಾರದ ಮೇಲೆ, ಕಾನೂನಿನ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ' ಎಂದು ಬಜ್ಪೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಯನ್ನು ಇನ್ನೂ ಬಂಧಿಸಲಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com