ಅತ್ಯಾಚಾರ, ವಂಚನೆ ಪ್ರಕರಣ; ಡಿಎನ್ಎ ಪರೀಕ್ಷೆಯಲ್ಲಿ ಸಿಕ್ಕಿಬಿದ್ದ ಪುತ್ತೂರು ಬಿಜೆಪಿ ನಾಯಕನ ಪುತ್ರ!

ಡಿಎನ್ಎ ವರದಿಯು ಪ್ರಾಸಿಕ್ಯೂಷನ್ ಪ್ರಕರಣವನ್ನು ಗಮನಾರ್ಹವಾಗಿ ಬಲಪಡಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
DNA test confirms BJP leader's son Krishna J Rao fathered child in Puttur rape, cheating case.
ಬಿಜೆಪಿ ನಾಯಕನ ಪುತ್ರ ಕೃಷ್ಣ ಜೆ ರಾವ್
Updated on

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಗರ್ಭಿಣಿಯಾದ ಬಳಿಕ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ಡಿಎನ್ಎ ಪರೀಕ್ಷೆಯ ವರದಿ ಲಭ್ಯವಾಗಿದ್ದು, ಬಿಜೆಪಿ ನಾಯಕ ಮತ್ತು ಪುತ್ತೂರು ನಗರ ಪುರಸಭೆ ಸದಸ್ಯ ಪಿಜಿ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ ರಾವ್ ಅವರೇ ಮಗುವಿನ ತಂದೆ ಎಂಬುದು ದೃಢಪಟ್ಟಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ಕೃಷ್ಣ ರಾವ್, ಮದುವೆಯಾಗುವುದಾಗಿ ಭರವಸೆ ನೀಡಿ ಮಾಜಿ ಸಹಪಾಠಿ ಮೇಲೆ 'ಲೈಂಗಿಕ ದೌರ್ಜನ್ಯ' ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ವರ್ಷ ಜೂನ್ 28 ರಂದು ಯುವತಿ ಮಗುವಿಗೆ ಜನ್ಮ ನೀಡಿದ್ದರು.

ಪ್ರಕರಣವು ವಿಚಾರಣೆಗೆ ಹೋದಾಗ ಡಿಎನ್‌ಎ ದೃಢೀಕರಣವು ನಿರ್ಣಾಯಕ ಸಾಕ್ಷಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ನಿಬಂಧನೆಗಳ ಅಡಿಯಲ್ಲಿ ರಾವ್ ಅವರನ್ನು ಪದೇ ಪದೆ ಅತ್ಯಾಚಾರ ಮತ್ತು ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ಲೈಂಗಿಕ ಸಂಭೋಗ ನಡೆಸಿದ್ದಕ್ಕೆ ಸಂಬಂಧಿಸಿದಂತೆ ಜುಲೈ 5 ರಂದು ಬಂಧಿಸಲಾಯಿತು.

ಪೊಲೀಸರಿಂದ ತಪ್ಪಿಸಿಕೊಳ್ಳಲು ರಾವ್‌ಗೆ ಸಹಾಯ ಮಾಡಿದ ಆರೋಪದ ಮೇಲೆ ಅವರ ತಂದೆಯನ್ನು ಸಹ ಬಂಧಿಸಲಾಯಿತು.

DNA test confirms BJP leader's son Krishna J Rao fathered child in Puttur rape, cheating case.
ಲೈಂಗಿಕ ದೌರ್ಜನ್ಯ, ಬೆದರಿಕೆ ಪ್ರಕರಣ: ಹಿಂದೂ ಜಾಗರಣ ವೇದಿಕೆ ಮುಖಂಡನ ವಿರುದ್ಧ ಎಫ್‌ಐಆರ್!

ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 3 ರಂದು ಕೃಷ್ಣ ರಾವ್ ಅವರಿಗೆ ಜಾಮೀನು ನೀಡಿತು. ಇಬ್ಬರ ಸಂಬಂಧವು 'ಒಪ್ಪಿ ಮಾಡಿದಂತೆ ಕಂಡುಬಂದಿದೆ' ಎಂದು ಗಮನಿಸಿದ ನ್ಯಾಯಾಲಯ, ಆರೋಪಗಳನ್ನು ವಿಚಾರಣೆಯಲ್ಲಿ ಸಂಪೂರ್ಣವಾಗಿ ಪರೀಕ್ಷಿಸಲಾಗುವುದು ಎಂದು ಹೇಳಿತು.

ತಮ್ಮ ತನಿಖೆಯನ್ನು ಪೂರ್ಣಗೊಳಿಸಿದ್ದು, ಆರೋಪಪಟ್ಟಿ ಸಲ್ಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಡಿಎನ್ಎ ವರದಿಯು ಪ್ರಾಸಿಕ್ಯೂಷನ್ ಪ್ರಕರಣವನ್ನು ಗಮನಾರ್ಹವಾಗಿ ಬಲಪಡಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೂರಿನ ಪ್ರಕಾರ, ರಾವ್ ಮತ್ತು ಸಂತ್ರಸ್ತೆ ಶಾಲಾ ದಿನಗಳಿಂದಲೂ ಪರಸ್ಪರ ಪರಿಚಿತರಾಗಿದ್ದರು. 2024ರ ಕೊನೆಯಲ್ಲಿ ಮದುವೆಯಾಗುವುದಾಗಿ ಭರವಸೆ ನೀಡಿದ ನಂತರ ಆತ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿದನೆಂದು ಆಕೆ ಆರೋಪಿಸಿದ್ದಾಳೆ.

ತಾನು ಗರ್ಭಿಣಿಯಾದಾಗ, ಆರಂಭದಲ್ಲಿ ಆತನ ಕುಟುಂಬವು ಮದುವೆಗೆ ಒಪ್ಪಿಗೆ ನೀಡಿತು. ಆದರೆ, ನಂತರ ನಿರಾಕರಿಸಿತು. ಇದರಿಂದಾಗಿ ಸಂತ್ರಸ್ತೆಯ ಕುಟುಂಬವು ಪೊಲೀಸರಿಗೆ ದೂರು ನೀಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com