ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 3 ವರ್ಷ ವಯೋಮಿತಿ ಸಡಿಲಿಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ನಡೆಸುವ ನೇರ ನೇಮಕಾತಿಯಲ್ಲಿ ಭಾಗವಹಿಸುವ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೂ ಒಂದು ಬಾರಿಗೆ ಅನ್ವಯವಾಗುವಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ.
Karnataka Govt orders one-time, 3 years age relaxation for recruitment
ವಿಧಾನಸೌಧ
Updated on

ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ದಸರಾ ಬಂಪರ್ ಗಿಫ್ಟ್ ನೀಡಿದ್ದು, ಸಿವಿಲ್ ಸೇವಾ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಮೂರು ವರ್ಷ ವಯೋಮಿತಿ ಸಡಿಲಿಕೆ ಮಾಡಿ ಸೋಮವಾರ ಮಹತ್ವದ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ನಡೆಸುವ ನೇರ ನೇಮಕಾತಿಯಲ್ಲಿ ಭಾಗವಹಿಸುವ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೂ ಒಂದು ಬಾರಿಗೆ ಅನ್ವಯವಾಗುವಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.

ಇತ್ತೀಚೆಗೆ ಧಾರವಾಡದಲ್ಲಿ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳು 5 ವರ್ಷ ವಯೋಮಿತಿ ಸಡಿಲಿಕೆ ಹಾಗೂ ಪಿಎಸ್‌ಐ/ಕಾನ್ಸಟೇಬಲ್ ಹುದ್ದೆಗಳಿಗೆ ನೇಮಕಾತಿ ಆದೇಶಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದರು. ಇದರ ಮಧ್ಯೆ ಇದೇ ತಿಂಗಳ 6ರಂದು ರಾಜ್ಯ ಸರ್ಕಾರ ಸಿವಿಲ್ ಹುದ್ದೆಗಳ ನೇರ ನೇಮಕಾತಿಗಳಿಗೆ 2 ವರ್ಷ ಸಡಿಲಿಕೆ ಮಾಡಿ ಆದೇಶಿಸಿತ್ತು. ಇದೀಗ 3 ವರ್ಷಗಳ ಸಡಿಲಿಕೆ ಮಾಡಿದೆ.

ಸರ್ಕಾರದ ಆದೇಶ
ಸರ್ಕಾರದ ಆದೇಶ

ಈ ವಯೋಮಿತಿ ಸಡಿಲಿಕೆ 2027 ರ ಡಿಸೆಂಬರ್ 31ರೊಳಗೆ ಸರ್ಕಾರ ಹೊರಡಿಸುವ ಎಲ್ಲ ನೇರ ನೇಮಕಾತಿಗಳಿಗೂ ಒಂದು ಬಾರಿ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೂ ಅನ್ವಯಿಸಲಿದೆ.

ವಯೋಮಿತಿ ಸಡಿಲಿಕೆ ಎಷ್ಟು?

ಸಾಮಾನ್ಯ ವರ್ಗ – 35 ವರ್ಷದಿಂದ 38 ವರ್ಷ

ಒಬಿಸಿ – 38 ವರ್ಷದಿಂದ 41 ವರ್ಷ

ಎಸ್‌ಸಿ/ಎಸ್‌ಟಿ/ಪ್ರವರ್ಗ-1 – 40 ವರ್ಷದಿಂದ 43 ವರ್ಷ

Karnataka Govt orders one-time, 3 years age relaxation for recruitment
ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ ಖಂಡಿಸಿ ಸಚಿವ ಸುಧಾಕರ್‌ ಮನೆಗೆ ಎಬಿವಿಪಿ ಮುತ್ತಿಗೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com