ಚಾರ್ಜ್ ಶೀಟ್ ಸಲ್ಲಿಕೆಗೆ 75,000 ರೂ. ಬೇಡಿಕೆ ಅಮಾನವೀಯ ಕ್ರಮ: PSI ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ವಿಶೇಷ ಕೋರ್ಟ್

ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿನ ಅಪರಾಧಗಳು ಸಂತ್ರಸ್ತರ ಮೇಲೆ ಮಾತ್ರವಲ್ಲದೆ ಸಮಾಜದ ಮೇಲೂ ಗಂಭೀರ ಪರಿಣಾಮ ಬೀರುತ್ತವೆ. ಈ ಭ್ರಷ್ಟಾಚಾರದ ಪಿಡುಗು ಸಾಮಾನ್ಯ ಜನರ ಜೀವನದ ಜೊತೆ ಆಟವಾಡುತ್ತಿದೆ ಮತ್ತು ನಮ್ಮಂತಹ ಬೆಳೆಯುತ್ತಿರುವ ದೇಶಕ್ಕೆ ಸವಾಲಾಗಿ ಪರಿಣಮಿಸಿದೆ.
Representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಲೋಕಾಯುಕ್ತ ಪೊಲೀಸರು ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 3 ರಿಂದ ತಲೆಮರೆಸಿಕೊಂಡಿದ್ದ ದೇವನಹಳ್ಳಿ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಜಗದೇವಿ ಭೀಮಾಶಂಕರ್ ಸಾಲೋಟಗಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ವಿಶೇಷ ನ್ಯಾಯಾಲಯ ನಿರಾಕರಿಸಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಅಪ್ರಾಪ್ತ ವಯಸ್ಕ ಬಾಲಕಿಯ ತಾಯಿಯಿಂದ ಆರೋಪಿಯ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಅವರ ಸಹೋದ್ಯೋಗಿ 50,000 ರೂಪಾಯಿ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ನಂತರ ಪ್ರಕರಣ ದಾಖಲಿಸಲಾಗಿದೆ.

ಸಂತ್ರಸ್ತೆಯ ತಾಯಿಯಿಂದ ಅಕ್ರಮ ಲಂಚ ನಿರೀಕ್ಷಿಸುವುದು ನಿಜಕ್ಕೂ ಅಮಾನವೀಯ ಮತ್ತು ಕ್ಷಮಿಸಲಾಗದು. ಈ ಕ್ರಮವು ಸಂಪೂರ್ಣವಾಗಿ ಅಸಹನೀಯ ಮತ್ತು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಅವರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.

ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿನ ಅಪರಾಧಗಳು ಸಂತ್ರಸ್ತರ ಮೇಲೆ ಮಾತ್ರವಲ್ಲದೆ ಸಮಾಜದ ಮೇಲೂ ಗಂಭೀರ ಪರಿಣಾಮ ಬೀರುತ್ತವೆ. ಈ ಭ್ರಷ್ಟಾಚಾರದ ಪಿಡುಗು ಸಾಮಾನ್ಯ ಜನರ ಜೀವನದ ಜೊತೆ ಆಟವಾಡುತ್ತಿದೆ ಮತ್ತು ನಮ್ಮಂತಹ ಬೆಳೆಯುತ್ತಿರುವ ದೇಶಕ್ಕೆ ಸವಾಲಾಗಿ ಪರಿಣಮಿಸಿದೆ.

Representational image
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ: ಹೈಕೋರ್ಟ್‌ಗೆ ಪ್ರಜ್ವಲ್‌ ರೇವಣ್ಣ ಮೇಲ್ಮನವಿ

ಸಮಾಜದ ಯೋಗಕ್ಷೇಮಕ್ಕಾಗಿ ಹೋರಾಡಬೇಕಾದ ಮತ್ತು ಸಾಮಾನ್ಯ ಜನರನ್ನು ರಕ್ಷಿಸಬೇಕಾದ ಜಗದೇವಿಯಂತಹ ಪೊಲೀಸ್ ಅಧಿಕಾರಿಗಳೇ ಭ್ರಷ್ಟಾಚಾರದಲ್ಲಿ ತೊಡಗುವುದು ಅತ್ಯಂತ ದುರದೃಷ್ಟಕರ ಮತ್ತು ಅನಿರೀಕ್ಷಿತವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಆದೇಶದ ಪ್ರಕಾರ, ಕಳೆದ ಜುಲೈ 30ರಂದು ಜಗದೇವಿ 10 ವರ್ಷದ ಬಾಲಕನ ತಾಯಿಯಿಂದ ವಾಹನ ಬಾಡಿಗೆಗಾಗಿ 25,000 ರೂಪಾಯಿ ಬೇಡಿಕೆ ಇಟ್ಟಿದ್ದರು, ಅದನ್ನು ಆರೋಪಿಯನ್ನು ಪತ್ತೆಹಚ್ಚಲು ಮತ್ತು ಇತರ ಖರ್ಚುಗಳಿಗೆ ವ್ಯವಸ್ಥೆ ಮಾಡಿದ್ದರು. ಆರೋಪಪಟ್ಟಿ ಸಲ್ಲಿಸಲು ಅವರು 1 ಲಕ್ಷ ರೂಪಾಯಿ ಅಕ್ರಮ ಪರಿಹಾರವನ್ನು ಕೋರಿದರು.

ದೂರುದಾರರು ಕಡಿಮೆ ಹಣ ನೀಡುತ್ತೇನೆ ಎಂದಾಗ ಜಗದೇವಿ 75,000 ರೂಪಾಯಿಗೆ ಇಳಿಸಿ 5 ಸಾವಿರ ಮುಂಗಡವಾಗಿ ಪಡೆದರು. ಸೆಪ್ಟೆಂಬರ್ 2 ರಂದು, ಜಗದೇವಿ ಆ ಮೊತ್ತವನ್ನು ಪಾವತಿಸುವಂತೆ ಒತ್ತಾಯಿಸಿದರು. ತನಿಖೆಯಲ್ಲಿ ಜಗದೇವಿಗೆ ಸಹಾಯ ಮಾಡುತ್ತಿದ್ದ ಪೊಲೀಸ್ ಕಾನ್‌ಸ್ಟೆಬಲ್ ಮಂಜುನಾಥ್ ಸಿ, ಜಗದೇವಿಯನ್ನು 70,000 ರೂಪಾಯಿ ಬದಲಿಗೆ 20,000 ರೂಪಾಯಿಗೆ ಮನವೊಲಿಸುವುದಾಗಿ ಮಹಿಳೆಗೆ ಭರವಸೆ ನೀಡಿದರು,

ಸೆಪ್ಟೆಂಬರ್ 3 ರಂದು, ಪೊಲೀಸ್ ಠಾಣೆಯಲ್ಲಿ ಬರಹಗಾರನಾಗಿದ್ದ ಮೂರನೇ ಆರೋಪಿ ಅಮರೇಶ್ ಎಂಬಾತನನ್ನು ಜಗದೇವಿಯ ಸೂಚನೆಯ ಮೇರೆಗೆ, ಲೋಕಾಯುಕ್ತ ಪೊಲೀಸರು ಬಂಧಿಸಿ, ಮಹಿಳೆಯಿಂದ 50,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಧಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com