ರಾಜ್ಯ ಸರ್ಕಾರದ ದಿನಗೂಲಿ ನೌಕರರಿಗೆ 5 ಲಕ್ಷ ರೂ ವರೆಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿ!

ಈ ಹಿಂದೆ 2025ರ ಜೂನ್ 24ರಂದು ಹೊರಡಿಸಲಾಗಿದ್ದ ಆದೇಶದನ್ವಯ, ಸುಮಾರು 3 ಲಕ್ಷ ಗುತ್ತಿಗೆ ಮತ್ತು ಹೊರಗುತ್ತಿಗೆ ಹಾಗೂ ಗೌರವ ಧನದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು.
Casua Image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅರ್ಹ ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ 5 ಲಕ್ಷ ರೂ.ವರೆಗಿನ ನಗದು ರಹಿತ ಆರೋಗ್ಯ ಯೋಜನೆ ವಿಸ್ತರಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಈ ಹಿಂದೆ 2025ರ ಜೂನ್ 24ರಂದು ಹೊರಡಿಸಲಾಗಿದ್ದ ಆದೇಶದನ್ವಯ, ಸುಮಾರು 3 ಲಕ್ಷ ಗುತ್ತಿಗೆ ಮತ್ತು ಹೊರಗುತ್ತಿಗೆ ಹಾಗೂ ಗೌರವ ಧನದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು.

ಈ ಸೌಲಭ್ಯವನ್ನು ತಮಗೂ ನೀಡಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಸಂಘವು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಪುರಸ್ಕರಿಸಿರುವ ಸರ್ಕಾರ, ಎಲ್ಲಾ ತಾತ್ಕಾಲಿಕ ಉದ್ಯೋಗಿಗಳಿಗೂ ಆರೋಗ್ಯ ಭದ್ರತೆ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದೆ.

Attachment
PDF
HFW 36 CGE 2026 (1)
Preview

ಈ ಯೋಜನೆ ಪ್ರಕಾರ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5,00,000 ರೂ. ವರೆಗೆ ನಗದು ರಹಿತ ಚಿಕಿತ್ಸೆ ಲಭ್ಯವಿರುತ್ತದೆ. ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಹ ದಿನಗೂಲಿ ನೌಕರರು ಮತ್ತು ಅವರ ಕುಟುಂಬದ ಸದಸ್ಯರು ಈ ಯೋಜನೆಯ ಫಲಾನುಭವಿಗಳು. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾರ್ಚ್ 31, 2026 ರಂದು ಈ ಆದೇಶವನ್ನು ಹೊರಡಿಸಿದೆ.

ಸರ್ಕಾರದ ಈ ನಿರ್ಧಾರದಿಂದಾಗಿ ಸಾವಿರಾರು ದಿನಗೂಲಿ ನೌಕರರ ಕುಟುಂಬಗಳಿಗೆ ತುರ್ತು ಚಿಕಿತ್ಸೆಯ ಸಮಯದಲ್ಲಿ ಆರ್ಥಿಕ ನೆರವು ಸಿಗುವಂತಾಗಿದೆ.

Casua Image
ಆಟೋ, ಕ್ಯಾಬ್ ಚಾಲಕರಿಗೆ 'ಹೃದಯ ಆರೋಗ್ಯ ಯೋಜನೆ' ಪ್ರಾರಂಭಿಸಲು ಸರ್ಕಾರ ನಿರ್ಧಾರ: ದಿನೇಶ್ ಗುಂಡೂರಾವ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com