

ಬೆಂಗಳೂರು: 2018ರ ವಿಧಾನಸಭೆ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣಗೆ 42ನೇ ಎಸಿಎಂಎಂ ಕೋರ್ಟ್ ಬಿಗ್ ಶಾಕ್ ನೀಡಿದ್ದು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಮತದಾರರಿಗೆ ಆಮಿಷ ಪ್ರಕರಣ ಸಂಬಂಧ ಬಾಲಕೃಷ್ಣ ವಿರುದ್ಧ ಅಬಕಾರಿ ಕಾಯ್ದೆ, IPC ಅಡಿ ಕೇಸ್ ದಾಖಲಾಗಿತ್ತು. ಕೋರ್ಟ್ ವಿಚಾರಣೆಗೆ ಹಾಜರಾಗದೇ ಶಾಸಕರು ಗೈರಾಗಿರುವ ಹಿನ್ನಲೆ ಕೋರ್ಟ್ ಬಂಧನ ವಾರೆಂಟ್ ಜಾರಿ ಮಾಡಿದೆ. 2018ರ ಚುನಾವಣೆ ಸಮಯದಲ್ಲಿ ರಾಮನಗರ ತಾಲೂಕಿನ ಬಸವನಪುರ ಗ್ರಾಮದ ಬಳಿ ಇರುವ ಹೀಲ್ ವ್ಯೂ ರೆಸಾರ್ಟ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಹೆಚ್.ಸಿ ಬಾಲಕೃಷ್ಣ ನಡೆಸಿದ್ದರು. ಈ ವೇಳೆ ಅಬಕಾರಿ ಸಬ್ ಇನ್ಸ್ಕ್ಟರ್ ಸಮೇತ ಸ್ಥಳಕ್ಕೆ ಫ್ಲೈಯಿಂಗ್ ಸ್ಕ್ಯಾಡ್ ಅಧಿಕಾರಿ ಭೇಟಿ ನೀಡಿದ್ದರು. ಕಾರ್ಯಕ್ರಮ ಆಯೋಜನೆಗೆ ಯಾವುದೇ ಅನುಮತಿಯನ್ನು ಪಡೆಯದ ಕಾರಣ ಪ್ರಕರಣ ದಾಖಲಾಗಿತ್ತು.
Advertisement