

ಮಡಿಕೇರಿ: ಕೊಡಗಿನ ತಡೆಯಂಡಮೋಳ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳಂ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ನಾಲ್ಕು ದಿನಗಳ ಬಳಿಕ ಪತ್ತೆಯಾಗಿದ್ದಾರೆ. ಮಹಿಳೆ ನಾಪತ್ತೆ ವಿಷಯ ಅರಣ್ಯ ಇಲಾಖೆಗೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಹೀಗಾಗಿ ಹಗಲಿರುಳು ಶೋಧ ಕಾರ್ಯಾಚರಣೆ ನಡೆಸಿದ್ದರು. ಸ್ಥಳೀಯರೊಂದಿಗೆ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಸತತ ಹುಡುಕಾಟ ನಡೆಸಿದ್ದು ಇಂದು ಪತ್ತೆಯಾಗಿದ್ದಾರೆ.
ಶರಣ್ಯ ಗುರುವಾರ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ಹೋಗಿದ್ದು ರಸ್ತೆ ಸಿಗದೇ ಪಾಳು ಬಿದ್ದ ಬಂಗಲೆಯೊದರಲ್ಲಿ ಉಳಿದುಕೊಂಡಿದ್ದರು. ಇನ್ನು ಶೋಧ ಕಾರ್ಯಾಚರಣೆ ಕೈಗೊಂಡಿದ್ದ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಡ್ರೋನ್, ಶ್ವಾನ ದಳವನ್ನು ಬಳಸಿದ್ದರೂ ಪತ್ತೆಯಾಗದ ಕಾರಣ ಆತಂಕ ಮೂಡಿತ್ತು. ಇದೀಗ ಶರಣ್ಯ ಪತ್ತೆಯಾಗಿದ್ದಾರೆ.
Advertisement