ಯೋಗೇಶ್ ಗೌಡ ಕೊಲೆ ಪ್ರಕರಣ: ಅಂತಿಮ ತೀರ್ಪು ಏಪ್ರಿಲ್ 15ಕ್ಕೆ ಮುಂದೂಡಿಕೆ

ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ನೀಡಲಿದೆ ಎನ್ನಲಾಗಿತ್ತಾದರೂ, ಬಳಿಕ ತೀರ್ಪನ್ನು ಏಪ್ರಿಲ್‌ 15ಕ್ಕೆ ಮುಂದೂಡಿದೆ.
Congress Mla Vinay Kulkarni
ಶಾಸಕ ವಿನಯ್ ಕುಲಕರ್ಣಿ
Updated on

ಧಾರವಾಡ: ಕಳೆದ ಎಂಟು ವರ್ಷಗಳಿಂದ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಶಾಸಕ ವಿನಯ್‌ ಕುಲಕರ್ಣಿ ಕುರಿತಾದ ಅಂತಿಮ ತೀರ್ಪು ಮುಂದೂಡಿಕೆ ಮಾಡಲಾಗಿದೆ.

ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ನೀಡಲಿದೆ ಎನ್ನಲಾಗಿತ್ತಾದರೂ, ಬಳಿಕ ತೀರ್ಪನ್ನು ಏಪ್ರಿಲ್‌ 15ಕ್ಕೆ ಮುಂದೂಡಿದೆ. ಆದೇಶ ಪ್ರಕಟವಾಗುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿದಂತೆ ಎಲ್ಲಾ 21 ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಕೋರ್ಟ್‌ಗೆ ತೆರಳುವ ಮೊದಲು ಪ್ರತಿಕ್ರಿಯಿಸಿದ ವಿನಯ್‌ ಕುಲಕರ್ಣಿ, ದೇವರ ಮೇಲೆ ಭರವಸೆ ಇದೆ. ಸತ್ಯಕ್ಕೆ ಯಾವತ್ತೂ ಜಯ ಸಿಗಲಿದೆ . ಕೋರ್ಟ್ ಮೇಲೆ ಭರವಸೆ ಇದೆ. ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಮಾಧ್ಯಮದ ಮುಂದೆ ಮಾತನಾಡುವುದು ಸರಿಯಲ್ಲ. ಕೋರ್ಟ್ ತೀರ್ಪು ಪ್ರಕಟಿಸಲಿ ಎಂದು ತಿಳಿಸಿದ್ದರು.

ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್‌ ಗೌಡ ಅವರನ್ನು 2016ರ ಜೂ.15ರಂದು ಭೀಕರವಾಗಿ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಧಾರವಾಡದ ಉಪನಗರ ಪೊಲೀಸರು ತನಿಖೆ ನಡೆಸಿ, ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಆರು ಮಂದಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

Congress Mla Vinay Kulkarni
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಬಿಗ್ ರಿಲೀಫ್: ಶಾಸಕ ವಿನಯ್‌ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com