ಚಾಮರಾಜನಗರ: ಟಿಪ್ಪರ್ -ಕಾರಿನ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಮೂವರು ಸಾವು

ಬೆಂಗಳೂರಿಗೆ ತೆರಳುತ್ತಿದ್ದ ಕಾರಿಗೆ ಗುಂಡ್ಲುಪೇಟೆಯಿಂದ ಕೇರಳಂಗೆ ಎಂ-ಸ್ಯಾಂಡ್ ಹೊತ್ತು ಸಾಗುತ್ತಿದ್ದ ಕೆ ಎಲ್ 47 ಎಂ 3272 ನೋಂದಣಿಯ 18 ಚಕ್ರದ ಟಿಪ್ಪರ್ ಡಿಕ್ಕಿ ಹೊಡೆದಿದೆ.
Three killed in road accident in Chamarajnagar
ಟಿಪ್ಪರ್ -ಕಾರಿನ ನಡುವೆ ಭೀಕರ ಅಪಘಾತ
Updated on

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಲ್ಲಯ್ಯನಪುರ ಗೇಟ್ ಬಳಿ ಮಂಗಳವಾರ ಟಿಪ್ಪರ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರನ್ನು ಕೇರಳ ಮೂಲದ ಆಯೇಷಾ ನೂರಿ(41), ಅವರ ಪುತ್ರಿ ನುಹಾ(18) ಹಾಗೂ ಮಹಮ್ಮದ್ ಅಜೀರ್ ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ನಹಿಯಾನ್ ಎಂಬ 9 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Three killed in road accident in Chamarajnagar
ಶಿವಮೊಗ್ಗ: ಶಿಕಾರಿಪುರದಲ್ಲಿ ಖಾಸಗಿ ಬಸ್ ಪಲ್ಟಿ; 17 ಪ್ರಯಾಣಿಕರಿಗೆ ಗಾಯ

ಮಹಮ್ಮದ್ ಅಜೀರ್ ಅವರು ತಮ್ಮ ಸಹೋದರಿ ಮತ್ತು ಆಕೆಯ ಮಕ್ಕಳನ್ನು ಕಾರಿನಲ್ಲಿ ಕರೆದುಕೊಂಡು ಹೋಗುವಾಗ ಈ ಅಪಘಾತ ಸಂಭವಿಸಿದೆ.

ಕೇರಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರಿಗೆ ಗುಂಡ್ಲುಪೇಟೆಯಿಂದ ಕೇರಳಂಗೆ ಎಂ-ಸ್ಯಾಂಡ್ ಹೊತ್ತು ಸಾಗುತ್ತಿದ್ದ ಕೆ ಎಲ್ 47 ಎಂ 3272 ನೋಂದಣಿಯ 18 ಚಕ್ರದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಮ್ಮದ್ ಅಜೀರ್ ಅವರು ಮೈಸೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೇಲ್ನೋಟಕ್ಕೆ ಟಿಪ್ಪರ್ ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಈ ಅವಘಡಕ್ಕೆ ಕಾರಣ ಎನ್ನಲಾಗಿದ್ದು ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ಭೇಟಿ ನೀಡಿ, ಟಿಪ್ಪರ್ ಹಾಗೂ ಕಾರನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com