ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ: ಏಪ್ರಿಲ್ 18 ರಂದು ವಿಶೇಷ ಕಾರ್ಯಕ್ರಮ!

ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಉದ್ಘಾಟನೆ ನೆರವೇರಿಸಲಿದ್ದಾರೆ.
Karnataka Lokayukta
ಕರ್ನಾಟಕ ಲೋಕಾಯುಕ್ತ ಕಚೇರಿ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಭ್ರಷ್ಟಾಚಾರ ನಿರ್ಮೂಲನೆ ಮತ್ತು ಆಡಳಿತ ಸುಧಾರಣೆಯಲ್ಲಿ ಮಹತ್ತರ ಪಾತ್ರ ವಹಿಸಿರುವ ‘ಕರ್ನಾಟಕ ಲೋಕಾಯುಕ್ತ' ಸಂಸ್ಥೆಯು ತನ್ನ ಯಶಸ್ವಿ ನಾಲ್ಕು ದಶಕಗಳ ಪಯಣವನ್ನು ಪೂರೈಸಿದ್ದು, ಈ ಅಂಗವಾಗಿ 2026ರ ಏಪ್ರಿಲ್ 18, ಶನಿವಾರದಂದು ಮಧ್ಯಾಹ್ನ 2.30 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಉದ್ಘಾಟನೆ ನೆರವೇರಿಸಲಿದ್ದಾರೆ. ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಅವರು ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದ ಲೋಕಾಯುಕ್ತರಾದ ಬಿ.ಎಸ್. ಪಾಟೀಲ್, ಉಪಲೋಕಾಯುಕ್ತರುಗಳಾದ ಕೆ.ಎನ್. ಫಣೀಂದ್ರ ಮತ್ತು ಬಿ. ವೀರಪ್ಪ ಅವರ ಘನ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮವು ಜರುಗಲಿದೆ.

ಈ ಸಂದರ್ಭದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಅವರು ಲೋಕಾಯುಕ್ತ ನಿಯತಕಾಲಿಕೆಯನ್ನು ಬಿಡುಗಡೆ ಮಾಡುವ ಜೊತೆಗೆ ಚುನಾಯಿತ ಪ್ರತಿನಿಧಿಗಳ ಆಸ್ತಿ ಮತ್ತು ಹೊಣೆಗಾರಿಕೆಗಳ ಹೊಸ ಪೋರ್ಟಲ್ ಹಾಗೂ ಆನ್‍ಲೈನ್ ತನಿಖಾ ಮಾಡ್ಯೂಲ್‍ಗೆ ಚಾಲನೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಮಾಜಿ ಲೋಕಾಯುಕ್ತರು ಮತ್ತು ಉಪಲೋಕಾಯುಕ್ತರನ್ನು ಸನ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ನಂತರ ಸಂಜೆ 4:30 ರಿಂದ 6:00 ರವರೆಗೆ ವಿಶೇಷ ವಿಚಾರಗೋಷ್ಠಿಗಳು ನಡೆಯಲಿದ್ದು, ನಂತರ ಭ್ರಷ್ಟಾಚಾರದ ವಿರುದ್ಧದ ಹೋರಾಟ ಕುರಿತು ವಿವಿಧ ಗೋಷ್ಠಿಗಳು ನಡೆಯಲಿವೆ.

ಭ್ರಷ್ಟಾಚಾರ ಮತ್ತು ದುರಾಡಳಿತ ವಿರುದ್ಧ ಹೋರಾಟದ ಬಗ್ಗೆ ನಿವೃತ್ತ ನ್ಯಾಯಮೂರ್ತಿಗಳಾದ ಬಿ.ಎಸ್. ಪಾಟೀಲ್, ಲೋಕಾಯುಕ್ತ ಕಾಯ್ದೆಯಡಿ ಕುಂದುಕೊರತೆಗಳ ಪರಿಹಾರ ವಿಷಯದ ಮೇಲೆ ನಿವೃತ್ತ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಹಾಗೂ ಭ್ರಷ್ಟಾಚಾರ ತಡೆಗಟ್ಟುವುದು ಹೇಗೆ? ಎಂಬುದರ ಬಗ್ಗೆ ನಿವೃತ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅವರು ವಿಚಾರಗೋಷ್ಠಿ ನಡೆಲಿಸಲಿದ್ದಾರೆ.

ಕರ್ನಾಟಕ ಲೋಕಾಯುಕ್ತ ಸಂಸ್ಥೆಯು ತನ್ನ ಅರ್ಥಪೂರ್ಣ ಹಾಗೂ ಅವಿರತ ಸೇವೆಯ 40 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಈ ಸುದೀರ್ಘ ಅವಧಿಯಲ್ಲಿ ಸಂಸ್ಥೆಯು ಹಲವಾರು ಸವಾಲುಗಳನ್ನು ಎದುರಿಸಿದ್ದರೂ ಸಹ, ಸಾರ್ವಜನಿಕ ಸೇವೆಯಲ್ಲಿನ ಭ್ರಷ್ಟಾಚಾರ, ಸ್ವಜನಪಕ್ಷಪಾತ ಹಾಗೂ ಆಡಳಿತ ದುರುಪಯೋಗದ ವಿರುದ್ಧದ ಹೋರಾಟದಲ್ಲಿ ಸದಾ ಸ್ಥಿತಪ್ರಜ್ಞವಾಗಿ ಕಾರ್ಯ ನಿರ್ವಹಿಸಿಕೊಂಡು ಬಂದಿದೆ.

ಸಮಾಜದಲ್ಲಿ ಭ್ರಷ್ಟಾಚಾರವು ಭಯಾನಕ ರೀತಿಯಲ್ಲಿ ಬೆಳೆಯುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ ಎಂಬ ಟೀಕೆಗಳಿದ್ದರೂ ಸಹ, ಧನಾತ್ಮಕ ಚಿಂತನೆ ಹಾಗೂ ಪರಿಶ್ರಮದಿಂದ ಭಷ್ಟಾಚಾರವನ್ನು ಹತ್ತಿಕ್ಕಬಹುದು ಎಂಬ ವಿಶ್ವಾಸವನ್ನು ಸಂಸ್ಥೆಯು ಮೂಡಿಸಿದೆ.

Karnataka Lokayukta
ಮಂತ್ರಾಲಯದಲ್ಲಿರುವ ಕರ್ನಾಟಕ ಛತ್ರದ ದುಸ್ಥಿತಿ ಕಂಡು ಹೌಹಾರಿದ ಉಪ ಲೋಕಾಯುಕ್ತ: ಸ್ವಯಂಪ್ರೇರಿತ ದೂರು ದಾಖಲು!

ಒಟ್ಟಾರೆಯಾಗಿ, ಪ್ರಾಮಾಣಿಕ ವ್ಯಕ್ತಿಗಳನ್ನು ಬೆಳೆಸುವಲ್ಲಿ ನಾವು ವಿಫಲವಾದರೆ ಅನ್ಯಾಯವು ಗೆದ್ದು, ನ್ಯಾಯವು ಮರೆಯಾಗುವ ಅಪಾಯವಿದೆ ಎಂದು ಸಂಸ್ಥೆಯು ಎಚ್ಚರಿಸಿದೆ. ಸವಾಲುಗಳೇ ವ್ಯಕ್ತಿಯನ್ನು ಪರಿಪೂರ್ಣಗೊಳಿಸುತ್ತವೆ ಎಂಬ ಧ್ಯೇಯವಾಕ್ಯದೊಂದಿಗೆ ಲೋಕಾಯುಕ್ತವು ನಾಲ್ಕು ದಶಕಗಳನ್ನು ದಾಟಿ ಮುಂದಿನ ಹೆಜ್ಜೆಯನ್ನು ಇಡುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com