ಬಳ್ಳಾರಿಯಲ್ಲಿ ಮಾನವ–ಪ್ರಾಣಿ ಸಂಘರ್ಷ ತೀವ್ರ: ಕರಡಿ ದಾಳಿಗೆ ರೈತ ಗಂಭೀರ ಗಾಯ, ಹೆಚ್ಚಿದ ಆತಂಕ

ಬಳ್ಳಾರಿ ಜಿಲ್ಲೆಯಲ್ಲಿ ವರದಿಯಾದ ಎರಡು ಪ್ರತ್ಯೇಕ ಘಟನೆಗಳಲ್ಲಿ, ಬುಧವಾರ ರಸ್ತೆ ಅಪಘಾತದಲ್ಲಿ ಗಂಡು ಕರಡಿ ಸಾವನ್ನಪ್ಪಿದ್ದರೆ, ಕರಡಿ ದಾಳಿಯಲ್ಲಿ ರೈತನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.
file photo
ಸಂಗ್ರಹ ಚಿತ್ರ
Updated on

ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ವನ್ಯಜೀವಿಗಳ ದಾಳಿ ಮತ್ತು ಮಾನವ–ಪ್ರಾಣಿ ಸಂಘರ್ಷ ಮತ್ತೊಮ್ಮೆ ತೀವ್ರಗೊಂಡಿದೆ. ಒಂದೇ ದಿನ ನಡೆದ ಎರಡು ಪ್ರತ್ಯೇಕ ಘಟನೆಗಳು ಗ್ರಾಮೀಣ ಪ್ರದೇಶಗಳಲ್ಲಿನ ಜನರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.

ಬಳ್ಳಾರಿ ಜಿಲ್ಲೆಯಲ್ಲಿ ವರದಿಯಾದ ಎರಡು ಪ್ರತ್ಯೇಕ ಘಟನೆಗಳಲ್ಲಿ, ಬುಧವಾರ ರಸ್ತೆ ಅಪಘಾತದಲ್ಲಿ ಗಂಡು ಕರಡಿ ಸಾವನ್ನಪ್ಪಿದ್ದರೆ, ಕರಡಿ ದಾಳಿಯಲ್ಲಿ ರೈತನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮೊದಲ ಘಟನೆಯಲ್ಲಿ, ಬಳ್ಳಾರಿ–ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಎಂಟು ವರ್ಷದ ಗಂಡು ಕರಡಿ ವೇಗವಾಗಿ ಸಂಚರಿಸುತ್ತಿದ್ದ ವಾಹನದ ಡಿಕ್ಕಿಗೆ ಬಲಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದೆ.

ಈ ಮಾರ್ಗವು ಅರಣ್ಯ ಪ್ರದೇಶಗಳಲ್ಲಿರುವ ಪ್ರಮುಖ ಹೆದ್ದಾರಿಯಾಗಿರುವುದರಿಂದ, ಕಾಡುಪ್ರಾಣಿಗಳು ರಸ್ತೆಯನ್ನು ದಾಟುವ ವೇಳೆ ಇಂತಹ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ.

ಮಾಹಿತಿ ದೊರಕುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಅಗತ್ಯ ಕ್ರಮಗಳನ್ನು ಕೈಗೊಂಡು ಕರಡಿ ಮೃತದೇಹವನ್ನು ವಿಧಿವಿಧಾನದ ಪ್ರಕಾರ ಮಣ್ಣಿನಲ್ಲಿ ಸಮಾಧಿ ಮಾಡಿದರು.

file photo
ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷ: ಸಂತಾನಹರಣ ಚಿಕಿತ್ಸೆ ಪರಿಹಾರವೇ? ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದೇನು?

ಮತ್ತೊಂದು ಘಟನೆ ಕುರುಗೋಡು ತಾಲ್ಲೂಕಿನಲ್ಲಿ ನಡೆದಿದೆ. ಹೊಲಕ್ಕೆ ತೆರಳುತ್ತಿದ್ದ ರೈತನ ಮೇಲೆ ಕರಡಿ ಆಕಸ್ಮಿಕವಾಗಿ ದಾಳಿ ನಡೆಸಿದೆ. ಈ ದಾಳಿಯಿಂದ ರೈತ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ವೈದ್ಯರ ಮಾಹಿತಿ ಪ್ರಕಾರ, ಗಾಯಾಳುವಿನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಘಟನೆ ಬೆನ್ನಲ್ಲೇ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಅರಣ್ಯದ ಅಂಚಿನಲ್ಲಿ ವಾಸಿಸುವ ನಿವಾಸಿಗಳು, ವಿಶೇಷವಾಗಿ ಮುಂಜಾನೆ ಮತ್ತು ಸಂಜೆ ಎಚ್ಚರ ವಹಿಸಬೇಕೆಂದು ಹೇಳಿದ್ದಾರೆ.

ಕಾಡು ಪ್ರಾಣಿಗಳು ಈ ಸಮಯದಲ್ಲಿ ಹೊರಗೆ ಹೋಗುವ ಸಾಧ್ಯತೆ ಹೆಚ್ಚಾಗಿದ್ದು,, ಎಚ್ಚರಿಕೆಯಿಂದಿರಬೇಕೆಂದು ಸಲಹೆ ನೀಡಿದ್ದಾರೆ.

ಇದೇ ವೇಳೆ ಇಂತಹ ಘಟನೆಗಳನ್ನು ತಡೆಗಟ್ಟಲು ವಾಹನ ಚಾಲಕರು ಅರಣ್ಯ ಪ್ರದೇಶಗಳಲ್ಲಿ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕೆಂದೂ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com