‘ಕರ್ನಾಟಕದಲ್ಲಿ ಆಟೋ, ಕ್ಯಾಬ್ ಚಾಲಕರಿಗೆ ಕನ್ನಡ ಭಾಷೆ ಕಡ್ಡಾಯಗೊಳಿಸಿ’: ಸಿಎಂಗೆ KPCC ಪತ್ರ

ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ, ಮಹಾರಾಷ್ಟ್ರದಲ್ಲಿ ಮೇ 1ರಿಂದ ಎಲ್ಲಾ ವಾಣಿಜ್ಯ ವಾಹನ ಚಾಲಕರು ಪರವಾನಗಿ ಪಡೆಯಲು ಸ್ಥಳೀಯ ಭಾಷೆ ಮರಾಠಿ ಓದಲು, ಬರೆಯಲು ಮತ್ತು ಮಾತನಾಡಲು ತಿಳಿದಿರಬೇಕು ಎಂಬ ಆ ರಾಜ್ಯದ ಮಾದರಿಯನ್ನು ಅನುಸರಿಸುವಂತೆ ಅವರು ಸೂಚಿಸಿದ್ದಾರೆ.
Autos
ಆಟೋಗಳು
Updated on

ಬೆಂಗಳೂರು: ಮಹಾರಾಷ್ಟ್ರ ಸರ್ಕಾರ ಇತ್ತೀಚೆಗೆ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಮರಾಠಿ ಭಾಷೆಯಲ್ಲಿ ಪರಿಣತಿ ಕಡ್ಡಾಯಗೊಳಿಸಿರುವ ಕ್ರಮವನ್ನು ಉಲ್ಲೇಖಿಸಿ, ಕೆಪಿಸಿಸಿ ವಕ್ತಾರ ಎ.ಎನ್. ನಟರಾಜ್ ಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕದಲ್ಲೂ ಇದೇ ರೀತಿಯ ನೀತಿಯನ್ನು ಜಾರಿಗೊಳಿಸುವಂತೆ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ, ಮಹಾರಾಷ್ಟ್ರದಲ್ಲಿ ಮೇ 1ರಿಂದ ಎಲ್ಲಾ ವಾಣಿಜ್ಯ ವಾಹನ ಚಾಲಕರು ಪರವಾನಗಿ ಪಡೆಯಲು ಸ್ಥಳೀಯ ಭಾಷೆ ಮರಾಠಿ ಓದಲು, ಬರೆಯಲು ಮತ್ತು ಮಾತನಾಡಲು ತಿಳಿದಿರಬೇಕು ಎಂಬ ಆ ರಾಜ್ಯದ ಮಾದರಿಯನ್ನು ಅನುಸರಿಸುವಂತೆ ಅವರು ಸೂಚಿಸಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ರಾಜ್ಯದ ಹೊರಗಿನ ಆಟೋ ಮತ್ತು ಕ್ಯಾಬ್ ಚಾಲಕರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಅವರು ಕನ್ನಡ ಮಾತನಾಡದ ಕಾರಣ, ಸ್ಥಳೀಯ ಕನ್ನಡಿಗರು ತಮ್ಮದೇ ರಾಜ್ಯದಲ್ಲಿ ಸಂವಹನ ನಡೆಸಲು ಕಷ್ಟಪಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

Autos
Video: 'ಕರ್ನಾಟಕದಲ್ಲಿ ಹಿಂದಿ ಮಾತಾಡು..'; ಬುರ್ಖಾಧಾರಿ ಮಹಿಳೆ ಉದ್ಧಟತನ, ಸರಿಯಾಗಿ ಜಾಡಿಸಿದ 'ಕನ್ನಡತಿ'!

ಕ್ಯಾಬ್‌ಗಳಲ್ಲಿ ಭಾಷಾ ಸಮಸ್ಯೆಯಿಂದ ಕನ್ನಡಿಗರು ಹಿಂಸೆ ಎದುರಿಸುತ್ತಿರುವ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದರು.

ಕನ್ನಡ ಕಲಿಯಲು ನಿರಾಕರಿಸುವ ವಾಹನ ಚಾಲಕರ ವಾಣಿಜ್ಯ ಪರವಾನಗಿಯನ್ನು ಅಮಾನತು ಮಾಡುವುದು ಅಥವಾ ರದ್ದುಪಡಿಸುವ ನಿಯಮಗಳನ್ನು ರೂಪಿಸಬೇಕು. ಭಾಷಾ ನಿಯಮಗಳನ್ನು ಉಲ್ಲಂಘಿಸಿ ಭ್ರಷ್ಟಾಚಾರದ ಮೂಲಕ ಪರವಾನಗಿ ನೀಡುವ ಸಾರಿಗೆ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕರ್ನಾಟಕದಲ್ಲಿ ಜೀವನೋಪಾಯ ಸಂಪಾದಿಸುವ ಪ್ರತಿಯೊಬ್ಬರ ಕರ್ತವ್ಯವೇ ಈ ನೆಲ, ನೀರು ಮತ್ತು ಭಾಷೆಯನ್ನು ಕಲಿತು ಗೌರವಿಸುವುದು ಎಂದು ಅವರು ತಿಳಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಈಗಾಗಲೇ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (RTO) ಚಾಲಕರಿಗೆ ಹೆಸರು ಫಲಕಗಳನ್ನು ಓದಲು ಹಾಗೂ ಮೂಲಭೂತ ಸಂಭಾಷಣೆ ನಡೆಸುವ ಸಾಮರ್ಥ್ಯದ ಪರೀಕ್ಷೆಗಳನ್ನು ಆರಂಭಿಸಿದೆ. ಕನ್ನಡಿಗರ ಸ್ವಾಭಿಮಾನ ಮತ್ತು ಹಿತಾಸಕ್ತಿಗಳನ್ನು ಕಾಪಾಡಲು ಇದೇ ರೀತಿಯ ಧೈರ್ಯಶಾಲಿ ನಿರ್ಧಾರವನ್ನು ಜಾರಿಗೊಳಿಸುವುದು ಅಗತ್ಯವೆಂದು ನಟರಾಜ್ ಗೌಡ ಅಭಿಪ್ರಾಯಪಟ್ಟರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com