ದಕ್ಷಿಣ ಭಾರತದಲ್ಲಿ ಸುಪ್ರೀಂ ಕೋರ್ಟ್ ಪೀಠ ಸ್ಥಾಪಿಸುವ ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ

ನ್ಯಾಯಾಂಗ ಕ್ಷೇತ್ರಕ್ಕೆ ಕೃತಕ ಬುದ್ಧಿಮತ್ತೆಯ ಪ್ರವೇಶವಾಗಿದೆ. ಅದರಿಂದಾಗಿಆಡಳಿತ, ಹಕ್ಕುಗಳು ಮತ್ತು ನ್ಯಾಯದ ಸ್ವರೂಪವನ್ನು ರೂಪಿಸುವ ಪರಸ್ಪರ ಸಂಬಂಧ ಹೊಂದಿರುವ ಶಕ್ತಿಗಳ ನಡುವೆ ನಿರ್ಣಾಯಕ ಹಂತದಲ್ಲಿ ನಾವು ಇಂದು ನಿಂತಿದ್ದೇವೆ.
Siddaramaiah
ಸಿದ್ದರಾಮಯ್ಯ
Updated on

ಬೆಂಗಳೂರು: ನಾವು ಇಂದು ಕೃತಕ ಬುದ್ಧಿಮತ್ತೆಯ ಕಾಲಘಟ್ಟಕ್ಕೆ ಅಡಿಯಿಟ್ಟಿದ್ದೇವೆ. ಕೃತಕ ಬುದ್ಧಿಮತ್ತೆಯ ತಾಂಬೆಂಗಳೂರು: ರಾಜ್ಯದ ಉಚ್ಚ ನ್ಯಾಯಾಲಯಕ್ಕೆ ಪ್ರವೇಶವನ್ನು ಸುಧಾರಿಸಬೇಕೆನ್ನುವ ಬಲವಾದ ಅಗತ್ಯವಿದೆ. ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ಜಿಕೆವಿಕೆಯ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಭಾಂಗಣದಲ್ಲಿ ನಡೆದ ನ್ಯಾಯಾಂಗ ಅಧಿಕಾರಿಗಳ 22ನೇ ದ್ವೈವಾರ್ಷಿಕ ರಾಜಮಟ್ಟದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಪ್ರಸಕ್ತ ಕಾಲಘಟ್ಟದಲ್ಲಿ ಕಾನೂನು ಮತ್ತು ತಂತ್ರಜ್ಞಾನವು ಪ್ರತ್ಯೇಕ ಕ್ಷೇತ್ರಗಳಾಗಿ ಉಳಿದಿಲ್ಲ. ಈಗ ಮುಂದುವರೆದು ನ್ಯಾಯಾಂಗ ಕ್ಷೇತ್ರಕ್ಕೆ ಕೃತಕ ಬುದ್ಧಿಮತ್ತೆಯ ಪ್ರವೇಶವಾಗಿದೆ. ಅದರಿಂದಾಗಿ

ಆಡಳಿತ, ಹಕ್ಕುಗಳು ಮತ್ತು ನ್ಯಾಯದ ಸ್ವರೂಪವನ್ನು ರೂಪಿಸುವ ಪರಸ್ಪರ ಸಂಬಂಧ ಹೊಂದಿರುವ ಶಕ್ತಿಗಳ ನಡುವೆ ನಿರ್ಣಾಯಕ ಹಂತದಲ್ಲಿ ನಾವು ಇಂದು ನಿಂತಿದ್ದೇವೆ. ಈ ಪಯಣದಲ್ಲಿ ನ್ಯಾಯಾಂಗಕ್ಕೆ ಅದರ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ ಗೌರವಿಸುತ್ತಲೇ ಅದಕ್ಕೆ ಬೆಂಬಲ ನೀಡುವುದು, ಸಕ್ರಿಯಗೊಳಿಸುವುದು ಮತ್ತು ಬಲಪಡಿಸುವುದು ಆಡಳಿತದ ಪಾತ್ರ. ನ್ಯಾಯಾಂಗ ಮೂಲಭೂತ ಸೌಕರ್ಯ, ಡಿಜಿಟಲ್ ಪರಿವರ್ತನೆ, ನಾವೀನ್ಯತೆ ಹಾಗೂ ನ್ಯಾಯದಾನವು ಒಟ್ಟಾಗಿ ಪ್ರಗತಿ ಹೊಂದಲು ಸೂಕ್ತವಾದ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸಲು ಕರ್ನಾಟಕ ಸರ್ಕಾರವು ಬದ್ಧವಾಗಿದೆ.

ನ್ಯಾಯದಾನ ವ್ಯವಸ್ಥೆಗೆ ವೇಗ ಮತ್ತು ಪ್ರವೇಶವನ್ನು ಒದಗಿಸಲು ಕರ್ನಾಟಕದಲ್ಲಿ ನಾವು ಖಚಿತ ಸುಧಾರಣೆಗಳನ್ನು ಕೈಗೊಂಡಿದ್ದೇವೆ. ಕಾಲಬದ್ಧ ಪ್ರಕರಣ ನಿರ್ವಹಣೆ, ಸರಹದ್ದುಗಳ ಪುನರ್ ರಚನೆಯ ಮೂಲಕ ಉಚ್ಚ ನ್ಯಾಯಾಲಯಗಳ ಹೊರೆಯನ್ನು ತಗ್ಗಿಸುವುದುಹಾಗೂ ಸರ್ಕಾರಿ ವ್ಯಾಜ್ಯ ಅಭ್ಯಾಸಗಳನ್ನು ಬಲಪಡಿಸಲಾಗುತ್ತಿದೆ ಎಂದಿದ್ದಾರೆ.

ಆದರೂ, ಇದೇ ಸಮಯದಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಸಿಕೊಳ್ಳುವುದರ ಕುರಿತು ಆಳವಾದ ಕಳವಳಗಳು ಮೂಡದೇ ಇರಲಾರದು. ಅಲ್ಗಾರಿದಮಿಕ್ ಪಕ್ಷಪಾತವು ಕಾನೂನಿನ ಮುಂದೆ ಸಮಾನತೆಯ ಖಾತರಿಯನ್ನು ಹಾಳುಮಾಡಬಹುದು. ಅಪಾರದರ್ಶಕ ವ್ಯವಸ್ಥೆಗಳು ನಮ್ಮ ನ್ಯಾಯಾಂಗ ವ್ಯವಸ್ಥೆಯ ತಾರ್ಕಿಕ ನಿರ್ಧಾರಗಳ ಸಿದ್ಧಾಂತವನ್ನು ದುರ್ಬಲಗೊಳಿಸುವ ಆತಂಕವನ್ನು ಅಲ್ಲಗಳೆಯುವಂತಿಲ್ಲ ಎಂದಿದ್ದಾರೆ.

ನಮ್ಮ ಪ್ರಜಾಪ್ರಭುತ್ವದ ಮೂಲಾಧಾರವಾಗಿರುವ ನ್ಯಾಯಾಂಗ ಸ್ವಾತಂತ್ರ್ಯವನ್ನು ಬಾಹ್ಯ ಒತ್ತಡಗಳಿಂದ ಮಾತ್ರವಲ್ಲದೆ ಸೂಕ್ಷ್ಮ ತಾಂತ್ರಿಕ ಅವಲಂಬನೆಯಿಂದಲೂ ಸಂರಕ್ಷಿಸುವ ಹೊಣೆಗಾರಿಕೆ ನಮ್ಮ ಮೇಲಿದೆ.

ನ್ಯಾಯಾಧೀಶರ ಅಧಿಕಾರವನ್ನು ಎಂದಿಗೂ ಅಲ್ಗಾರಿದಮ್‌ನ ಅಧಿಕಾರವು ಮರೆಮಾಚಬಾರದು. ಸಾಂವಿಧಾನಿಕ ನೈತಿಕತೆಯು ನೈಸರ್ಗಿಕ ಭಾವನೆಯಲ್ಲ, ಅದನ್ನು ಬೆಳೆಸಿಕೊಳ್ಳಬೇಕು ಎಂದು ಡಾ. ಬಿ.ಆರ್. ಅಂಬೇಡ್ಕರ್ ನಮಗೆ ನೆನಪಿಸಿದ್ದರು. ಸಾಂವಿಧಾನಿಕ ಮೌಲ್ಯಗಳು ತಾಂತ್ರಿಕ ಅಳವಡಿಕೆಗೆ ಮಾರ್ಗದರ್ಶನ ನೀಡುತ್ತವೆಯೇ ಹೊರತು ಅದೇ ಪರ್ಯಾಯವಲ್ಲ ಎಂಬುದನ್ನು ಮನಗಾಣಬೇಕು.

ಕೃತಕ ಬುದ್ಧಿಮತ್ತೆಯ ಸಾಕ್ಷಿ, ಪುರಾವೆಗಳು ನಮ್ಮ ಕಾನೂನು ವ್ಯವಸ್ಥೆಗೆ ಹೊಸ ಸವಾಲುಗಳನ್ನು ಒಡ್ಡುತ್ತಿವೆ. ಡೀಪ್‌ಫೇಕ್‌ಗಳು, ಸಂಶ್ಲೇಷಿತ ಡೇಟಾ, ಪುರಾವೆಗಳ ದೃಢೀಕರಣ ಸವಾಲಾಗಿ ಪರಿಣಮಿಸಿದೆ.

Siddaramaiah
NDA ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ: ಸಿದ್ದರಾಮಯ್ಯ ವಿರುದ್ಧ ಸಾ.ರಾ.ಮಹೇಶ್ ಕಿಡಿ

ಡಿಜಿಟಲ್ ಯುಗದಲ್ಲಿ ವಿಶ್ವಾಸಾರ್ಹ ಸಾಕ್ಷಿಗಳು ಯಾವುವು ಎಂಬುದನ್ನು ನಿರ್ಧರಿಸಲು ನ್ಯಾಯಾಲಯಗಳ ಅಗತ್ಯ ಹೆಚ್ಚುತ್ತಿದೆ. ಹಾಗೆ ಮಾಡುವಾಗ, ಸತ್ಯವು ಕೇವಲ ತಾಂತ್ರಿಕ ಅತ್ಯಾಧುನಿಕತೆಯಲ್ಲಿ ಅಲ್ಲ, ಪರಿಶೀಲನೆ ಮತ್ತು ಸಮಗ್ರತೆಯ ಮೇಲೆ ಆಧಾರಿತವಾಗಿದೆ ಎಂದು ನಾವು ಖಚಿತಪಡಿಸಿಕೊಳ್ಳಬೇಕು.

ಭಾರತದಲ್ಲಿ ಕೃತಕ ಬುದ್ಧಿಮತ್ತೆಗಾಗಿ ನಿಯಂತ್ರಕ ಚೌಕಟ್ಟನ್ನು ರೂಪಿಸುವಲ್ಲಿ ನ್ಯಾಯಾಂಗವು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಸರಿಯಾದ ಪ್ರಕ್ರಿಯೆ, ಅನುಪಾತ ಮತ್ತು ಗೌಪ್ಯತೆಯ ಹಕ್ಕಿನ

ಸಂರಕ್ಷಣೆಯಂತಹ ಸುಸ್ಥಾಪಿತ ಸಾಂವಿಧಾನಿಕ ಸಿದ್ಧಾಂತಗಳ ಮೂಲಕ ಕೃತಕ ಬುದ್ಧಿಮತ್ತೆಯ ಪರಿಧಿಯನ್ನು ನಿರ್ಧರಿಸಬೇಕಿದೆ. ನ್ಯಾಯಾಂಗವು ತಂತ್ರಜ್ಞಾನದ ಬಳಕೆದಾರ ಮಾತ್ರವಲ್ಲದೆ ಸಮಾಜದಲ್ಲಿ ಅದರ ನಿಯೋಜನೆಗೆ ಮಾರ್ಗದರ್ಶನ ನೀಡುವ ನೈತಿಕ ದಿಕ್ಸೂಚಿಯೂ ಆಗಿದೆ ಎಂದು ಹೇಳಿದ್ದಾರೆ.

ನ್ಯಾಯ ದಾನ ವ್ಯವಸ್ಥೆಯನ್ನು ಬಲಪಡಿಸಲು ಆಡಳಿತವು ಪಾಲುದಾರನಾಗಿ ಕೆಲಸ ಮಾಡಬೇಕೇ ಹೊರತು ಅದನ್ನು ಒತ್ತುವರಿ ಮಾಡುವಂತಾಗಬಾರದು.ನ್ಯಾಯ ಎನ್ನುವುದು ಕೇವಲ ಹೊಂದುವುದಲ್ಲ, ಬದಲಿಗೆ ಎತ್ತಿ ಹಿಡಿಯಬೇಕಾದ ನೈತಿಕ ಜವಾಬ್ದಾರಿ ಎಂಬ ಮೂಲಭೂತ ಸತ್ಯವನ್ನು ನಾವು ಎಂದಿಗೂ ಮರೆಯಬಾರದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com