ಖಾನಾಪುರ ಪಟ್ಟಣದಲ್ಲಿ ಕಾಡಾನೆ ಪ್ರತ್ಯಕ್ಷ: ಕೆಲಕಾಲ ಆತಂಕ ಸೃಷ್ಟಿ, ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ

ಮಾಹಿತಿ ತಿಳಿದ ಕೂಡಲೇ ಹೆಚ್ಚುವರಿ ಅರಣ್ಯ ಸಂರಕ್ಷಣಾಧಿಕಾರಿ ಸುನೀತಾ ನಿಂಬರ್ಗಿ ಹಾಗೂ ವಲಯ ಅರಣ್ಯಾಧಿಕಾರಿ ಶ್ರೀಕಾಂತ್ ಪಾಟೀಲ ತಮ್ಮ ತಂಡದೊಂದಿಗೆ ಸ್ಥಳಕ್ಕೆ ಆಗಮಿಸಿದರು.
Wild elephant seen moving around at Shivaji Nagar area in Khanapur on Sunday
ಕಾಡಾನೆ
Updated on

ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಶಿವಾಜಿ ನಗರ ಪ್ರದೇಶದಲ್ಲಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಇದರಿಂದ ಸ್ಥಳದಲ್ಲಿ ಕೆಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ನಗರದ ವಸತಿ ಪ್ರದೇಶದತ್ತ ಆನೆ ಸಾಗುತ್ತಿರುವುದನ್ನು ಗಮನಿಸಿದ ನಿವಾಸಿಗಳು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಇದರಿಂದ ಎಚ್ಚೆತ್ತ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಆನೆಯ ಚಲನವಲನವನ್ನು ಹತ್ತಿರದಿಂದ ಗಮನಿಸಿ, ಜನಸಂದಣಿ ಪ್ರದೇಶಗಳಿಂದ ಆನೆಯನ್ನು ದೂರ ಸಾಗಿಸಲು ಕ್ರಮ ಕೈಗೊಂಡರು.

ನಂತರ ಆನೆ ಮಾಯೇಕರ್ ನಗರ ಹಾಗೂ ರೈಲು ನಿಲ್ದಾಣದ ಸಮೀಪದಲ್ಲಿಯೂ ಕಾಣಿಸಿಕೊಂಡಿದ್ದು, ಇದು ನಿವಾಸಿಗಳನ್ನು ಮತ್ತಷ್ಟು ಆತಂಕಕ್ಕೀಡಾಗುವಂತೆ ಮಾಡಿತ್ತು.

Wild elephant seen moving around at Shivaji Nagar area in Khanapur on Sunday
ಸಕಲೇಶಪುರದಲ್ಲಿ ಆನೆ ದಾಳಿ: ETF ಸಿಬ್ಬಂದಿ ಸ್ವಲ್ಪದರಲ್ಲಿ ಪಾರು..!

ಮಾಹಿತಿ ತಿಳಿದ ಕೂಡಲೇ ಹೆಚ್ಚುವರಿ ಅರಣ್ಯ ಸಂರಕ್ಷಣಾಧಿಕಾರಿ ಸುನೀತಾ ನಿಂಬರ್ಗಿ ಹಾಗೂ ವಲಯ ಅರಣ್ಯಾಧಿಕಾರಿ ಶ್ರೀಕಾಂತ್ ಪಾಟೀಲ ತಮ್ಮ ತಂಡದೊಂದಿಗೆ ಸ್ಥಳಕ್ಕೆ ಆಗಮಿಸಿದರು.

ಸ್ಥಳೀಯರ ಸಹಕಾರದೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಆನೆಯನ್ನು ಸುರಕ್ಷಿತವಾಗಿ ನಗರ ವ್ಯಾಪ್ತಿಯಿಂದ ಹೊರಗೆ ಕೊಂಡೊಯ್ಯುವಲ್ಲಿ ಯಶಸ್ವಿಯಾದರು.

ಅಂತಿಮವಾಗಿ ಆನೆಯನ್ನು ಖಾನಾಪುರ - ಹೇಮಡಗಾ ರಸ್ತೆಯ ಉದ್ದಕ್ಕೂ ಶೆಡೆಗಾಲಿ ಪ್ರದೇಶದಲ್ಲಿರುವ ಸರ್ಕಾರಿ ತೋಟಗಾರಿಕೆ ಫಾರ್ಮ್ ಕಡೆಗೆ ಓಡಿಸಲಾಯಿತು. ಅಲ್ಲಿಂದ ಮರಳಿ ಅರಣ್ಯ ಪ್ರದೇಶಕ್ಕೆ ಕಳುಹಿಸಲಾಯಿತು.

ಈ ಸಂದರ್ಭದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿನಷ್ಟ ಸಂಭವಿಸಿಲ್ಲ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com