ಹೊಸಪೇಟೆ ಸರಣಿ ಅಪಘಾತ ಪ್ರಕರಣ: ಮೃತರ ಸಂಖ್ಯೆ 4ಕ್ಕೆ ಏರಿಕೆ, ಗಾಯಾಳುಗಳಿಗೆ ಮುಂದುವರೆದ ಚಿಕಿತ್ಸೆ

ಮೊದಲು ಕಾರಿಗೆ ಡಿಕ್ಕಿ ಹೊಡೆದ ಲಾರಿ, ನಂತರ ಸರ್ಕಾರಿ ಬಸ್ ಮತ್ತು ನಂತರ ಮೂರು ಮೋಟಾರ್ ಸೈಕಲ್‌ಗಳಿಗೆ ಡಿಕ್ಕಿ ಹೊಡೆದಿದೆ. ನಂತರ ವ್ಯಾನ್ ಮತ್ತು ಕಂಟೇನರ್ ಲಾರಿಗೂ ಡಿಕ್ಕಿ ಹೊಡೆದು ನಂತರ ರಸ್ತೆಬದಿಯಲ್ಲಿ ಉರುಳಿ ಬಿದ್ದಿದೆ.
lorry
ಸರಣಿ ಅಪಘಾತದ ಬಳಿಕ ಉರುಳಿ ಬಿದ್ದಿರುವ ಲಾರಿ
Updated on

ಹೊಸಪೇಟೆ: ಹೊಸಪೇಟೆ ತಾಲ್ಲೂಕಿನ ದಾನಾಪುರ ಗ್ರಾಮದ ಬಳಿ ಭಾನುವಾರ ಸಂಭವಿಸಿದ ಸರಣಿ ಅಪಘಾತ ಘಟನೆಯಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ರಾಷ್ಟ್ರೀಯ ಹೆದ್ದಾರಿ-50 ರ ರಸ್ತೆ ದುರಸ್ತಿ ಮತ್ತು ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿರುವುದರಿಂದ ವಾಹನ ಸಂಚಾರ ಒಂದೇ ಪಥದಲ್ಲಿ ಸೀಮಿತಗೊಂಡಿತ್ತು. ಈ ನಡುವೆ ದೆಹಲಿಯಿಂದ ಬೆಂಗಳೂರಿಗೆ ಬೆಳ್ಳುಳ್ಳಿ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದಿದೆ.

ಮೊದಲು ಕಾರಿಗೆ ಡಿಕ್ಕಿ ಹೊಡೆದ ಲಾರಿ, ನಂತರ ಸರ್ಕಾರಿ ಬಸ್ ಮತ್ತು ನಂತರ ಮೂರು ಮೋಟಾರ್ ಸೈಕಲ್‌ಗಳಿಗೆ ಡಿಕ್ಕಿ ಹೊಡೆದಿದೆ. ನಂತರ ವ್ಯಾನ್ ಮತ್ತು ಕಂಟೇನರ್ ಲಾರಿಗೂ ಡಿಕ್ಕಿ ಹೊಡೆದು ನಂತರ ರಸ್ತೆಬದಿಯಲ್ಲಿ ಉರುಳಿ ಬಿದ್ದಿದೆ.

ಈ ಅಪಘಾತದಲ್ಲಿ ಸುಜಾತಾ (40) ಮತ್ತು ಅವರ ತಂದೆ ನಾಗಪ್ಪ (80) (ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಕಿಟ್ಟೂರು ಗ್ರಾಮ), ದುರಗಪ್ಪ (55) (ತಾಲೇಬಸಾಪುರ ತಾಂಡಾ) ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

lorry
ಹೊಸಪೇಟೆಯ ಡಾಣಾಪುರ ಬಳಿ ಸರಣಿ ಅಪಘಾತ: ಇಬ್ಬರು ಸ್ಥಳದಲ್ಲಿಯೇ ಸಾವು! 20 ಜನರಿಗೆ ಗಾಯ

ಗಾಯಗೊಂಡವರಲ್ಲಿ ಹೊಸಪೇಟೆಯಿಂದ ಚಿತ್ರದುರ್ಗ ಕಡೆಗೆ ಸಾಗುತ್ತಿದ್ದ ಸರ್ಕಾರಿ ಬಸ್ ಪ್ರಯಾಣಿಕರು ಹೆಚ್ಚಿನವರು ಸೇರಿದ್ದಾರೆ.

ಲಾರಿ ಬಸ್‌ಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಪರಿಣಾಮ ಸುಮಾರು 25 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಆರು ಮಂದಿಯನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ರಸ್ತೆ ದುರಸ್ತಿ ಕಾಮಗಾರಿಗಳಿಂದ ವಾಹನ ಸಂಚಾರ ಒಂದು ದಾರಿಯಲ್ಲೇ ಸಾಗುತ್ತಿದ್ದದ್ದು ಅಪಘಾತಕ್ಕೆ ಪ್ರಮುಖ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com