ತುಮಕೂರಿನಲ್ಲಿ 32 ನವಿಲುಗಳ ಮಾರಣಹೋಮ; ಸಾವಿಗೆ ಕಾರಣವೇನು..?

ಸದ್ಯ ಮೃತ ನವಿಲುಗಳ ಮರಣೋತ್ತರ ಪರೀಕ್ಷೆಗಾಗಿ ಅಂಗಾಂಶಗಳ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದ್ದು, ವರದಿ ಬಂದ ಬಳಿಕ ಸಾವಿನ ಕಾರಣ ಪತ್ತೆಯಾಗಲಿದೆ.
carcasses of peacocks (File photo)
ನವಿಲುಗಳ ಸಾವು (ಸಂಗ್ರಹ ಚಿತ್ರ)
Updated on

ತುಮಕೂರು: ತುಮಕೂರು ಜಿಲ್ಲೆಯ ವಿವಿಧ ಭಾಗದಲ್ಲಿ ಕೇವಲ ಒಂದು ವಾರದಲ್ಲಿ 32 ನವಿಲುಗಳ ಮಾರಣಹೋಮವಾಗಿದ್ದು, ಇದು ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ.

ತುಮಕೂರಿನ ಬೊಮ್ಮನಹಳ್ಳಿ, ಕೋಳಿಹಳ್ಳಿ, ಭೈರಸಂದ್ರ, ಹುಲ್ಲೆನಹಳ್ಳಿ ಗ್ರಾಮದಲ್ಲಿ ಏ.16ರಿಂದ 21ರವರೆಗೆ ಒಟ್ಟು 32 ನವಿಲುಗಳ ಸಾವನ್ನಪ್ಪಿವೆ.

ಸದ್ಯ ಮೃತ ನವಿಲುಗಳ ಮರಣೋತ್ತರ ಪರೀಕ್ಷೆಗಾಗಿ ಅಂಗಾಂಶಗಳ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದ್ದು, ವರದಿ ಬಂದ ಬಳಿಕ ಸಾವಿನ ಕಾರಣ ಪತ್ತೆಯಾಗಲಿದೆ.

ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದ್ದು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ತಂಡ ರಚಿಸಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ.ಆರ್.ಶಶಿಧರ್ ತಿಳಿಸಿದ್ದಾರೆ.

carcasses of peacocks (File photo)
ಬೆಂಗಳೂರು: ಹಾರೋಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ಮಾಲಿನ್ಯ ಕುರಿತು ಕಳವಳ

ನಿರ್ದಿಷ್ಟವಾಗಿ ಯಾವುದೋ ಒಂದು ಗ್ರಾಮ ಅಥವಾ ಒಂದೇ ಕಡೆ ನವಿಲುಗಳು ಮೃತಪಟ್ಟಿಲ್ಲ. ಬೇರೆ ಬೇರೆ ಸ್ಥಳಗಳಲ್ಲಿ ಸಾವನ್ನಪ್ಪುತ್ತಿವೆ.

ಮರಣೋತ್ತರ ಪರೀಕ್ಷೆ ಸಮಯದಲ್ಲಿ ಮೃತ ದೇಹದಲ್ಲಿ ಅನುಮಾನಾಸ್ಪದ ವಸ್ತುಗಳು ಕಂಡು ಬಂದಿಲ್ಲ. ಬಿಸಿಲಿನ ತಾಪ ತಾಳಲಾರದೆ ಸತ್ತಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com