ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಕಾಲೇಜು ಲೈಸೆನ್ಸ್ ರದ್ದು ಮಾಡಿ ದಂಡ ವಿಧಿಸಿ: ಸಿಎಂಗೆ ಬ್ರಾಹ್ಮಣ ಮಹಾಸಭೆ ಪತ್ರ

ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಲು ನಿಯಮ ಇಲ್ಲದಿದ್ದರೂ ತೆಗೆಸಿರುವುದು ಏಕೆ ಎಂದು ಪ್ರಶ್ನಿಸಿರುವ ಬ್ರಾಹ್ಮಣ ಮಹಾಸಭಾ ಆಕ್ರೋಶ ವ್ಯಕ್ತವಾಗುತ್ತಿದೆ.
Letter from Brahmana Mahasabha
ಜನಿವಾರ ವಿವಾದ ಹಿನ್ನೆಲೆ ಮುಖ್ಯಮಂತ್ರಿಗೆ ಬ್ರಾಹ್ಮಣ ಮಹಾಸಭಾ ಪತ್ರ
Updated on

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಘಟನೆ ತೀವ್ರ ವಿವಾದ ತೆಗೆದುಕೊಳ್ಳುತ್ತಿದೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮುಖ್ಯಮಂತ್ರಿಗೆ ಪತ್ರ ಬರೆದು ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರದ ಕಾಲೇಜಿನ ಪರವಾನಗಿ ರದ್ದುಪಡಿಸಬೇಕು, ಜೊತೆಗೆ ಸಂಬಂಧಿಸಿದ ಸಂಸ್ಥೆಗೆ ಕನಿಷ್ಠ 25 ಲಕ್ಷ ರೂಪಾಯಿ ದಂಡ ವಿಧಿಸಬೇಕೆಂದು ಒತ್ತಾಯಿಸಲಾಗಿದೆ.

ಬ್ರಾಹ್ಮಣ ಸಮುದಾಯದ ಮೇಲಿನ ಅತಿಕ್ರಮ ಎಂದ ಮಹಾಸಭಾ

ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಲು ನಿಯಮ ಇಲ್ಲದಿದ್ದರೂ ತೆಗೆಸಿರುವುದು ಏಕೆ ಎಂದು ಪ್ರಶ್ನಿಸಿರುವ ಬ್ರಾಹ್ಮಣ ಮಹಾಸಭಾ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಾಸಭಾ ಅಧ್ಯಕ್ಷ ಎಸ್. ರಘುನಾಥ್, ಈ ಘಟನೆ ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ. ಜನಿವಾರ ತೆಗೆಸಿದ ಪರಿಣಾಮ ವಿದ್ಯಾರ್ಥಿಗಳು ಮತ್ತು ಪೋಷಕರು ಮಾನಸಿಕವಾಗಿ ನೊಂದಿದ್ದಾರೆ. ಕಳೆದ ವರ್ಷವೂ ಇಂತಹ ಘಟನೆ ನಡೆದಾಗ ಮಹಾಸಭಾ ಕರ್ನಾಟಕ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು ಎಂದು ರಘುನಾಥ್ ತಿಳಿಸಿದ್ದಾರೆ.

Letter from Brahmana Mahasabha
ಮತ್ತೆ ಮರುಕಳಿಸಿದ ಜನಿವಾರ ವಿವಾದ: ಬೆಂಗಳೂರಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ

2025ರ ಡಿಸೆಂಬರ್‌ನಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿದ್ದರೂ, ಇದೀಗ ಮತ್ತೆ ಇದೇ ರೀತಿಯ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಘಟನೆ ಬ್ರಾಹ್ಮಣ ಸಮುದಾಯದ ಮೇಲಿನ ಅತಿಕ್ರಮ ಎಂದು ಮಹಾಸಭಾ ಅಭಿಪ್ರಾಯಪಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com