ಹಾಸನ ಆನೆ ಕಾರ್ಯಪಡೆಗೆ 10 ಬೈಕ್ ಸೇರಿ 13 ಹೊಸ ವಾಹನಗಳ ಸೇರ್ಪಡೆ! ಇದರ ವಿಶೇಷತೆ ಏನು?

ಬೆಂಗಳೂರು ಮಲ್ಲೇಶ್ವರದ ಅರಣ್ಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು, 1 ಸ್ಕಾರ್ಪಿಯೋ, 2 ಕ್ಯಾಂಪರ್ ಹಾಗೂ 10 ದ್ವಿಚಕ್ರವಾಹನಗಳಿಗೆ ಹಸಿರು ನಿಶಾನೆ ತೋರಿ, ತಾವೇ ಬೈಕ್ ಓಡಿಸುವ ಮೂಲಕ ಚಾಲನೆ ನೀಡಿದರು.
Minister Eshwar khandre
ಸಚಿವ ಈಶ್ವರ್ ಖಂಡ್ರೆ
Updated on

ಬೆಂಗಳೂರು: ಆನೆಗಳ ಹಾವಳಿ ಹೆಚ್ಚಿರುವ ಹಾಸನ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಲು ಮತ್ತು ಆನೆಗಳನ್ನು ಕಾಡಿಗೆ ಮರಳಿಸಲು ಜಿಲ್ಲಾ ಆನೆ ಕಾರ್ಯಪಡೆಗೆ 13 ಹೊಸ ವಾಹನಗಳು ಸೇರ್ಪಡೆಯಾಗಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹಸಿರು ನಿಶಾನೆ ತೋರಿಸಿದರು.

ಬೆಂಗಳೂರು ಮಲ್ಲೇಶ್ವರದ ಅರಣ್ಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು, 1 ಸ್ಕಾರ್ಪಿಯೋ, 2 ಕ್ಯಾಂಪರ್ ಹಾಗೂ 10 ದ್ವಿಚಕ್ರವಾಹನಗಳಿಗೆ ಹಸಿರು ನಿಶಾನೆ ತೋರಿ, ತಾವೇ ಬೈಕ್ ಓಡಿಸುವ ಮೂಲಕ ಚಾಲನೆ ನೀಡಿದರು.

ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಇದು ಹೊಸ ಉಪಕ್ರಮವಾಗಿದೆ. ಈ ಎಲ್ಲ ವಾಹನಗಳಿಗೆ ವಾಕಿಟಾಕಿ ಮತ್ತು ಧ್ವನಿವರ್ಧಕ ಅಳವಡಿಸಲಾಗಿದ್ದು ಜಿಲ್ಲಾ ಆನೆ ಕಾರ್ಯಪಡೆ ಸಿಬ್ಬಂದಿ ವಾಹನಗಳಲ್ಲಿ ಗಸ್ತು ಮಾಡುತ್ತಾ, ಆನೆಗಳು ತೋಟ ಅಥವಾ ವಸತಿ ಪ್ರದೇಶಗಳ ಬಳಿ ಬಂದಾಗ ಸ್ಥಳೀಯರಿಗೆ ಧ್ವನಿವರ್ಧಕಗಳ ಮೂಲಕ ಎಚ್ಚರಿಕೆ ನೀಡುತ್ತಾರೆ ಮತ್ತು ಆನೆಗಳನ್ನು ಕಾಡಿಗೆ ಮರಳಿಸುತ್ತಾರೆ ಎಂದರು.

Minister Eshwar khandre
ಅರಣ್ಯ ಪ್ರದೇಶ ಒತ್ತುವರಿ ಮುಲಾಜಿಲ್ಲದೆ ತೆರವುಗೊಳಿಸಿ: ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಈ ವಾಹನಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತನ್ನ ಸಿಎಸ್.ಆರ್. ನಿಧಿಯಿಂದ ಅರಣ್ಯ ಇಲಾಖೆಗೆ ನೀಡಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು. ಆನೆ ಕಾರ್ಯಪಡೆ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com