ಆಟೋ ಸೈಡ್‌ಗೆ ಹಾಕಿ ಎಂದ ಸುನಿಲ್ ಸಹೋದರರ ಮೇಲೆ ಜಮೀರ್ ಸಹೋದರರಿಂದ ಮಾರಣಾಂತಿಕ ಹಲ್ಲೆ!

ಕಾರಿನಲ್ಲಿ ತೆರಳುತ್ತಿದ್ದ ತೋಟೆಂದ್ರ ಮತ್ತು ಸುನಿಲ್ ಸಹೋದರರು, ರಸ್ತೆ ಮೇಲೆ ಅಡ್ಡಾ- ದಿಡ್ಡಿಯಾಗಿ ನಿಲ್ಲಿಸಲಾಗಿದ್ದ ಆಟೋಗಳನ್ನು ಸ್ವಲ್ಪ ಸೈಡಿಗೆ ಹಾಕಿ ಎಂದು ಹೇಳಿದ್ದಾರೆ.
Muslim brothers assault on Hindu brothers in Kalaburagi
ಸುನಿಲ್ ಸಹೋದರರ ಮೇಲೆ ಜಮೀರ್ ಸಹೋದರರಿಂದ ಮಾರಣಾಂತಿಕ ಹಲ್ಲೆ
Updated on

ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಹಿಂದೂ ಸಹೋದರಿಬ್ಬರ ಮೇಲೆ ಮುಸ್ಲಿಂ ಸಹೋದರರು ಸೇರಿಕೊಂಡು ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ಶನಿವಾರ ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮದಲ್ಲಿ ನಡೆದಿದೆ.

ಕಾರಿನಲ್ಲಿ ತೆರಳುತ್ತಿದ್ದ ತೋಟೆಂದ್ರ ಮತ್ತು ಸುನಿಲ್ ಸಹೋದರರು, ರಸ್ತೆ ಮೇಲೆ ಅಡ್ಡಾ- ದಿಡ್ಡಿಯಾಗಿ ನಿಲ್ಲಿಸಲಾಗಿದ್ದ ಆಟೋಗಳನ್ನು ಸ್ವಲ್ಪ ಸೈಡಿಗೆ ಹಾಕಿ ಎಂದು ಹೇಳಿದ್ದಾರೆ.

ಈ ವೇಳೆ ಆಟೋ ಮಾಲೀಕ ಸೈಯದ್ ಜಮೀರ್ ಹಾಗೂ ಆತನ ಸಹೋದರರಾದ ಸೈಫಾಬ್ ಒಂಟಿ, ಆರಿಫ್, ಆಸಿಫ್, ಇಮ್ರಾನ್ ನಡುವೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ಹೋಗಿ ಜಮೀರ್ ಹಾಗೂ ಅವರ ಸಹೋದರು ಸುನೀಲ್ ಸಹೋದರರ ಮೇಲೆ ಕಟ್ಟಿಗೆಯಿಂದ ಮನಸ್ಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ.

Muslim brothers assault on Hindu brothers in Kalaburagi
ಕ್ಷುಲ್ಲಕ ಕಾರಣಕ್ಕೆ ದೊಣ್ಣೆ, ಬೇಸ್‌ಬಾಲ್ ಬ್ಯಾಟ್‌ನಿಂದ ಹಲ್ಲೆ: ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಮಾವ, ಭಾವ ಅರೆಸ್ಟ್!

ಈ ಸಂಬಂಧ ಹಲ್ಲೆಗೊಳಗಾದ ತೋಟೆಂದ್ರ ಮತ್ತು ಸುನಿಲ್ ಕುಟುಂಬಸ್ಥರು ಕಲಬುರಗಿ ಸಬ್ ಅರ್ಬನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ಹಲ್ಲೆ ಮಾಡಿದ ಆಟೋ ಮಾಲೀಕ ಸೈಯದ್ ಜಮೀರ್ ಹಾಗೂ ಆತನ ಸಹೋದರರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com