

ಚಿಕ್ಕಮಗಳೂರು: ಚಿಕ್ಕಮಗಳೂರಿನ ಮೂಡಿಗೆರೆಯ ದೇವವೃಂದ ಗ್ರಾಮದಲ್ಲಿ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತಳನ್ನು 22 ವರ್ಷದ ಸೌಜನ್ಯ ಪೂಜಾರಿ ಎಂದು ಗುರುತಿಸಲಾಗಿದೆ. ಸಾಂಬಾರ್ ಮಾಡಿಲ್ಲವೆಂದು ತಂದೆ ಬೈದಿದ್ದಕ್ಕೆ ಸೌಜನ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ತಂದೆ ನಟೇಶ್ ಮಧ್ಯಾಹ್ನ ಊಟಕ್ಕೆ ಬಂದಿದ್ದಾಗ ಮಗಳಿಗೆ ಸಾಂಬಾರ್ ಮಾಡಿಲ್ಲ ಎಂದು ಬೈದಿದ್ದಾರೆ. ನಂತರ ಪಕ್ಕದ ಮನೆಗೆ ಸಾಂಬಾರ್ ತರಲು ಹೋಗಿದ್ದಾಗ ಇತ್ತ ಸೌಜನ್ಯ ನೇಣಿಗೆ ಶರಣಾಗಿದ್ದಾಳೆ. ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Advertisement