

ಬೆಳಗಾವಿ: ರಾಜ್ಯ ಸರ್ಕಾರದ ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ ದೊರಕುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿಯವರು ಶನಿವಾರ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆಗೆದುಕೊಂಡ ಈ ನಿರ್ಧಾರವನ್ನು“ಐತಿಹಾಸಿಕ” ನಿರ್ಧಾರವಾಗಿದೆ ಎಂದು ಬಣ್ಣಿಸಿದ್ದಾರೆ.
ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನವನ್ನು ಏಕಮತದಿಂದ ಅಂಗೀಕರಿಸಲಾಗಿದೆ. ವಿವಿಧ ಸಮುದಾಯಗಳನ್ನು ಪ್ರತಿನಿಧಿಸುವ ಎಲ್ಲಾ ಸಚಿವರು ಸಭೆಯಲ್ಲಿ ಭಾಗವಹಿಸಿದ್ದು, ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೆ ನಿರ್ಧಾರ ಕೈಗೊಳ್ಳಲಾಗಿದೆ. “ಎಲ್ಲ ವರ್ಗಗಳಲ್ಲೂ ತೃಪ್ತಿ ಮೂಡಿದೆ” ಎಂದು ಹೇಳಿದ್ದಾರೆ.
ಒಳ ಮೀಸಲಾತಿ ಬಹುಕಾಲದಿಂದ ಕೇಳಿಬರುತ್ತಿದ್ದ ಬೇಡಿಕೆಯಾಗಿದ್ದು, ಸಮುದಾಯಗಳ ಒಳಗೆ ಮೀಸಲಾತಿ ಪ್ರಯೋಜನಗಳನ್ನು ಸಮನಾಗಿ ಹಂಚಿಕೆ ಮಾಡಲು ಇದು ಮಹತ್ವದ ಹೆಜ್ಜೆಯಾಗಿದೆ. ಈ ನಿರ್ಧಾರವು ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ದೊಡ್ಡ ಬದಲಾವಣೆಯನ್ನು ತರಬಹುದೆಂಬ ನಿರೀಕ್ಷೆ ಇದೆ.
ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ವಿರುದ್ಧ ತಿರುಗೇಟು ನೀಡಿದ ಸತೀಶ್ ಜಾರಕಿಹೊಳಿಯವರು, “ವಿಪಕ್ಷಗಳು ಸರ್ಕಾರದ ಪ್ರತಿಯೊಂದು ನಿರ್ಧಾರದಲ್ಲೂ ತಪ್ಪು ಹುಡುಕುವುದು ಸಾಮಾನ್ಯ. ಇದು ಜನಪರ ಮತ್ತು ಐತಿಹಾಸಿಕ ಹೆಜ್ಜೆಯಾಗಿದ್ದು, ಸಾರ್ವಜನಿಕ ಬೆಂಬಲವೇ ಇದಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.
Advertisement