ಬೆಂಗಳೂರಿಗೆ ಕೊನೆಗೂ ತಂಪರೆದ ಮಳೆರಾಯ, ಮೇ 2ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಹಲವೆಡೆ ಮೋಡ ಕವಿದ ವಾತಾವರಣವಿದ್ದು, ಬಿಸಿಲಿನ ತಾಪಕ್ಕೆ ತತ್ತರಿಸಿದ ಜನತೆಗೆ ವರುಣ ತಂಪೆರೆದಿದ್ದಾನೆ. ಸಂಜೆಯಿಂದಲೇ ಮೋಡಕವಿದ ವಾತಾವರಣವಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
Rain forecast till May 2 Says IMD
ಬೆಂಗಳೂರಿನಲ್ಲಿ ಮಳೆ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಬಿರು ಬೇಸಿಗೆಯಿಂದ ಕಾದು ಕಾವಲಿಯಂತಾಗಿದ್ದ ಸಿಲಿಕಾನ್ ಸಿಟಿ ಬೆಂಗಳೂರಿಗೆ ಕೊನೆಗೂ ಮಳೆರಾಯ ತಂಪೆರೆದಿದ್ದು, ನಗರದ ಹಲವೆಡೆ ವರುಣನ ಸಿಂಚನವಾಗಿದೆ.

ಇಂದು ಸಂಜೆ ಬೆಂಗಳೂರಿನ ಹಲವೆಡೆ ಮಳೆಯಾಗಿದ್ದು, ಬಾಣಸವಾಡಿ, ಕಲ್ಯಾಣನಗರ, ನಾಗವಾರ ಸುತ್ತಮುತ್ತ ತುಂತುರು ಮಳೆಯಾಗಿದೆ. ಹಲವೆಡೆ ಮೋಡ ಕವಿದ ವಾತಾವರಣವಿದ್ದು, ಬಿಸಿಲಿನ ತಾಪಕ್ಕೆ ತತ್ತರಿಸಿದ ಜನತೆಗೆ ವರುಣ ತಂಪೆರೆದಿದ್ದಾನೆ. ಸಂಜೆಯಿಂದಲೇ ಮೋಡಕವಿದ ವಾತಾವರಣವಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಬೆಂಗಳೂರಿನಲ್ಲಿ ಪೂರ್ವ ಮಾನ್ಸೂನ್ ಮಾದರಿಯ ಹವಾಮಾನವಿರುತ್ತದೆ ಎಂದು ನಿರೀಕ್ಷಿಸಲಾಗಿದೆ, ಭಾಗಶಃ ಮೋಡ ಕವಿದ ವಾತಾವರಣ ಮತ್ತು ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಏಪ್ರಿಲ್ 28 ರಂದು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ.

ನಂತರ ಏಪ್ರಿಲ್ 29 ರಿಂದ ಮೇ 2 ರವರೆಗೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಲಘುದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತದೆ. ಈ ಅವಧಿಯಲ್ಲಿ ಹಗಲಿನ ತಾಪಮಾನವು ಸ್ಥಿರವಾಗಿರುತ್ತದೆ, ಗರಿಷ್ಠ ತಾಪಮಾನವು 35°C ಮತ್ತು 36°C ನಡುವೆ ಮತ್ತು ಕನಿಷ್ಠ ತಾಪಮಾನವು 22°C ಮತ್ತು 24°C ನಡುವೆ ಇರುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ.

Rain forecast till May 2 Says IMD
ಹೊರ ಹೋಗುವುದಕ್ಕೂ ಮುನ್ನ ನೀವು ಹೋಗಬೇಕಿರುವ ಸ್ಥಳದ ಹವಾಮಾನ ಪರಿಶೀಲಿಸಿ: IMD ಸಲಹೆ

3 ದಿನ ಮಳೆ ಸಾಧ್ಯತೆ

ಬಲವಾದ ಮೇಲ್ಮೈ ತಾಪನ ಮತ್ತು ಮಧ್ಯಮ ಆರ್ದ್ರತೆಯ ಮಟ್ಟಗಳ ಸಂಯೋಜನೆಯಿಂದಾಗಿ ನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇವೆ. ದಿನವಿಡೀ ತಾಪಮಾನ ಹೆಚ್ಚುತ್ತಿರುವ ಮತ್ತು ತೇವಾಂಶವು ಸುಮಾರು 50% ರಷ್ಟು ಇರುವುದರಿಂದ, ಪರಿಸ್ಥಿತಿಗಳು ಸಂವಹನ ಚಟುವಟಿಕೆಗೆ ಅನುಕೂಲಕರವಾಗಿವೆ.

ಇದರರ್ಥ ದಿನವಿಡೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಕಡಿಮೆ, ಆದರೆ ಮಧ್ಯಾಹ್ನ ಮತ್ತು ಸಂಜೆ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಏಪ್ರಿಲ್ 29 ಮತ್ತು ಮೇ 1 ರ ನಡುವೆ 60-80% ರ ನಡುವೆ ಮತ್ತು 70-90% ರಷ್ಟು ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ. ಇವುಗಳು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಅಲ್ಪಾವಧಿಯ, ತೀವ್ರವಾದ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ರಾಜ್ಯಾದ್ಯಂತ ಮಳೆ

ಕರ್ನಾಟಕದಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಂಭವವಿದ್ದು, ಇಂದಿನಿಂದ ಏ.30ರವರೆಗೆ ಮಳೆಯಾಗುವ ಮುನ್ಸೂಚನೆಯಿದೆ. ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಸಂಜೆ ವೇಳೆ ಕೆಲ ಪ್ರದೇಶಗಳಲ್ಲಿ ಗುಡುಗು, ಮಿಂಚು ಹಾಗೂ 40-50 ಕಿ.ಮೀ ವೇಗದ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಒಳನಾಡು ಜಿಲ್ಲೆಗಳಲ್ಲಿ ಕೆಲವೆಡೆ ಆಲಿಕಲ್ಲು ಮಳೆಯಾಗುವ ಸಂಭವವಿದೆ.

ರಾಜ್ಯದಲ್ಲಿ ಮುಂದಿನ ಮೂರು ದಿನ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಎಚ್ಚರಿಕೆ ಸಂದೇಶದ ಪ್ರಕಾರ, ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಏಪ್ರಿಲ್ 28 , 29 ಹಾಗೂ 30 ರಂದು ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ. ತಲುಪುವ ಸಾಧ್ಯತೆಯಿದ್ದು, ಆಲಿಕಲ್ಲು ಮಳೆಯಾಗುವ ತೀವ್ರ ಸಂಭವವಿದೆ. ಈ ಹಿನ್ನೆಲೆಯಲ್ಲಿ 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Rain forecast till May 2 Says IMD
ಬೆಂಗಳೂರಲ್ಲಿ ರಣ ಬಿಸಿಲು: KIAಯಲ್ಲಿ 38 ಡಿಗ್ರಿ ತಲುಪಿದ ತಾಪಮಾನ; 2 ದಿನಗಳಲ್ಲಿ ಮಳೆ ಸಾಧ್ಯತೆ

ರಾಜ್ಯದ ಬಹುಪಾಲು ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ತುಮಕೂರು ಹಾಗೂ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುಡುಗು -ಮಿಂಚು ಹಾಗೂ ಬಿರುಗಾಳಿ ಅಬ್ಬರಿಸುವ ಸೂಚನೆ ಇದೆ.

ಆಲಿಕಲ್ಲು ಮಳೆ ಮತ್ತು ಬಿರುಗಾಳಿಯ ಹಿನ್ನೆಲೆಯಲ್ಲಿ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಕೋರಲಾಗಿದೆ. ಬಿರುಗಾಳಿ ಅಥವಾ ಸಿಡಿಲು ಬರುವಾಗ ಮರಗಳ ಕೆಳಗೆ ನಿಲ್ಲಬಾರದು ಹಾಗೂ ರೈತರು ತಮ್ಮ ಕೃಷಿ ಚಟುವಟಿಕೆಗಳಲ್ಲಿ ಎಚ್ಚರ ವಹಿಸಬೇಕು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com