ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ಮೋದಿ; ಕೆಲಹೊತ್ತು ಧ್ಯಾನ

ಇಂದು ಮಧ್ಯಾಹ್ನ ವಿಶೇಷ ಹೆಲಿಕಾಪ್ಟರ್‌ ಮೂಲಕ ಓವಲ್ ಮೈದಾನಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಸ್ವಾಗತಿಸಿದರು.
PM Modi inaugurates Vivek Memorial in Mysore
ಪ್ರಧಾನಿ ಮೋದಿ
Updated on

ಮೈಸೂರು: ಸಾಂಸ್ಕೃತಿಕ ನಗರ ಮೈಸೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಮಕೃಷ್ಣ ಆಶ್ರಮದಲ್ಲಿ ವಿವೇಕಾ ಸ್ಮಾರಕ(ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ)ವನ್ನು ಉದ್ಘಾಟಿಸಿದರು. ಬಳಿಕ ಆಶ್ರಮದಲ್ಲೇ ಕೆಲಹೊತ್ತು ಧ್ಯಾನ ಮಾಡಿದರು.

ಸುಮಾರು 45 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸಾಂಸ್ಕೃತಿಕ ಯುವ ಕೇಂದ್ರವನ್ನು ಪ್ರಧಾನಿ ಮೋದಿ ಅವರು ಇಂದು ಮಧ್ಯಾಹ್ನ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ರಾಮಕೃಷ್ಣ ಆಶ್ರಮದ ಆವರಣದಲ್ಲಿ ಗಿಡವೊಂದನ್ನು ನೆಟ್ಟರು

PM Modi inaugurates Vivek Memorial in Mysore
ಮೈಸೂರಿನಲ್ಲಿ ‘ಗೋ ಬ್ಯಾಕ್ ಮೋದಿ’ ಪ್ರತಿಭಟನೆಗೆ ಯತ್ನ; DSS ಮುಖಂಡರು ಪೊಲೀಸ್ ವಶಕ್ಕೆ

ಮಂಡಕಳ್ಳಿ ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್‌ ಮೂಲಕ ಓವಲ್ ಮೈದಾನಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಸ್ವಾಗತಿಸಿದರು.

ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ಸ್ವಾಮಿ ವಿವೇಕಾನಂದರು ನೆಲೆಸಿದ್ದರು ಎನ್ನುವ ನೆನಪಿಗಾಗಿ ಹಾಗೂ ಯುವ ಜನರಲ್ಲಿ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಸಾಂಸ್ಕೃತಿಕ ಯುವ ಕೇಂದ್ರವನ್ನ ನಿರ್ಮಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com