KEA ನೇಮಕಾತಿ ವಿವಾದ: ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಭೇಟಿ ಮಾಡಿದ CM ಡಿ.ಕೆ. ಶಿವಕುಮಾರ್‌; ಸಮಸ್ಯೆ ಪರಿಹಾರದ ಭರವಸೆ

ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳಿಗೆ ಬಿಇ ಮತ್ತು ಬಿ.ಟೆಕ್ ಪದವೀಧರರಿಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಿರುವ ಕೆಇಎ ನಿರ್ಧಾರವನ್ನು ವಿದ್ಯಾರ್ಥಿಗಳು ತೀವ್ರವಾಗಿ ವಿರೋಧಿಸುತ್ತಿದ್ದಾರೆ.
Students interact with Chief Minister DK Shivakumar in Bengaluru on Tuesday. Home Minister Priyank Kharge looks on.
ವಿದ್ಯಾರ್ಥಿಗಳಿಗೆ ಮಾತುಕತೆ ನಡೆಸುತ್ತಿರುವ ಸಿಎಂ ಡಿಕೆ.ಶಿವಕುಮಾರ್.
Updated on

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನೇಮಕಾತಿ ನೀತಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕಾನೂನುಬದ್ಧವಾಗಿ ಹಾಗೂ ಸಕಾರಾತ್ಮಕವಾಗಿ ಸಮಸ್ಯೆಯನ್ನು ಪರಿಹರಿಸುವ ಭರವಸೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಮಂಗಳವಾರ ನೀಡಿದ್ದಾರೆ.

ಮಂಗಳವಾರ ಬೆಂಗಳೂರಿನಲ್ಲಿ ನಡೆದ ಬೆಂಗಳೂರು ಇಂಡಿಯಾ ನ್ಯಾನೋ ಶೃಂಗಸಭೆ ಉದ್ಘಾಟನಾ ಕಾರ್ಯಕ್ರಮದ ವೇಳೆ, ಪ್ರತಿಭಟನಾ ನಿರತ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ (ಯುಎಎಸ್) ವಿದ್ಯಾರ್ಥಿಗಳು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ತಮ್ಮ ಅಹವಾಲು ಸಲ್ಲಿಸಿದರು. ಈ ವೇಳೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಉಪಸ್ಥಿತರಿದ್ದು, ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದರು.

ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳಿಗೆ ಬಿಇ ಮತ್ತು ಬಿ.ಟೆಕ್ ಪದವೀಧರರಿಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಿರುವ ಕೆಇಎ ನಿರ್ಧಾರವನ್ನು ವಿದ್ಯಾರ್ಥಿಗಳು ತೀವ್ರವಾಗಿ ವಿರೋಧಿಸುತ್ತಿದ್ದಾರೆ.

ಕೃಷಿ ವಿಷಯದಲ್ಲಿ ವಿಶೇಷ ಶಿಕ್ಷಣ ಪಡೆದ ಅಭ್ಯರ್ಥಿಗಳಿಗೆ ಮಾತ್ರ ಈ ಹುದ್ದೆಗಳಿಗೆ ಸ್ಪರ್ಧಿಸುವ ಅವಕಾಶ ನೀಡಬೇಕು ಎಂಬುದು ಅವರ ಪ್ರಮುಖ ಬೇಡಿಕೆಯಾಗಿದೆ.

ವಿದ್ಯಾರ್ಥಿಗಳ ಮನವಿ ಆಲಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು, ಈ ಸಮಸ್ಯೆಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿಯಮಗಳಿಗೆ ಮಾಡಲಾದ ತಿದ್ದುಪಡಿಗಳೇ ಕಾರಣವಾಗಿವೆ ಎಂದು ಹೇಳಿದರು.

Students interact with Chief Minister DK Shivakumar in Bengaluru on Tuesday. Home Minister Priyank Kharge looks on.
ಗಣಿ ಹರಾಜು ಪಡೆದೂ ಗಣಿಗಾರಿಕೆ ಆರಂಭಿಸದವರ ಪಟ್ಟಿ ನೀಡಿ; ಅಧಿಕಾರಿಗಳಿಗೆ ಸಿಎಂ ಡಿಕೆ.ಶಿವಕುಮಾರ್ ಸೂಚನೆ

ಈ ವಿಷಯವನ್ನು ಕಾನೂನುಬದ್ಧವಾಗಿ ಪರಿಶೀಲಿಸಿ ಶೀಘ್ರದಲ್ಲೇ ಸಕಾರಾತ್ಮಕವಾಗಿ ಬಗೆಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಪ್ರತಿಭಟನೆ ಹಿಂತೆಗೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದ ಸಿಎಂ, ರಾಜ್ಯ ಸರ್ಕಾರ ನಿರುದ್ಯೋಗ ನಿವಾರಣೆಗೆ ಹಲವು ಕ್ರಮಗಳನ್ನು ಕೈಗೊಂಡಿದ್ದು, ಕೃಷಿ ಪದವೀಧರರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ನಮ್ಮ ಸರ್ಕಾರ ಯುವಕರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಬದ್ಧವಾಗಿದೆ. ಕೃಷಿ ಪದವೀಧರರಿಗೆ ಅನ್ಯಾಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಕಾನೂನಿನ ಚೌಕಟ್ಟಿನೊಳಗೆ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲಾಗುತ್ತದೆ ಎಂದು ಭರವಸೆ ನೀಡಿದರು.

ಈ ಭರವಸೆಯ ಬಳಿಕ ವಿದ್ಯಾರ್ಥಿಗಳು ಸರ್ಕಾರದ ಮುಂದಿನ ಕ್ರಮದತ್ತ ಚಿತ್ತ ಹರಿಸಿದ್ದು, ಕೆಇಎ ನೇಮಕಾತಿ ನಿಯಮಗಳಲ್ಲಿ ಯಾವ ರೀತಿಯ ಬದಲಾವಣೆ ಆಗಲಿದೆ ಎಂಬುದರ ಬಗ್ಗೆ ಕುತೂಹಲ ಹೆಚ್ಚಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com