ಹಂಪಿಯಲ್ಲಿ ಅಕ್ರಮ ಹೋಂಸ್ಟೇಗಳಿಗೆ ಅನುಮತಿ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದೂರು ದಾಖಲು

ಗಂಗಾವತಿಯ HWHAMA ಮತ್ತು ಪ್ರವಾಸಿ ಸ್ಥಳಗಳಲ್ಲಿ ಮಾದಕ ದ್ರವ್ಯಗಳ ಭೀತಿ ಮತ್ತು ಅಕ್ರಮ ಮದ್ಯ ಮಾರಾಟದ ದೂರುಗಳನ್ನು ಉಪ ಲೋಕಾಯುಕ್ತರು ಸ್ವೀಕರಿಸಿದ್ದಾರೆ.
Upa Lokayukta Justice B Veerappa visits Virupaksha temple
ಹಂಪಿ ವಿರೂಪಾಕ್ಷ ದೇವಾಲಯಕ್ಕೆ ಲೋಕಾಯಕ್ತ ನ್ಯಾ, ವೀರಪ್ಪ ಭೇಟಿ
Updated on

ಹೊಸಪೇಟೆ: ಹಂಪಿಯ ಸಂರಕ್ಷಿತ ಪ್ರದೇಶಗಳಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆಗಳು ಮತ್ತು ಹೋಂಸ್ಟೇಗಳಿಗೆ ಅವಕಾಶ ನೀಡಿದ ಆರೋಪದ ಮೇಲೆ 54 ಅಧಿಕಾರಿಗಳ ವಿರುದ್ಧ ಲೋಕಾಯಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ ಮತ್ತು ಸೆಪ್ಟೆಂಬರ್ 1 ರೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ವಿಶ್ವ ಪರಾಂಪರಿಕ ತಾಣದಲ್ಲಿಸಂರಕ್ಷಣಾ ನಿಯಮಗಳ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರು, ಹಂಪಿ ವಿಶ್ವ ಪರಂಪರೆಯ ಪ್ರದೇಶ ನಿರ್ವಹಣಾ ಪ್ರಾಧಿಕಾರದ (HWHAMA) ಅಧಿಕಾರಿಗಳು, ಸಹಾಯಕ ಆಯುಕ್ತರು, ತಹಶೀಲ್ದಾರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಹೊಸಪೇಟೆ ಮತ್ತು ಕೊಪ್ಪಳ ನ್ಯಾಯವ್ಯಾಪ್ತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ನೋಟಿಸ್ ನೀಡಿದ್ದಾರೆ.

ಹಂಪಿ ವಿಶ್ವ ಪರಂಪರೆಯ ಪ್ರದೇಶ ನಿರ್ವಹಣಾ ಪ್ರಾಧಿಕಾರದ (HWHAMA) ಕೋರ್ ವಲಯ, ಬಫರ್ ವಲಯ ಮತ್ತು ಬಾಹ್ಯ ವಲಯದಲ್ಲಿ 200 ಅಕ್ರಮ ಹೋಂಸ್ಟೇಗಳಿವೆ. ಅದೇ ರೀತಿ, ಹಂಪಿ ದೇವಾಲಯದ ಬಳಿಯ ಜನತಾ ಕಾಲೋನಿಯಲ್ಲಿ 250 ಅಕ್ರಮ ಹೋಂಸ್ಟೇಗಳಿವೆ ಎಂದು ಉಪ ಲೋಕಾಯುಕ್ತರು ತಿಳಿಸಿದ್ದಾರೆ.

ಗಂಗಾವತಿಯ HWHAMA ಮತ್ತು ಪ್ರವಾಸಿ ಸ್ಥಳಗಳಲ್ಲಿ ಮಾದಕ ದ್ರವ್ಯಗಳ ಭೀತಿ ಮತ್ತು ಅಕ್ರಮ ಮದ್ಯ ಮಾರಾಟದ ದೂರುಗಳನ್ನು ಉಪ ಲೋಕಾಯುಕ್ತರು ಸ್ವೀಕರಿಸಿದ್ದಾರೆ.

Upa Lokayukta Justice B Veerappa visits Virupaksha temple
ಹಂಪಿ: ಗಬ್ಬೆದ್ದು ನಾರುತ್ತಿದೆ ತುಂಗಭದ್ರಾ ನದಿ; 'ಪವಿತ್ರ ಸ್ನಾನ' ಮಾಡಿ ತ್ಯಾಜ್ಯ ಎಸೆಯುತ್ತಿರುವ ಪ್ರವಾಸಿಗರು!

ಯುನೆಸ್ಕೋ ಪಟ್ಟಿ ಮಾಡಿರುವ ಪರಂಪರೆಯ ತಾಣದ ಕೋರ್ ವಲಯ, ಬಫರ್ ವಲಯ ಮತ್ತು ಬಾಹ್ಯ ಪ್ರದೇಶಗಳಲ್ಲಿ ಅನಧಿಕೃತ ಹೋಂಸ್ಟೇಗಳು ಸೇರಿದಂತೆ ವಾಣಿಜ್ಯ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಹಂಪಿಯ ವಿಶ್ವ ಪರಂಪರೆಯ ಪ್ರದೇಶ ನಿರ್ವಹಣಾ ಪ್ರಾಧಿಕಾರದ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಹಂಪಿಯ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪ್ರಾಮುಖ್ಯತೆಯ ರಕ್ಷಣೆಗಾಗಿ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಲಾಗಿದ್ದರೂ, ನಿರ್ಬಂಧಿತ ಪ್ರದೇಶಗಳಲ್ಲಿ ಅನಧಿಕೃತ ವಾಣಿಜ್ಯ ನಿರ್ಮಾಣಗಳು, ರೆಸಾರ್ಟ್‌ಗಳು ಮತ್ತು ಹೋಂಸ್ಟೇಗಳನ್ನು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ ಎಂದು ದೂರುಗಳು ಸಲ್ಲಿಕೆಯಾಗಿವೆ.

ಯುನೆಸ್ಕೋ ಪರಂಪರೆ ಸಂರಕ್ಷಣಾ ಮಾನದಂಡಗಳ ಪ್ರಕಾರ, ಹಂಪಿಯ ಪುರಾತತ್ವ ಮತ್ತು ಸಾಂಸ್ಕೃತಿಕ ಮಹತ್ವದ ಮೇಲೆ ಪರಿಣಾಮ ಬೀರುವ ಚಟುವಟಿಕೆಗಳನ್ನು ಕೋರ್ ಮತ್ತು ಬಫರ್ ವಲಯಗಳಲ್ಲಿ ನಿಷೇಧಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಅಂತಹ ಉಲ್ಲಂಘನೆಗಳನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ ಮತ್ತು ಕೆಲವು ಸಂದರ್ಭಗಳಲ್ಲಿ, ನಿಗದಿತ ನಿಯಮಗಳಿಗೆ ವಿರುದ್ಧವಾಗಿ ಚಟುವಟಿಕೆಗಳಿಗೆ ಅವಕಾಶ ನೀಡಿದ್ದಾರೆ ಎಂದು ದೂರುಗಳಲ್ಲಿ ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com