ಚಾಮರಾಜನಗರ: ತಂಗಿಯೊಂದಿಗೆ ಅಕ್ರಮ ಸಂಬಂಧ; ಯುವಕನನ್ನು ಬರ್ಬರವಾಗಿ ಹತ್ಯೆಗೈದ ಅಣ್ಣ!

ಕೊಲೆಯಾದ ಯುವಕನನ್ನು ಕೊಕ್ಕನಹಳ್ಳಿ ಗ್ರಾಮದ ನಿವಾಸಿ ಮಹೇಶ್(26) ಎಂದು ಗುರುತಿಸಲಾಗಿದ್ದು, ಅದೇ ಗ್ರಾಮದ ನಿವಾಸಿ ಕುಮಾರಸ್ವಾಮಿ ಎಂಬುವವರು ಕೊಲೆ ಮಾಡಿದ್ದಾರೆ.
Chamarajanagar: Man stabbed to death over illicit affair
ಪೊಲೀಸ್ ಸಿಬ್ಬಂದಿ
Updated on

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಕೊಕ್ಕನಹಳ್ಳಿ ಗ್ರಾಮದಲ್ಲಿ ಅಕ್ರಮ ಸಂಬಂಧದ ವಿಚಾರವಾಗಿ ಯುವಕನೊಬ್ಬನ ಬರ್ಬರವಾಗಿ ಕೊಲೆ ಮಾಡಲಾಗಿದೆ.

ಕೊಲೆಯಾದ ಯುವಕನನ್ನು ಕೊಕ್ಕನಹಳ್ಳಿ ಗ್ರಾಮದ ರುದ್ರಶೆಟ್ಟಿ ಅವರ ಪುತ್ರ ಮಹೇಶ್(26) ಎಂದು ಗುರುತಿಸಲಾಗಿದ್ದು, ಅದೇ ಗ್ರಾಮದ ನಿವಾಸಿ ಕುಮಾರಸ್ವಾಮಿ ಎಂಬುವವರು ಕೊಲೆ ಮಾಡಿದ್ದಾರೆ.

ಕುಮಾರಸ್ವಾಮಿ ಅವರ ಅವರ ತಂಗಿಯೊಂದಿಗೆ ಮಹೇಶ್ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಈ ಸಂಬಂಧ ಇಬ್ಬರ ನಡುವೆ ಆಗಾಗಿ ಜಗಳ ನಡೆಯುತ್ತಿತ್ತು ಎನ್ನಲಾಗಿದ್ದು, ಇದೀಗ ಆ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

Chamarajanagar: Man stabbed to death over illicit affair
ಮಂಡ್ಯ: ಕಾರು ಅಪಘಾತದಲ್ಲಿ ಯುವತಿ ಅನುಮಾನಾಸ್ಪದ ಸಾವು; ಬರ್ತ್‌ಡೇ ಪಾರ್ಟಿಗೆ ಕರೆದು ರೇಪ್‌ಗೆ ಯತ್ನಿಸಿ, ಕೊಲೆ ಆರೋಪ!

ಸ್ಥಳಕ್ಕೆ ಚಾಮರಾಜನಗರ ಎಎಸ್ಪಿ, ಡಿವೈಎಸ್ಪಿ ಹಾಗೂ ರಾಮಸಮುದ್ರ ಪೂರ್ವ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಸಂಬಂಧ ರಾಮಸಮುದ್ರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಮಾರಸ್ವಾಮಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com