ಧಾರವಾಡದಲ್ಲಿ ಘೋರ ದುರಂತ: ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯಕರನೂ ನೇಣಿಗೆ ಶರಣು!

ನಗರದ ವಾಚ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ತರುಣ್ ಸಾಗರ್ ಇಂದು ದಾನೇಶ್ವರಿ ನಗರದ ಪಿಜಿ ಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
21-year-old dies by suicide in Dharwad
ತರುಣ್ ಸಾಗರ್ - ಮೇಘಾ
Updated on

ಧಾರವಾಡ: ತನ್ನ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು, ಆಕೆಯ ಪ್ರಿಯಕರ ತರುಣ್ ಸಾಗರ್ ಕುರಕುರಿ(21) ಸಹ ನೇಣಿಗೆ ಶರಣಾದ ಘಟನೆ ದಾರುಣ ಘಟನೆ ಗುರುವಾರ ಧಾರವಾಡ ತಾಲೂಕಿನ ಕೋಟಬಾಗಿ ಗ್ರಾಮದಲ್ಲಿ ನಡೆದಿದೆ.

ನಗರದ ವಾಚ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ತರುಣ್ ಸಾಗರ್ ಇಂದು ದಾನೇಶ್ವರಿ ನಗರದ ಪಿಜಿ ಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಿನ್ನೆ ತರುಣ್ ಸಾಗರ್ ಪ್ರೇಯಸಿ ಮೇಘಾ ಗುಬ್ಬನ್ನವರ್(20) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಳು. ಮನೆಯಲ್ಲಿ ಹೆಚ್ಚು ಮೊಬೈಲ್ ಬಳಸುತ್ತಿದ್ದೀಯ ಎಂದು ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಳು ಎನ್ನಲಾಗಿದೆ. ಮೇಘಾ ಆತ್ಮಹತ್ಯೆ ಸುದ್ದಿ ಕೇಳಿದ ತರುಣ್ ತನ್ನ ಸ್ನೇಹಿತನ ರೂಮ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

21-year-old dies by suicide in Dharwad
ಎಂಗೇಜ್ಮೆಂಟ್ ಮಾಡಿಕೊಂಡಿದ್ದ, SBI ಉದ್ಯೋಗಿಗಳಾಗಿದ್ದ ಯುವ ಜೋಡಿ ಕರ್ನಾಟಕ - ಕೇರಳದಲ್ಲಿ ಶವವಾಗಿ ಪತ್ತೆ; ಕೊಲೆಯೋ, ಆತ್ಮಹತ್ಯೆಯೋ?

ತರುಣ್, ಗೆಳೆಯನ ರೂಮ್‌ನಲ್ಲಿ ಬಂದು ತಂಗಿದ್ದ‌. ಕಳೆದ ರಾತ್ರಿ ಗೆಳೆಯನ ಮುಂದೆ ಹುಡುಗಿ ಜೊತೆ ಜಗಳವಾಗಿದೆ, ಆಕೆಯ ಸಹೋದರನಿಗೆ ಈ ವಿಷಯ ಗೊತ್ತಾಗಿದೆ ಎಂದು ಹೇಳಿದ್ದ ಎನ್ನಲಾಗಿದೆ.

ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮೇಘಾ ಹಾಗೂ ತರುಣ್ ಮಧ್ಯೆ ಪ್ರೀತಿ ಇತ್ತು ಎಂಬುದು ಇದೀಗ ಗೊತ್ತಾಗಿದೆ. ಈ‌ ಬಗ್ಗೆ ತರಣ್ ಸಾಗರ್ ಪೋಷಕರಿಗೆ ಕೇಳಿದರೆ ಪ್ರೇಮದ‌ ಬಗ್ಗೆ ಗೊತ್ತಿರಲಿಲ್ಲ. ಬೆಳಗ್ಗೆ ಫೋನ್‌ ಎತ್ತದೇ ಇದ್ದಾಗ ಹುಡುಕಾಟ ನಡೆಸಿದಾಗ, ಪ್ರಕರಣ ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ.

ಸ್ಥಳಕ್ಕೆ ವಿದ್ಯಾಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com