

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಾ ಸಂಘ (RSS) ಸೇರಿದಂತೆ ನೋಂದಾಯಿಸದ ಸಂಘಟನೆಗಳು ಸಾರ್ವಜನಿಕ ಸ್ಥಳಗಳನ್ನು ಬಳಸದಂತೆ ನಿಯಂತ್ರಣ ಹೇರುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸಾರ್ವಜನಿಕ ಪ್ರದೇಶ, ಪ್ರವೇಶ ನಿಯಂತ್ರಣ ವಿಧೇಯಕ–2026 ಕಾಯ್ದೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.
RSS ಕಾನೂನು ಚೌಕಟ್ಟಿನಿಂದ ಹೊರಗಿದ್ದು ಅದನ್ನು ಕಾನೂನು ಚೌಕಟ್ಟಿನ ಅಡಿಗೆ ತರುವ ಉದ್ದೇಶವಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನಂತರ ಈ ಮಸೂದೆ ಮಂಡನೆಗೆ ವೇದಿಕೆ ಸಿದ್ಧವಾಗಿದೆ. ಈ ಅಧಿವೇಶನಲ್ಲಿ ವಿಧೇಯಕ ಮಂಡನೆಗೆ ಸಂಪುಟ ಒಪ್ಪಿಗೆ ನೀಡಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಯಾವುದೇ ಸಂಘಟನೆ ಅಥವಾ ಸಂಸ್ಥೆ ಕಾರ್ಯಕ್ರಮ ಆಯೋಜಿಸುವ ಮುನ್ನ ಅನುಮತಿ ಪಡೆಯುವುದು ಈ ವಿಧೇಯಕದ ಅಡಿ ಕಡ್ಡಾಯವಾಗಿದೆ. ಇದರೊಂದಿಗೆ ಸಾರ್ವಜನಿಕವಾಗಿ RSS ನಡೆಸುವ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ.
ಚಿತ್ತಾಪುರದಲ್ಲಿ RSS ಪಥಸಂಚಲನ ಆಯೋಜನೆಗೆ ಅನುಮತಿ ನಿರಾಕರಿಸಿದ ವಿಚಾರ ಈ ಹಿಂದೆ ಭಾರೀ ಚರ್ಚೆಗೆ ಕಾರಣವಾಗಿತ್ತು. ಅನುಮತಿ ನಿರಾಕರಣೆಯನ್ನು ಪ್ರಶ್ನಿಸಿ RSS ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿತ್ತು. ನಂತರ ಕೋರ್ಟ್ ಕೆಲವು ಷರತ್ತುಗಳೊಂದಿಗೆ ಪಥಸಂಚಲನಕ್ಕೆ ಅವಕಾಶ ನೀಡಿತ್ತು.