ಮಂಗಳೂರಿನಲ್ಲಿ ಕಾರು ಡಿಕ್ಕಿ: ರಸ್ತೆ ಬದಿಯಲ್ಲಿ ನಿಂತಿದ್ದ ಪಾದಚಾರಿ ಗಂಭೀರ

ಭಾರಿ ವಾಹನ ಸಂಚಾರದ ನಡುವೆ ತಲಪಾಡಿಯಲ್ಲಿ ಶರಣಪ್ಪ ಅವರು ಮತ್ತಿಬ್ಬರೊಂದಿಗೆ ರಸ್ತೆ ವಿಭಜಕದ ಬಳಿ ನಿಂತು ಮಾತನಾಡುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Pedestrian seriously injured after being hit by car in Mangaluru
ಅಪಘಾತ (ಸಾಂದರ್ಭಿಕ ಚಿತ್ರ)
Updated on

ಮಂಗಳೂರು: ನಗರದ ಹೊರವಲಯದಲ್ಲಿ ಗುರುವಾರ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ 50 ವರ್ಷದ ಪಾದಚಾರಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡ ವ್ಯಕ್ತಿಯನ್ನು ಗದಗ ನಿವಾಸಿ ಶರಣಪ್ಪ ಎಂದು ಗುರುತಿಸಲಾಗಿದೆ. ಭಾರಿ ವಾಹನ ಸಂಚಾರದ ನಡುವೆ ತಲಪಾಡಿಯಲ್ಲಿ ಶರಣಪ್ಪ ಅವರು ಮತ್ತಿಬ್ಬರೊಂದಿಗೆ ರಸ್ತೆ ವಿಭಜಕದ ಬಳಿ ನಿಂತು ಮಾತನಾಡುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಜಾಗರೂಕ ಹಾಗೂ ನಿರ್ಲಕ್ಷ್ಯದ ರೀತಿಯಲ್ಲಿ ಚಲಾಯಿಸಲಾಗುತ್ತಿತ್ತು ಎನ್ನಲಾದ ಕೇರಳ ನೋಂದಣಿಯ ಕಾರು ಶರಣಪ್ಪ ಅವರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಅವರು ಹಲವು ಅಡಿ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ.

Pedestrian seriously injured after being hit by car in Mangaluru
ಮೃತ್ಯುಕೂಪವಾದ ಬೆಂಗಳೂರು ರಸ್ತೆಗಳು: ಮಾಧ್ಯಮದವರಿಗೇ ತಪ್ಪದ ರಸ್ತೆ ಗುಂಡಿಗಳ ಗಂಡಾಂತರ, TNIE ಇಬ್ಬರು ಪತ್ರಕರ್ತರಿಗೆ ಕಾಲು ಮುರಿತ..!

ಶರಣಪ್ಪ ಅವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com