'ಸಚಿವ ಜಮೀರ್ ದೇಶದ್ರೋಹಿ ಅನ್ನೋದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಕಾಂಗ್ರೆಸ್ ಸರ್ಕಾರದ ನಿಜ ಬಣ್ಣ ಮತ್ತೊಮ್ಮೆ ಬಯಲಾಗಿದೆ': ಆರ್ ಅಶೋಕ್

ಸಚಿವ ಜಮೀರ್ ಅಹ್ಮದ್ ಖಾನ್ ಮನವಿಗೆ ನೀಡಿರುವ ಕಾರಣವೇನು? ಸ್ಥಳೀಯ ಸಂಸ್ಥೆಗಳ ಚುನಾವಣೆಗಳು, ಮುಂಬರುವ ವಿಧಾನಸಭಾ ಉಪಚುನಾವಣೆಗಳು ಹಾಗೂ ಪಕ್ಷದ ಆಂತರಿಕ ರಾಜಕೀಯ ಚಟುವಟಿಕೆಗಳ ಮೇಲೆ ಗಮನಹರಿಸಬೇಕಿರುವುದರಿಂದ ತಮ್ಮ ಬಳಿ ಸಮಯವಿಲ್ಲ ಎಂದು ಅವರು ಹೇಳಿದ್ದಾರೆ.
Zameer Ahmed Khan letter
ಜಮೀರ್ ಅಹ್ಮದ್ ಖಾನ್ ಬರೆದಿರುವ ಪತ್ರ
Updated on

ಕರ್ನಾಟಕದ ಕಾಂಗ್ರೆಸ್‌ ಸರ್ಕಾರದ ನಿಜವಾದ ಮುಖ ಹಾಗೂ ನಮ್ಮ ಮಾತೃಭೂಮಿಯ ಬಗ್ಗೆ ಅದರ ಸಂಪೂರ್ಣ ಅಗೌರವವನ್ನು ನೋಡಿ, ಸಚಿವ ಬಿ. ಝಡ್. ಜಮೀರ್ ಅಹ್ಮದ್ ಖಾನ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕೃತವಾಗಿ ಪತ್ರ ಬರೆದು, ವಿಜಯನಗರ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ತ್ರಿವರ್ಣ ಧ್ವಜಾರೋಹಣ ಮಾಡುವ ಕರ್ತವ್ಯದಿಂದ ವಿನಾಯಿತಿ ನೀಡುವಂತೆ ಮನವಿ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ.

ಸಚಿವ ಜಮೀರ್ ಅಹ್ಮದ್ ಖಾನ್ ಮನವಿಗೆ ನೀಡಿರುವ ಕಾರಣವೇನು? ಸ್ಥಳೀಯ ಸಂಸ್ಥೆಗಳ ಚುನಾವಣೆಗಳು, ಮುಂಬರುವ ವಿಧಾನಸಭಾ ಉಪಚುನಾವಣೆಗಳು ಹಾಗೂ ಪಕ್ಷದ ಆಂತರಿಕ ರಾಜಕೀಯ ಚಟುವಟಿಕೆಗಳ ಮೇಲೆ ಗಮನಹರಿಸಬೇಕಿರುವುದರಿಂದ ತಮ್ಮ ಬಳಿ ಸಮಯವಿಲ್ಲ ಎಂದು ಅವರು ಹೇಳಿದ್ದಾರೆ.

ಇದು ನಮ್ಮ ಸಂವಿಧಾನಕ್ಕೆ ಸಂಪೂರ್ಣ ಅವಮಾನ ಮತ್ತು ಕೋಟ್ಯಂತರ ಭಾರತೀಯರಿಗೆ ನೇರ ಅಪಮಾನ. ಸ್ವಾತಂತ್ರ್ಯ ದಿನದಂದು ರಾಷ್ಟ್ರಧ್ವಜ ಹಾರಿಸುವ ಪವಿತ್ರ ಕರ್ತವ್ಯಕ್ಕಿಂತ ಪಕ್ಷದ ರಾಜಕಾರಣಕ್ಕೆ ಹೆಚ್ಚಿನ ಆದ್ಯತೆ ನೀಡುವುದನ್ನು ಸಚಿವರೊಬ್ಬರು ಹೇಗೆ ಸಮರ್ಥಿಸಿಕೊಳ್ಳಬಹುದೇ ಎಂದು ಅಶೋಕ್ ಕೇಳಿದ್ದಾರೆ.

ಸಚಿವ ಜಮೀರ್ ಮತ್ತು ಕರ್ನಾಟಕ ಕಾಂಗ್ರೆಸ್‌ಗೆ ರಾಜಕೀಯ ಅಧಿಕಾರ, ಚುನಾವಣಾ ಕಾರ್ಯತಂತ್ರ ಹಾಗೂ ಪಕ್ಷದ ನಿಷ್ಠೆ ರಾಷ್ಟ್ರದ ಹೆಮ್ಮೆ, ಸ್ವಾತಂತ್ರ್ಯ ಹೋರಾಟಗಾರರು ಮತ್ತು ಪವಿತ್ರ ತ್ರಿವರ್ಣ ಧ್ವಜಕ್ಕಿಂತಲೂ ಸದಾ ಮುಖ್ಯವಾಗಿರುವಂತೆ ಕಾಣುತ್ತಿದೆ.

ಇಂತಹ ಅಹಂಕಾರಿ ಮತ್ತು ರಾಷ್ಟ್ರವಿರೋಧಿ ಮನೋಭಾವ ಕಾಂಗ್ರೆಸ್‌ ಸಂಸ್ಕೃತಿಯಲ್ಲೇ ಆಳವಾಗಿ ಬೇರೂರಿದೆ. ಪಕ್ಷದ ನಾಯಕರು ಚುನಾವಣಾ ಲೆಕ್ಕಾಚಾರಗಳಿಗೆ ದೇಶದ ಸ್ವಾತಂತ್ರ್ಯವನ್ನು ಗೌರವಿಸುವುದಕ್ಕಿಂತ ಹೆಚ್ಚಿನ ಆದ್ಯತೆ ನೀಡಿದಾಗ, ಅವರ ನಿಜವಾದ ನಿಷ್ಠೆ ಎಲ್ಲಿದೆ ಎಂಬುದು ಬಹಿರಂಗವಾಗುತ್ತದೆ.

Zameer Ahmed Khan letter
'ಸಮಯವಿಲ್ಲ, ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆ, ಧ್ವಜಾರೋಹಣ ನನಗೆ ಬೇಡ': ಜಮೀರ್ ಅಹ್ಮದ್ ಸಿಎಂಗೆ ಪತ್ರ

ರಾಷ್ಟ್ರಧ್ವಜವನ್ನು ಎರಡನೇ ಆದ್ಯತೆಯಾಗಿ ಪರಿಗಣಿಸುವ ಸಚಿವರು ಇನ್ನು ಒಂದು ಕ್ಷಣವೂ ಸಾರ್ವಜನಿಕ ಹುದ್ದೆಯಲ್ಲಿ ಮುಂದುವರಿಯುವ ನೈತಿಕ ಮತ್ತು ಸಾಂವಿಧಾನಿಕ ಹಕ್ಕನ್ನು ಕಳೆದುಕೊಂಡಿದ್ದಾರೆ.

ರಾಜ್ಯಕ್ಕೆ ಹಾಗೂ ರಾಷ್ಟ್ರಧ್ವಜಕ್ಕೆ ಅವಮಾನ ತಂದಿರುವ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಮೀರ್ ಅಹ್ಮದ್ ಖಾನ್ ಅವರನ್ನು ತಕ್ಷಣ ಸಚಿವ ಸಂಪುಟದಿಂದ ವಜಾಗೊಳಿಸಬೇಕು. ತ್ರಿವರ್ಣ ಧ್ವಜಕ್ಕಿಂತ ಪಕ್ಷದ ಅಧಿಕಾರಕ್ಕೆ ಆದ್ಯತೆ ನೀಡಿದ ಆರೋಪಕ್ಕೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ ನಾಯಕತ್ವವು ಕರ್ನಾಟಕದ ಜನತೆ ಹಾಗೂ ಇಡೀ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಖಂಡನೆ

ಸಚಿವ ಜಮೀರ್ ಅಹ್ಮದ್ ಖಾನ್ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರ ಸಾಕಷ್ಟು ವೈರಲ್ ಆಗಿದ್ದು, ವಿರೋಧ ಪಕ್ಷದ ನಾಯಕರು, ಸಾರ್ವಜನಿಕರು ಟೀಕಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com