ರಾಜ್ಯ ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್: ವೇತನ ಹಿಂಬಾಕಿ ಬಿಡುಗಡೆ

ಇಂದು ಬೆಂಗಳೂರಿನ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ 15ಕ್ಕೂ ಹೆಚ್ಚು ಕಾರ್ಮಿಕ ಸಂಘಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ನಂತರ ಸಾರಿಗೆ ಸಚಿವರು ಈ ಘೋಷಣೆ ಮಾಡಿದರು.
Karnataka Govt releases ₹170 crore towards pending salaries of transport employees
ಸಾರಿಗೆ ನಿಗಮ
Updated on

ಬೆಂಗಳೂರು: ರಾಜ್ಯ ಸರ್ಕಾರ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ಬಾಕಿ ವೇತನಕ್ಕಾಗಿ 170 ಕೋಟಿ ರೂ. ಬಿಡುಗಡೆ ಮಾಡಿರುವುದಾಗಿ ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಶುಕ್ರವಾರ ತಿಳಿಸಿದ್ದಾರೆ.

ಇಂದು ಬೆಂಗಳೂರಿನ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ 15ಕ್ಕೂ ಹೆಚ್ಚು ಕಾರ್ಮಿಕ ಸಂಘಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ನಂತರ ಸಾರಿಗೆ ಸಚಿವರು ಈ ಘೋಷಣೆ ಮಾಡಿದರು. ಸಭೆಯಲ್ಲಿ ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಲಾಯಿತು.

2025 ರಲ್ಲಿ ರಾಜ್ಯ ಸರ್ಕಾರ ಸಾರಿಗೆ ನೌಕರರ ವೇತನವನ್ನು ಪರಿಷ್ಕರಿಸಿದ್ದರಿಂದ, 1271 ಕೋಟಿ ರೂಪಾಯಿ ವೇತನ ಹಿಂಬಾಕಿ ಕೊಡಬೇಕಿತ್ತು. ಈ ಹಿಂದೆ ಸರ್ಕಾರ 450 ಕೋಟಿ ಬಿಡುಗಡೆ ಮಾಡಿತ್ತು. ಉಳಿದ 821 ಕೋಟಿ ಹಿಂಬಾಕಿಯಲ್ಲಿ ಇಂದು ಮತ್ತೆ 170 ಕೋಟಿ ರೂ. ಬಿಡುಗಡೆ ಮಾಡಿದೆ. ಉಳಿದ 651 ಕೋಟಿಯನ್ನು ಹಂತ ಹಂತವಾಗಿ ಬಿಡುಗಡೆ ಮಾಡುವುದಾಗಿ ಸಾರಿಗೆ ಸಚಿವ ಬೈರತಿ ಬಸವರಾಜ್ ಅವರು ಭರವಸೆ ನೀಡಿದ್ದಾರೆ.

Karnataka Govt releases ₹170 crore towards pending salaries of transport employees
ರಾಜ್ಯ ಸರ್ಕಾರಿ ನೌಕರರಿಗೆ ಬಿಗ್ ಶಾಕ್: ಆಗಸ್ಟ್‌ 20ರಿಂದ APAR, ಆಸ್ತಿ ವಿವರ ಆನ್‌ಲೈನ್‌ನಲ್ಲಿ ಸಲ್ಲಿಕೆ ಕಡ್ಡಾಯ..!

ಸಾರಿಗೆ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕಲ್ಪಿಸಲಾಗುವುದು. ನಾಲ್ಕು ನಿಗಮಗಳಿಗೆ ಯೋಜನೆ ವಿಸ್ತರಣೆ ಆಗಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com