ಹನೂರು ಶೂಟೌಟ್ ಪ್ರಕರಣ: ನಮ್ಮ ರಾಜ್ಯದ ಆಡಳಿತದಲ್ಲಿ ಮೂಗು ತೂರಿಸಬೇಡಿ, ನಿಮ್ಮ ಕೆಲಸ ನೋಡ್ಕೊಳ್ಳಿ; ತಮಿಳುನಾಡಿಗೆ ಸಿಎಂ ಡಿಕೆಶಿ ವಾರ್ನಿಂಗ್!

ಆಗಸ್ಟ್ 15 ರಂದು ಚಾಮರಾಜನಗರದಲ್ಲಿ ತಮಿಳರು ಎಂದು ಹೇಳಲಾದ ಮೂವರು ವ್ಯಕ್ತಿಗಳ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂಬ ತಮಿಳುನಾಡಿನ ರಾಜಕಾರಣಿಗಳ ಬೇಡಿಕೆಯನ್ನು ಅವರು ತಳ್ಳಿಹಾಕಿದರು.
DK Shivakumar
ಡಿಕೆ ಶಿವಕುಮಾರ್
Updated on

ಬೆಂಗಳೂರು: ಹನೂರು ವನ್ಯಜೀವಿ ವಲಯದಲ್ಲಿ ಮೂವರು ಶಂಕಿತ ಬೇಟೆಗಾರರ ​​ಹತ್ಯೆಗೆ ಸಂಬಂಧಿಸಿದಂತೆ ತಮಿಳುನಾಡು ರಾಜಕಾರಣಿಗಳು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಕರ್ನಾಟಕವು ತನ್ನ ಪ್ರದೇಶದ ಪಾವಿತ್ರ್ಯವನ್ನು ರಕ್ಷಿಸುತ್ತದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಎಚ್ಚರಿಕೆ ನೀಡಿದ್ದಾರೆ.

ಆಗಸ್ಟ್ 15 ರಂದು ಚಾಮರಾಜನಗರದಲ್ಲಿ ತಮಿಳರು ಎಂದು ಹೇಳಲಾದ ಮೂವರು ವ್ಯಕ್ತಿಗಳ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂಬ ತಮಿಳುನಾಡಿನ ರಾಜಕಾರಣಿಗಳ ಬೇಡಿಕೆಯನ್ನು ಅವರು ತಳ್ಳಿಹಾಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ತಮಿಳುನಾಡು ತನ್ನದೇ ಆದ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ತಾವೇ ನಿರ್ವಹಿಸಿಕೊಳ್ಳಬೇಕು. ಇದು ಒಕ್ಕೂಟ ರಚನೆ. ಯಾವುದೇ ರಾಜ್ಯವು ಬೇರೆ ಯಾವುದೇ ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಜನರು ಈ ಮೂಲಭೂತ ತಿಳುವಳಿಕೆಯನ್ನು ಹೊಂದಿರಬೇಕು. ತಮಿಳುನಾಡಿನ ಯಾವುದೇ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳಲ್ಲಿ ನಾನು ಭಾಗಿಯಾಗಲು ಸಾಧ್ಯವಿಲ್ಲ. ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ಸಮಸ್ಯೆಗಳಿವೆ' ಎಂದು ತಿಳಿಸಿದರು.

ಕರ್ನಾಟಕ ಅರಣ್ಯ ಇಲಾಖೆಗೆ ಸಂಬಂಧಿಸಿದ ಗುಂಡಿನ ದಾಳಿ ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಪಕ್ಷವನ್ನು ಮೀರಿ ಸದಸ್ಯರು ಒತ್ತಾಯಿಸಿದ ವಿಷಯ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಬೆನ್ನಲ್ಲೇ ಅವರ ಹೇಳಿಕೆಗಳು ಬಂದಿವೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಆಂಥೋನಿ ಸ್ಯಾಮಿ, ಜಾನ್ ರೋಸ್ ಪೀಟರ್ ಮತ್ತು ಕುಮಾರ್ ಅವರನ್ನು ಆಗಸ್ಟ್ 15ರ ಮುಂಜಾನೆ ಕಾವೇರಿ ವನ್ಯಜೀವಿ ಅಭಯಾರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಗುಂಡಿಕ್ಕಿ ಕೊಂದಿತು.

DK Shivakumar
Watch | ಅರಣ್ಯ ಸಿಬ್ಬಂದಿ ಗುಂಡಿಗೆ ಮೂವರು ತಮಿಳರು ಸಾವು; ವಿಜಯ್ ಖಂಡನೆ; ಡಿಕೆಶಿ ಹೇಳಿದ್ದೇನು?

ಈ ಘಟನೆ ನಂತರ, ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಆಪಾದಿತ ಕ್ರೂರ ಹತ್ಯೆಯನ್ನು ಬಲವಾಗಿ ಖಂಡಿಸಿದರು ಮತ್ತು ಈ ಘೋರ ಘಟನೆಯ ಬಗ್ಗೆ ಉನ್ನತ ಮಟ್ಟದ ಸಮಿತಿಯಿಂದ ನ್ಯಾಯಯುತ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಕರ್ನಾಟಕದ ಅಧಿಕಾರಿಗಳ ಪ್ರಕಾರ, ಬೇಟೆಯಾಡುವಿಕೆ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದ ಅರಣ್ಯ ಸಿಬ್ಬಂದಿ ಮೇಲೆ ಗುಂಪಿನಿಂದ ಗುಂಡಿನ ದಾಳಿ ನಡೆಯಿತು. ನಂತರವೇ ಸಿಬ್ಬಂದಿ ಆತ್ಮರಕ್ಷಣೆಗಾಗಿ ಪ್ರತಿಯಾಗಿ ಗುಂಡು ಹಾರಿಸಿದರು. ಇದರ ಪರಿಣಾಮವಾಗಿ ಮೂವರು ಸಾವಿಗೀಡಾಗಿದ್ದಾರೆ ಎಂದಿದ್ದಾರೆ.

ವಿಜಯ್ ಅವರ ಟೀಕೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಪ್ರತಿಯೊಂದು ಹೇಳಿಕೆಯ ಬಗ್ಗೆಯೂ ಪ್ರತಿಕ್ರಿಯಿಸಲು ಬಯಸುವುದಿಲ್ಲ. ನಮ್ಮ ರಾಜ್ಯವನ್ನು ಹೇಗೆ ರಕ್ಷಿಸಿಕೊಳ್ಳಬೇಕೆಂದು ನಮಗೆ ತಿಳಿದಿದೆ ಎಂದು ಅವರು ತಿಳಿದಿರಬೇಕು. ಅವರು ತಮ್ಮ ಕೆಲಸವನ್ನು ಮಾಡಲಿ; ನಾವು ನಮ್ಮದನ್ನು ಮಾಡುತ್ತೇವೆ. ನಾನು ಅವರ ಆಡಳಿತದಲ್ಲಿ ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ. ರಾಜ್ಯದ ಘನತೆ, ಸಮಗ್ರತೆ ಮತ್ತು ಸಾಂವಿಧಾನಿಕ ಅಧಿಕಾರವನ್ನು ಕಾಪಾಡುವುದು ನಮ್ಮ ಆದ್ಯತೆಯಾಗಿದೆ' ಎಂದು ಅವರು ಹೇಳಿದರು.

'ನಾನು ಎಲ್ಲದರ ಬಗ್ಗೆಯೂ ಕಾಮೆಂಟ್ ಮಾಡಲು ಬಯಸುವುದಿಲ್ಲ. ಇದು ಸಾಮಾನ್ಯ ವಿಷಯ. ಅವರು ತಮ್ಮ ಕೆಲಸವನ್ನು ಮಾಡಬೇಕು; ನಾವು ನಮ್ಮ ಕೆಲಸವನ್ನು ಮಾಡಬೇಕು" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com