ವಾಲ್ಮೀಕಿ ನಿಗಮ ಹಗರಣ: Prosecutionಗೆ ರಾಜ್ಯಪಾಲರ ಅನುಮತಿ ಕೋರಿದ CBI, ಸಚಿವ ನಾಗೇಂದ್ರಗೆ ಹೆಚ್ಚಿದ ಸಂಕಷ್ಟ..!

ರಾಜ್ಯಪಾಲರು ಈ ಕುರಿತು ಕಾನೂನು ಮತ್ತು ಸಂವಿಧಾನ ತಜ್ಞರ ಅಭಿಪ್ರಾಯವನ್ನು ಕೇಳಿದ್ದು, ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
Shivakumar defends B Nagendra
ಬಿ. ನಾಗೇಂದ್ರ ಜೊತೆಗೆ ಸಿಎಂ ಡಿಕೆ ಶಿವಕುಮಾರ್
Updated on

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲರ ಅನುಮತಿ ಕೋರಿ ಸಿಬಿಐ ಪತ್ರ ಬರೆದಿದೆ ಎನ್ನಲಾಗಿದ್ದು, ಇದರೊಂದಿಗೆ ಸಚಿವರ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ.

ಮೂಲಗಳ ಪ್ರಕಾರ, ಸಿಬಿಐ ಸುಮಾರು ಒಂದು ವಾರದ ಹಿಂದೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದು ಪ್ರಕರಣದ ವಿವರಗಳನ್ನು ಒದಗಿಸಿದೆ ಎಂದು ತಿಳಿದುಬಂದಿದೆ.

ನಾಗೇಂದ್ರ ಅವರನ್ನು ವಿಚಾರಣೆ ನಡೆಸಲು ಹಾಗೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡುವಂತೆ ಮನವಿ ಮಾಡಿದೆ ಎನ್ನಲಾಗಿದೆ ಎಂದು ಹೇಳಲಾಗುತ್ತಿದೆ.

ರಾಜ್ಯಪಾಲರು ಈ ಕುರಿತು ಕಾನೂನು ಮತ್ತು ಸಂವಿಧಾನ ತಜ್ಞರ ಅಭಿಪ್ರಾಯವನ್ನು ಕೇಳಿದ್ದು, ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

2024ರ ಆಗಸ್ಟ್‌ನಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. ಬಳಿಕ ಹೈಕೋರ್ಟ್ ಕೂಡ ಆ ಅನುಮತಿಯನ್ನು ಎತ್ತಿಹಿಡಿದಿತ್ತು.

ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ಈಗಾಗಲೇ ಹೋರಾಟ ಆರಂಭಿಸಿವೆ. ಈ ವಿಚಾರವಾಗಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಸದಸ್ಯರು ವಿಧಾನಸಭೆ ಹಾಗೂ ವಿಧಾನ ಪರಿಷತ್‌ನ ಕಲಾಪಕ್ಕೆ ಅಡ್ಡಿಪಡಿಸಿದ್ದಾರೆ.

ಇದರ ಜೊತೆಗೆ ಜಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲು ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಯೋಜನೆ ರೂಪಿಸಿದೆ.

ಈ ಹಗರಣದ ಕುರಿತು ಜಾರಿ ನಿರ್ದೇಶನಾಲಯ (ED) ಈಗಾಗಲೇ ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದೆ. ಇದೀಗ ಸಿಬಿಐ ಕೂಡ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಕೋರಿರುವುದರಿಂದ ಪ್ರಕರಣ ಮತ್ತಷ್ಟು ವೇಗ ಪಡೆದುಕೊಳ್ಳುವ ಸಾಧ್ಯತೆಯಿದೆ. ಇದು ಸಚಿವರ ಸಂಪುಟದಲ್ಲಿ ನಾಗೇಂದ್ರ ಅವರ ಮುಂದುವರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಮೇಲಿನ ಒತ್ತಡವನ್ನೂ ಹೆಚ್ಚಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

Shivakumar defends B Nagendra
ನಾಗೇಂದ್ರ ರಾಜೀನಾಮೆಗೆ ಪ್ರತಿಪಕ್ಷಗಳ ಪಟ್ಟು: ಸಾಕ್ಷ್ಯವಿದ್ದರೆ ಸದನದ ಮುಂದಿಡಿ, ಚರ್ಚಿಸೋಣ- ಸಿಎಂ ಡಿ.ಕೆ ಶಿವಕುಮಾರ್

ಪ್ರಾಸಿಕ್ಯೂಷನ್‌ಗೆ ಅನುಮತಿ ಅಗತ್ಯವೇಕೆ?

ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 19ರ ಅಡಿಯಲ್ಲಿ ಸಾರ್ವಜನಿಕ ಸೇವಕರ ವಿರುದ್ಧದ ಅಪರಾಧವನ್ನು ನ್ಯಾಯಾಲಯ ಪರಿಗಣನೆಗೆ ತೆಗೆದುಕೊಳ್ಳಲು ಪ್ರಾಸಿಕ್ಯೂಷನ್‌ಗೆ ಅನುಮತಿ ಕಡ್ಡಾಯವಾಗಿದೆ.

ಈ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸಿ ನಾಗೇಂದ್ರ ವಿರುದ್ಧ ಆರೋಪಪಟ್ಟಿ ಸಲ್ಲಿಸಿರುವ ಹಿನ್ನೆಲೆಯಲ್ಲಿ, ರಾಜ್ಯಪಾಲರು ಸಮರ್ಥ ಪ್ರಾಧಿಕಾರಿಯಾಗಿರುವ ಕಾರಣ ಅವರಿಂದ ಅನುಮತಿ ಕೋರಿರಬಹುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಸಲಹೆಗಾರ ಎ.ಎಸ್. ಪೊನ್ನಣ್ಣ ಹೇಳಿದ್ದಾರೆ.

ಸಿಬಿಐ ರಾಜ್ಯಪಾಲರಿಂದ ಅನುಮತಿ ಕೋರಿರುವುದರಲ್ಲಿ ಆಶ್ಚರ್ಯಪಡುವಂಥದ್ದೇನೂ ಇಲ್ಲ” ಎಂದೂ ಅವರು ತಿಳಿಸಿದ್ದಾರೆ.

ಸಿಬಿಐ ಮೊದಲು ರಾಜ್ಯ ಸರ್ಕಾರವನ್ನು ಸಂಪರ್ಕಿಸಬೇಕಿತ್ತು: ಪ್ರಿಯಾಂಕ್ ಖರ್ಗೆ

ಇದೇ ವೇಳೆ, ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಕೋರಿರುವ ಸಿಬಿಐ ಕ್ರಮಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿಬಿಐ ಮೊದಲು ರಾಜ್ಯ ಸರ್ಕಾರವನ್ನು ಸಂಪರ್ಕಿಸಬೇಕಿತ್ತು. ನಾಗೇಂದ್ರ ಅವರ ವಿರುದ್ಧದ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಲು ಸಿಬಿಐ ಯಾವ ಆಧಾರದಲ್ಲಿ ನಿರ್ಧರಿಸಿದೆ ಎಂಬುದು ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com