

ಬೆಂಗಳೂರು: KSRTC ಬಸ್ಸಿನಲ್ಲಿ ಯುವತಿ ಜೊತೆ ಅನುಚಿತವಾಗಿ ವರ್ತಿಸಿದ ಯುವಕನಿಗೆ ಸಾರ್ವಜನಿಕರು ಧರ್ಮದೇಟು ನೀಡಿರುವ ಘಟನೆ ನಡೆದಿದೆ.
ನೆಲಮಂಗಲ ಬಳಿಯ ಸೋಲೂರು ಬಳಿ ಇಂದು ಬೆಳಗಿನ ಜಾವ ಹಾಸನದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ KSRTC ಬಸ್ಸಿನಲ್ಲಿ ಈ ಘಟನೆ ನಡೆದಿದೆ.
ಮಧ್ಯರಾತ್ರಿ ಜರ್ನಿ ವೇಳೆಯಲ್ಲಿ ಚಳಿಯಲ್ಲಿ ಬೆಚ್ಚಗೆ ಮಾಡಿಕೊಳ್ಳುವ ಯತ್ನಿಸಿದ ಯುವಕನಿಗೆ ಚಪ್ಪಲಿಯಲ್ಲಿ ಹೊಡೆದು ಯುವತಿ, ಗ್ರಹಚಾರ ಬಿಡಿಸಿದ್ದಾಳೆ.
ಬಳಿಕ ಯುವತಿ ಕಣ್ಣೀರು ಹಾಕುತ್ತಿದ್ದಂತೆಯೇ ಸಹ ಪ್ರಯಾಣಿಕರು ಆಕೆಯ ಬೆಂಬಲಕ್ಕೆ ನಿಂತಿದ್ದು, ಯುವಕನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪೊಲೀಸ್ ಠಾಣೆಗೆ ಬಸ್ ತಿರುಗಿಸಿ ಎಂದ ಪ್ರಯಾಣಿಕರು ಪಟ್ಟು ಹಿಡಿದಿದ್ದಾರೆ. ಕೊನೆಗೆ ನಿದ್ದೆಯಲ್ಲಿ ನನ್ನಿಂದ ತಪ್ಪಾಗಿದೆ ಎಂದು ಯುವಕ ಕ್ಷಮೆಯಾಚಿಸಿದ್ದಾನೆ.