ದೊಡ್ಡಬಳ್ಳಾಪುರ: ಪಾಕಿಸ್ತಾನ ಗ್ಯಾಂಗ್ ಸ್ಟರ್ ಗಳೊಂದಿಗೆ ಸಂಪರ್ಕ ಹೊಂದಿದ್ದ ಮೆಕ್ಯಾನಿಕ್ ಬಂಧನ

ಪಾಕಿಸ್ತಾನದ ಗ್ಯಾಂಗ್‌ಸ್ಟರ್‌ಗಳ ವೀಡಿಯೋಗಳನ್ನು ತನ್ನ ಇನ್‌ಸ್ಟಾಗ್ರಾಮ್ ಸ್ಟೇಟಸ್‌ಗಳಲ್ಲಿ ಹಂಚಿಕೊಳ್ಳುತ್ತಿದ್ದ ಈತ, ಅವರಿಗೆ ತನ್ನ ಗುರುತಿನ ಚೀಟಿ ಮತ್ತು ಪ್ರಮುಖ ವಿವರಗಳನ್ನು ಕಳುಹಿಸಿಕೊಟ್ಟಿದ್ದ ಎನ್ನಲಾಗಿದೆ.
ದೊಡ್ಡಬಳ್ಳಾಪುರ: ಪಾಕಿಸ್ತಾನ ಗ್ಯಾಂಗ್ ಸ್ಟರ್ ಗಳೊಂದಿಗೆ ಸಂಪರ್ಕ ಹೊಂದಿದ್ದ ಮೆಕ್ಯಾನಿಕ್ ಬಂಧನ
Updated on

ದೊಡ್ಡಬಳ್ಳಾಪುರ : ಪಾಕಿಸ್ತಾನದ ಗ್ಯಾಂಗ್​ಸ್ಟರ್‌ಗಳ ಜೊತೆ ಸಾಮಾಜಿಕ ಜಾಲತಾಣಗಳ ಮೂಲಕ ಸಂಪರ್ಕ ಹೊಂದಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ ಇಸ್ಲಾಂಪುರ ನಿವಾಸಿ ಸೈಯದ್ ಅಬೂಬಕರ್ (28) ಬಂಧಿತ ಆರೋಪಿ.

ಕೇಂದ್ರೀಯ ತನಿಖಾ ಸಂಸ್ಥೆಗಳು ನೀಡಿದ ಗೌಪ್ಯ ಮಾಹಿತಿಯನ್ನಾಧರಿಸಿ ದೊಡ್ಡಬಳ್ಳಾಪುರ ಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿದ್ದಾರೆ. ಆರೋಪಿ ಸೈಯದ್ ಅಬೂಬಕರ್ ಕಳೆದ ಎರಡು ವರ್ಷಗಳಿಂದ ಇನ್‌ಸ್ಟಾಗ್ರಾಮ್‌ ಮೂಲಕ ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳು ಮತ್ತು ಅಂತಾರಾಷ್ಟ್ರೀಯ ಕ್ರಿಮಿನಲ್ ಜಾಲದ ಸದಸ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದನು.

ಅಲ್ಲದೆ, ಪಾಕಿಸ್ತಾನದ ಗ್ಯಾಂಗ್‌ಸ್ಟರ್‌ಗಳ ವೀಡಿಯೋಗಳನ್ನು ತನ್ನ ಇನ್‌ಸ್ಟಾಗ್ರಾಮ್ ಸ್ಟೇಟಸ್‌ಗಳಲ್ಲಿ ಹಂಚಿಕೊಳ್ಳುತ್ತಿದ್ದ ಈತ, ಅವರಿಗೆ ತನ್ನ ಗುರುತಿನ ಚೀಟಿ ಮತ್ತು ಪ್ರಮುಖ ವಿವರಗಳನ್ನು ಕಳುಹಿಸಿಕೊಟ್ಟಿದ್ದ ಎನ್ನಲಾಗಿದೆ. ಈತನ ಮೊಬೈಲ್ ಫೋನ್ ತಪಾಸಣೆ ನಡೆಸಿದಾಗ ಪಿಸ್ತೂಲ್‌ಗಳ ಹಲವಾರು ಫೋಟೋಗಳು ಪತ್ತೆಯಾಗಿವೆ.

ಪೊಲೀಸರ ಮಾಹಿತಿಯಂತೆ, ಆರೋಪಿ ಸೈಯದ್ ಅಬೂಬಕರ್ ದೆಹಲಿ ಮತ್ತು ಕೇರಳದಲ್ಲಿ ತರಬೇತಿ ಪಡೆದಿದ್ದು, ಮಸೀದಿಯೊಂದರಲ್ಲಿ ಪಾಠ ಕೂಡ ಮಾಡುತ್ತಿದ್ದನು. ಈತ ಸ್ಥಳೀಯವಾಗಿ ನೆಟ್‌ವರ್ಕ್ ಬೆಳೆಸಿಕೊಂಡು ಕಾನೂನುಬಾಹಿರ ಚಟುವಟಿಕೆಗಳು ಅಥವಾ ಅಕ್ರಮ ಹಣಕಾಸು ವಹಿವಾಟು ನಡೆಸಲು ಯೋಜನೆ ರೂಪಿಸಿದ್ದ ಎನ್ನಲಾಗಿದೆ.

ದೊಡ್ಡಬಳ್ಳಾಪುರ: ಪಾಕಿಸ್ತಾನ ಗ್ಯಾಂಗ್ ಸ್ಟರ್ ಗಳೊಂದಿಗೆ ಸಂಪರ್ಕ ಹೊಂದಿದ್ದ ಮೆಕ್ಯಾನಿಕ್ ಬಂಧನ
ಪುತ್ತೂರು ಸೇವಾ ಕೇಂದ್ರದಲ್ಲಿ ದಾಖಲೆ ವಿಚಾರಕ್ಕೆ ಗಲಾಟೆ: ಓರ್ವನ ಬಂಧನ

ಆರೋಪಿ ಸೈಯದ್ ಅಬೂಬಕರ್ ತನ್ನ ಮೊಬೈಲ್​ನಲ್ಲಿ sayedabudakar313 ಹೆಸರಿನ ಇನ್​​ಸ್ಟಾಗ್ರಾಂ ಅಕೌಂಟ್ ಬಳಸುತ್ತಿದ್ದ. Hammadmemon 333 ಹೆಸರಿನ ವ್ಯಕ್ತಿ ಇನ್​​​ಸ್ಟಾಗ್ರಾಂನಲ್ಲಿ ಶೇರ್ ಮಾಡುತ್ತಿದ್ದ ವಿಡಿಯೋ ರೀಲ್ಸ್​ಗಳಿಗೆ ಲೈಕ್ ಕೊಟ್ಟು ಈ ವಿಡಿಯೋಗಳನ್ನ ತನ್ನ ಇನ್​​ಸ್ಟಾಗ್ರಾಂನಲ್ಲಿ ಸ್ಟೇಟಸ್​ ಹಾಕಿಕೊಳ್ಳುತ್ತಿದ್ದ. ಈ ವಿಡಿಯೋಗಳು ಪಾಕಿಸ್ತಾನದ ಗ್ಯಾಂಗ್​ಸ್ಟರ್‌ಗಳಿಗೆ ಸಂಬಂಧಿಸಿದ ವಿಡಿಯೋಗಳಾಗಿದ್ದವು.

ಕಾರ್ಯಾಚರಣೆ ವೇಳೆ ಪೊಲೀಸರು ಈತನಿಂದ ಹಲವು ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು ಮತ್ತು ಶಂಕಿತ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಕೇಂದ್ರೀಯ ತನಿಖಾ ಸಂಸ್ಥೆಗಳ ಅಧಿಕಾರಿಗಳು ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ರಾಜ್ಯದಲ್ಲಿ ಅಥವಾ ದೇಶದ ಇನ್ಯಾವುದೇ ಭಾಗದಲ್ಲಿ ಈತನಿಗೆ ಸಹಾಯ ಮಾಡಿದವರು ಯಾರಾದರೂ ಇದ್ದಾರೆಯೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ. ಬಂಧಿತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಉಗ್ರವಾದಿ ಕೃತ್ಯಗಳ ವಿಭಾಗ 113(3) ಹಾಗೂ ರಾಷ್ಟ್ರೀಯ ಏಕತೆಗೆ ಧಕ್ಕೆ ತರುವ ಕೃತ್ಯಗಳ ವಿಭಾಗ 197(2) ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com