ಚಾಮರಾಜನಗರ ಹನೂರು ಎನ್‌ಕೌಂಟರ್ ಪ್ರಕರಣ ತನಿಖೆ CID ಗೆ ವರ್ಗಾವಣೆ

ಹನೂರು ಎನ್‌ಕೌಂಟರ್ ಮತ್ತು ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ.
Chamarajnagara Hanur encounter
ಚಾಮರಾಜನಗರ ಹನೂರ್ ಎನ್ ಕೌಂಟರ್
Updated on

ಚಾಮರಾಜನಗರ ಜಿಲ್ಲೆಯ ಹನೂರು ಎನ್‌ಕೌಂಟರ್ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಅಪರಾಧ ತನಿಖಾ ಇಲಾಖೆ (CID)ಗೆ ವರ್ಗಾಯಿಸಲಾಗಿದೆ. ಈ ಕುರಿತು ರಾಜ್ಯ ಡಿಜಿಪಿ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ.

ಹನೂರು ಎನ್‌ಕೌಂಟರ್ ಮತ್ತು ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಎಫ್‌ಐಆರ್‌ಗಳು ದಾಖಲಾಗಿದ್ದವು.

Chamarajnagara Hanur encounter
ಹನೂರು ಶೂಟೌಟ್ ಕೇಸ್: ಸಂತ್ರಸ್ತರ ಕುಟುಂಬಗಳಿಗೆ ತಮಿಳುನಾಡು ನಾಯಕರ ಸಾಂತ್ವನ; ಪರಿಹಾರದ ಭರವಸೆ

ಎಲ್ಲಾ ಪ್ರಕರಣಗಳ ದಾಖಲೆಗಳು ಹಾಗೂ ಸಂಬಂಧಿತ ದಾಖಲೆಪತ್ರಗಳನ್ನು ಸಿಐಡಿಗೆ ಹಸ್ತಾಂತರಿಸುವಂತೆ ಚಾಮರಾಜನಗರ ಪೊಲೀಸರಿಗೆ ಸೂಚಿಸಲಾಗಿದೆ. ನಾಲ್ಕು ಎಫ್‌ಐಆರ್‌ಗಳ ಪೈಕಿ ಎರಡು ಹನೂರು ಪೊಲೀಸ್ ಠಾಣೆಯಲ್ಲಿ, ಒಂದು ರಾಮಾಪುರದಲ್ಲಿ ಹಾಗೂ ಮತ್ತೊಂದು ಕೊಳ್ಳೇಗಾಲದಲ್ಲಿ ದಾಖಲಾಗಿವೆ.

ಇನ್ನೊಂದೆಡೆ ಇಂದು ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕರು, ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಮೂವರು ತಮಿಳರು ಕ್ರೂರವಾಗಿ ಹಿಂಸೆಗೊಳಗಾಗಿರುವುದು ಕಂಡುಬಂದಿದೆ ಎಂದು ಹೇಳಿದ್ದಾರೆ. “ಇದು ಕೊಲೆ” ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ರಾಜ್ಯ ಸರ್ಕಾರ ಏನು ಕ್ರಮ ಕೈಗೊಳ್ಳುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಅಲ್ಲದೆ, ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಕೈಗೊಂಡು, ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ವಾಸಿಸುತ್ತಿದ್ದ ಆಂಥೋನಿ ಸಾಮಿ, ಜಾನ್ ರೋಸ್ ಪೀಟರ್ ಮತ್ತು ಕುಮಾರ್ ಎಂಬ ಮೂವರು ತಮಿಳರನ್ನು ಆಗಸ್ಟ್ 15ರ ಮುಂಜಾನೆ ಕಾವೇರಿ ವನ್ಯಜೀವಿಧಾಮ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಕ್ಕಿ ಹತ್ಯೆ ಮಾಡಿದ್ದರು ಎಂದು ತಮಿಳು ನಾಡು ಆರೋಪಿಸಿದೆ.

ಘಟನೆಯ ಬಳಿಕ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಈ ಆರೋಪಿತ ಕ್ರೂರ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ್ದು, ಘಟನೆ ಕುರಿತು ಕರ್ನಾಟಕ ಅರಣ್ಯ ಇಲಾಖೆ ನೀಡಿರುವ ವಿವರಣೆ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com