RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಹುನಸಗಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಸಹಾಯಕ ಶಿಕ್ಷಕ ಗುರುರಾಜ್ ಜೋಶಿ ಹಾಗೂ ಸುರಪುರ ತಾಲೂಕಿನ ಕುಪ್ಪಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಣ್ಣಾ ಸಾಹೇಬ್ ದೇಶಮುಖ್ ಅಮಾನತುಗೊಂಡಿದ್ದಾರೆ.
RSS route march
ಆರ್ ಎಸ್ ಎಸ್ ಪಥ ಸಂಚಲನ (ಸಂಗ್ರಹ ಚಿತ್ರ)
Updated on

ಯಾದಗಿರಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನದಲ್ಲಿ ಭಾಗವಹಿಸಿದ ಆರೋಪದ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.

ಇಲಾಖಾ ತನಿಖೆ ಪೂರ್ಣಗೊಳ್ಳುವವರೆಗೆ ಅಮಾನತು ಆದೇಶ ಜಾರಿಯಲ್ಲಿರಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದ್ದು, ಹುನಸಗಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಸಹಾಯಕ ಶಿಕ್ಷಕ ಗುರುರಾಜ್ ಜೋಶಿ ಹಾಗೂ ಸುರಪುರ ತಾಲೂಕಿನ ಕುಪ್ಪಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಣ್ಣಾ ಸಾಹೇಬ್ ದೇಶಮುಖ್ ಅಮಾನತುಗೊಂಡವರಾಗಿದ್ದಾರೆ.

ಯಾದಗಿರಿ ಉಪನಿರ್ದೇಶಕ ಶಾಲಾ ಶಿಕ್ಷಣಾಧಿಕಾರಿ ಚನ್ನಬಸಪ್ಪ ಮುಧೋಳ ಅವರು ಆಗಸ್ಟ್ 20ರಂದು ಇಬ್ಬರ ವಿರುದ್ಧವೂ ಅಮಾನತು ಆದೇಶ ಹೊರಡಿಸಿದ್ದಾರೆ.

RSS route march
ಬೆಂಗಳೂರಿನಲ್ಲಿ 8,000 ಕೋಟಿ ರೂ. ವೆಚ್ಚದಲ್ಲಿ 2,500 ಕಿ.ಮೀ ರಸ್ತೆ ಡಾಂಬರೀಕರಣ, ವೈಟ್-ಟಾಪಿಂಗ್- ಸಚಿವ ಕೃಷ್ಣ ಬೈರೇಗೌಡ!

KCS ನಿಯಮ ಉಲ್ಲಂಘನೆ ಆರೋಪ

ಶಿಕ್ಷಕರು RSS ಪಥಸಂಚಲನದಲ್ಲಿ ಪಾಲ್ಗೊಂಡಿರುವುದು ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು, 2021ರ ಹಲವು ನಿಯಮಗಳ ಉಲ್ಲಂಘನೆಯಾಗಬಹುದು ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿದೆ.

ಅವರ ಪಾಲ್ಗೊಳ್ಳುವಿಕೆ ಮೇಲ್ನೋಟಕ್ಕೆ ಕರ್ತವ್ಯಲೋಪಕ್ಕೆ ಸಮಾನವಾಗಿದ್ದು, KCS ನಿಯಮಗಳ 3(1), 3(2), 3(3), 5(1) ಮತ್ತು 7ನೇ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಅಮಾನತು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಪತ್ರಿಕೆಯಲ್ಲಿ ಪ್ರಕಟವಾಗಿದ್ದ ಫೋಟೋ

ಇಲಾಖೆಯ ವಿಚಾರಣಾ ಪ್ರಕ್ರಿಯೆ ಪ್ರಕಾರ, ಗುರುರಾಜ್ ಜೋಶಿ ಅವರು 2025ರ ಅಕ್ಟೋಬರ್ 12ರಂದು ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ನಡೆದ RSS ಪಥಸಂಚಲನದಲ್ಲಿ ಭಾಗವಹಿಸಿದ್ದರು ಎಂದು ವರದಿಯಾಗಿದೆ.

ಈ ಪಥಸಂಚಲನದಲ್ಲಿ ಅವರು ಭಾಗವಹಿಸಿರುವ ಛಾಯಾಚಿತ್ರ ಪತ್ರಿಕೆಯಲ್ಲಿ ಪ್ರಕಟವಾಗಿತ್ತು ಎಂದು ಇಲಾಖೆಯ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇಬ್ಬರು ಶಿಕ್ಷಕರ ವಿರುದ್ಧದ ಆರೋಪಗಳ ಕುರಿತು ಇಲಾಖಾ ತನಿಖೆ ನಡೆಯಲಿದ್ದು, ತನಿಖೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com