ಜನರಿಗೆ ಮಂಕುಬೂದಿ ಎರಚುವ ಕೆಲಸ ಮಾಡಬೇಡಿ: ಬಿಜೆಪಿ ಪಾದಯಾತ್ರೆಗೆ ಪರಮೇಶ್ವರ್ ಕೆಂಡಾಮಂಡಲ

ಆದರೆ ವಿಧಾನಸಭೆಯಲ್ಲಿ ಸರ್ಕಾರದ ವೈಫಲ್ಯದ ಆರೋಪಗಳನ್ನು ಪ್ರಶ್ನೆ ಎತ್ತಬೇಕು, ಅದನ್ನು ಬಿಟ್ಟು ಬೀದಿಯಲ್ಲಿ ಮಾಡಿದರೆ ಏನು ಮಾಡೋಕಾಗುತ್ತೆ ಎಂದರು. ಅವರು ಪಾದಯಾತ್ರೆ ಮಾಡಲಿ ಆದರೆ ಯಾವ ವೈಫಲ್ಯ? ಎಂಬುದನ್ನು ಅವರು ವಿಧಾನಸಭೆಯಲ್ಲಿ ಹೇಳಬೇಕು.
DCM Parameshwara
ಡಿಸಿಎಂ ಪರಮೇಶ್ವರ್
Updated on

ತುಮಕೂರು: ಸೆಪ್ಟಂಬರ್ 1 ರಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಾದಯಾತ್ರೆ ನಡೆಸಲು ಉದ್ದೇಶಿಸಿರುವ ಬಿಜೆಪಿ ವಿರುದ್ದ ಡಿಸಿಎಂ ಜಿ ಪರಮೇಶ್ವರ್ ಹರಿಹಾಯ್ದಿದ್ದಾರೆ.

ರಾಜ್ಯ ಸರಕಾರದ ಹಲವು ವೈಫಲ್ಯಗಳನ್ನು ಮುಂದಿಟ್ಟುಕೊಂಡು ಸೆ.1ರಿಂದ ಲಿಂಗಸುಗೂರಿನಿಂದ ಬಿಜೆಪಿ ಪಾದಯಾತ್ರೆ ನಡೆಸಲಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿಗ ಅವರು , ವಿರೋಧ ಪಕ್ಷವು ಪಾದಯಾತ್ರೆ ಕೈಗೊಳ್ಳಲು ಸ್ವತಂತ್ರವಾಗಿದೆ.

ಆದರೆ ವಿಧಾನಸಭೆಯಲ್ಲಿ ಸರ್ಕಾರದ ವೈಫಲ್ಯದ ಆರೋಪಗಳನ್ನು ಪ್ರಶ್ನೆ ಎತ್ತಬೇಕು, ಅದನ್ನು ಬಿಟ್ಟು ಬೀದಿಯಲ್ಲಿ ಮಾಡಿದರೆ ಏನು ಮಾಡೋಕಾಗುತ್ತೆ ಎಂದರು. ಅವರು ಪಾದಯಾತ್ರೆ ಮಾಡಲಿ ಆದರೆ ಯಾವ ವೈಫಲ್ಯ? ಎಂಬುದನ್ನು ಅವರು ವಿಧಾನಸಭೆಯಲ್ಲಿ ಹೇಳಬೇಕು.

ಅವರು ಮಾಡಲಿ. ನಾವು ಅವರಿಗೆ ಅದನ್ನು ಮಾಡಬೇಡಿ ಎಂದು ಹೇಳಿದ್ದೇವೆಯೇ? ಅವರು ಸ್ವತಃ ನಿರ್ಧರಿಸಿದ್ದಾರೆ ಅವರು ಅದನ್ನು ಮಾಡಲಿ ಬಿಡಿ. ಸರಿಯಾಗಿ ಅರ್ಥಮಾಡಿಕೊಳ್ಳದೆ, ಅವರು ಜನರಿಗೆ ಮಂಕು ಬೂದಿ ಎರಚಬಾರದು ಎಂದು ಪರಮೇಶ್ವರ್ ಕಿಡಿ ಕಾರಿದ್ದಾರೆ.

DCM Parameshwara
ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ಹೊರತಾಗಿಯೂ ಬಿಜೆಪಿ ಪಾದಯಾತ್ರೆ ಮುಂದುವರಿಕೆ: ಬಿ. ಶ್ರೀರಾಮುಲು; Video

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಕ್ಷದ ಪಾದಯಾತ್ರೆ ಸೆಪ್ಟೆಂಬರ್ 1 ರಂದು ಪ್ರಾರಂಭವಾಗಿ ಸೆಪ್ಟೆಂಬರ್ 10 ರಂದು ಮುಕ್ತಾಯಗೊಳ್ಳಲಿದೆ ಎಂದು ಘೋಷಿಸಿದ ನಂತರ ಉಪಮುಖ್ಯಮಂತ್ರಿ ಈ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com