ಬೆಂಗಳೂರು: ಮೂರು ದಿನಗಳಿಂದ ಕಾಣೆಯಾಗಿದ್ದ ಬಾಲಕ BWSSB ಸಂಪ್ ನಲ್ಲಿ ಶವವಾಗಿ ಪತ್ತೆ!

ಚಾಮರಾಜನಗರ ಜಿಲ್ಲೆಯ ರಜನಿಕಾಂತ್ ಎಂಬುವವರ ಪುತ್ರ ಪ್ರೀತಮ್ (14) ಮೃತ ಬಾಲಕ.
Preetam
ಪ್ರೀತಮ್
Updated on

ಬೆಂಗಳೂರು: ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಜಲಮಂಡಳಿ ಪೈಪ್‌ಲೈನ್‌ನ ಚೇಂಬರ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಚಾಮರಾಜನಗರ ಜಿಲ್ಲೆಯ ರಜನಿಕಾಂತ್ ಎಂಬುವವರ ಪುತ್ರ ಪ್ರೀತಮ್ (14) ಮೃತ ಬಾಲಕ. ಬೆಂಗಳೂರು ಜಲಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಪೈಪ್‌ಲೈನ್ ಅಳವಡಿಕೆಗಾಗಿ ನಿರ್ಮಿಸಿದ್ದ ತೆರೆದ ಸಂಪ್‌ನಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ರಜನಿಕಾಂತ್ ಎಂಬುವವರ ಪುತ್ರ ಪ್ರೀತಮ್ (14) ಮೃತ ಬಾಲಕ.

ಪೈಪ್‌ಲೈನ್ ಅಳವಡಿಕೆಗಾಗಿ ನಿರ್ಮಿಸಿದ್ದ ತೆರೆದ ಸಂಪ್‌
ಪೈಪ್‌ಲೈನ್ ಅಳವಡಿಕೆಗಾಗಿ ನಿರ್ಮಿಸಿದ್ದ ತೆರೆದ ಸಂಪ್‌

ಈ ದುರ್ಘಟನೆಗೆ ಜಲಮಂಡಳಿಯ ನಿರ್ಲಕ್ಷ್ಯವೇ ಕಾರಣ. ಪೈಪ್‌ಲೈನ್‌ಗಾಗಿ ತೆಗೆಯಲಾಗಿದ್ದ ಸಂಪ್‌ ಅನ್ನು ಮುಚ್ಚಿರಲಿಲ್ಲ. ಬಾಲಕ ಓಡಾಡುವ ವೇಳೆ ಆಕಸ್ಮಿಕವಾಗಿ ಸಂಪ್‌ಗೆ ಬಿದ್ದಿರುವ ಸಾಧ್ಯತೆಯಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಾತಗುಣಿಯ ಬಾಡಿಗೆ ಮನೆಯಲ್ಲಿ ರಜನಿಕಾಂತ್‌ ಕುಟುಂಬ ವಾಸವಿದೆ. ಪ್ರೀತಮ್ ಮೂರು ದಿನಗಳ ಹಿಂದೆ ಮನೆಯಿಂದ ಹೊರಗೆ ಹೋದವನು ವಾಪಸ್‌ ಬಂದಿರಲಿಲ್ಲ. ಈ ಸಂಬಂಧ ಪೋಷಕರು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.

ಪೊಲೀಸರು ಮತ್ತು ಸ್ಥಳೀಯರು ಹುಡುಕಾಟ ನಡೆಸುತ್ತಿದ್ದ ವೇಳೆ ಭಾನುವಾರ ಜಲಮಂಡಳಿ ಕಾಮಗಾರಿ ನಡೆಯುತ್ತಿದ್ದ ಸ್ಥಳದ ತೆರೆದ ಸಂಪ್‌ನಲ್ಲಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ಧಾವಿಸಿದ ಕಗ್ಗಲೀಪುರ ಪೊಲೀಸರು ಮೃತದೇಹವನ್ನು ಸಂಪ್‌ನಿಂದ ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

Preetam
ಬೆಂಗಳೂರು: ಆರು ವರ್ಷದ ಬಾಲಕಿ ಅಪಹರಿಸಿ ಕೊಲೆ; ವಲಸೆ ಕಾರ್ಮಿಕನ ಮೇಲೆ ಶಂಕೆ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com