ಗದಗ: ರೋಣ ಜಿಗಳೂರು ಕ್ರಾಸ್ ಬಳಿ ಕ್ರೂಸರ್-ಲಾರಿ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು, 15 ಮಂದಿ ಗಾಯ

ಗಜೇಂದ್ರಗಡದ ನಿವಾಸಿಗಳು ರೋಣ ಕಡೆಗೆ ತೆರಳುತ್ತಿದ್ದಾಗ ಸಂಭವಿಸಿದ ಈ ದುರ್ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Accident place where lorry completely damaged
ಅಪಘಾತದಲ್ಲಿ ಲಾರಿ ಮರಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾಗಿರುವುದು
Updated on

ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಇಂದು ಗುರುವಾರ ಬೆಳಗ್ಗೆ ಕ್ರೂಸರ್ ಮತ್ತು ಕ್ಯಾಂಟರ್ ವಾಹನಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಜೇಂದ್ರಗಡದ ನಿವಾಸಿಗಳು ರೋಣ ಕಡೆಗೆ ತೆರಳುತ್ತಿದ್ದಾಗ ಸಂಭವಿಸಿದ ಈ ದುರ್ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟವರನ್ನು ಗಜೇಂದ್ರಗಢ ಪಟ್ಟಣದ ಶಿವಾಜಿಪೇಟೆಯ ನಿವಾಸಿಗಳಾದ ಮರಿಯಂ ಹುನಗುಂದ(55ವ), ಅನ್ನಪೂರ್ಣ ಚಂಗಳಿ(45ವ) ಮತ್ತು ಸುಜಾತ ಹೊಸಮನಿ(30ವ) ಎಂದು ಗುರುತಿಸಲಾಗಿದೆ.

Accident place where lorry completely damaged
ಕಂಠಪೂರ್ತಿ ಕುಡಿದು ಕಾರು ಚಲಾಯಿಸಿ ವಾಹನಗಳಿಗೆ ಸರಣಿ ಅಪಘಾತ: ನಟ ಮಯೂರ್ ಪಟೇಲ್ ವಿರುದ್ಧ ಎಫ್ಐಆರ್ ದಾಖಲು

ಅಪಘಾತ ಸ್ಥಳಕ್ಕೆ ಗದಗ ಎಸ್ಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳಿಗೆ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರು ಜನ ಕಾರ್ಮಿಕರಿಗೆ ಕೈ, ಕಾಲು ಮುರಿತವಾಗಿದ್ದು, ಆಸ್ಪತ್ರೆಯಲ್ಲಿ ನರಳಾಡುತ್ತಿದ್ದಾರೆ. ಗಾಯಾಳುಗಳ ಸ್ಥಿತಿ ಕಂಡು ಸಂಬಂಧಿಕರು ಕಣ್ಣೀರು ಹಾಕುವಂತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com