ನಜೀರ್ ಅಹ್ಮದ್ ವಿರುದ್ಧ 'ಅವಹೇಳನಕಾರಿ ಹೇಳಿಕೆ': ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅಮಾನತು

ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅಹ್ಮದ್ ನೀಡಿದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಸಿಟಿ ರವಿ ಎರಡು ದಿನಗಳ ಹಿಂದೆ ಅವಹೇಳನಕಾರಿ ಹೇಳಿಕೆ ನೀಡಿದ್ದರು.
BJP MLC CT Ravi
ಬಿಜೆಪಿ ಎಂಎಲ್‌ಸಿ ಸಿಟಿ ರವಿ
Updated on

ಬೆಂಗಳೂರು: ಕಾಂಗ್ರೆಸ್ ಸದಸ್ಯ ನಜೀರ್ ಅಹ್ಮದ್ ವಿರುದ್ಧ 'ಅವಹೇಳನಕಾರಿ ಹೇಳಿಕೆ' ನೀಡಿದ ಆರೋಪದ ಮೇಲೆ ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರನ್ನು ಕರ್ನಾಟಕ ವಿಧಾನ ಪರಿಷತ್ತಿನ ಅಧಿವೇಶನದ ಕೊನೆಯ ದಿನದಂದು ಅಮಾನತುಗೊಳಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅಹ್ಮದ್ ನೀಡಿದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಸಿಟಿ ರವಿ ಎರಡು ದಿನಗಳ ಹಿಂದೆ ಅವಹೇಳನಕಾರಿ ಹೇಳಿಕೆ ನೀಡಿದ್ದರು.

ಈ ಹೇಳಿಕೆಯನ್ನು 'ಆಕ್ಷೇಪಾರ್ಹ' ಎಂದು ಪರಿಗಣಿಸಿದ ಪರಿಷತ್ತಿನ ಕಾಂಗ್ರೆಸ್ ಸದಸ್ಯರು, ಸಿಟಿ ರವಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಬುಧವಾರ, ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡುವ ಕೇವಲ ಒಂದು ಗಂಟೆಗೂ ಮೊದಲು, ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಿಟಿ ರವಿ ಅವರನ್ನು ದಿನದ ಮಟ್ಟಿಗೆ ಸದನದಿಂದ ಅಮಾನತುಗೊಳಿಸಿರುವುದಾಗಿ ಘೋಷಿಸಿದರು.

BJP MLC CT Ravi
ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕಾಂಗ್ರೆಸ್ ಎಂಎಲ್‌ಸಿ ನಜೀರ್‌ ಅಹ್ಮದ್‌ ಅಮಾನತಿಗೆ ಬಿಜೆಪಿ ಒತ್ತಾಯ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com