ಬೆಂಗಳೂರು: ಬೇರೆಯವರೊಂದಿಗೆ ಪ್ರೇಯಸಿಗೆ ನಿಶ್ಚಿತಾರ್ಥ; ನೊಂದು ಆತ್ಮಹತ್ಯೆಗೆ ಶರಣಾದ ಬಾಡಿ ಬಿಲ್ಡರ್!

ಕೊಠಡಿಯಿಂದ ಹೊರಬರದಿದ್ದಾಗ, ಅವರ ಕುಟುಂಬ ಸದಸ್ಯರು ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
Kiran was a bodybuilder and gym trainer by profession.
ಸಾವಿಗೀಡಾದ ಬಾಡಿಬಿಲ್ಡರ್ ಕಿರಣ್
Updated on

ಬೆಂಗಳೂರು: ನಗರದ 26 ವರ್ಷದ ದೇಹದಾರ್ಢ್ಯ ಪಟುಯೊಬ್ಬರು ಬೇರೊಬ್ಬ ವ್ಯಕ್ತಿಯೊಂದಿಗೆ ತನ್ನ ಮದುವೆ ನಿಶ್ಚಯವಾಗಿದೆ ಎಂದು ಪ್ರೇಯಸಿ ತಿಳಿಸಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ವೃತ್ತಿಯಲ್ಲಿ ಬಾಡಿಬಿಲ್ಡರ್ ಮತ್ತು ಜಿಮ್ ಟ್ರೈನರ್ ಆಗಿರುವ ಕಿರಣ್ ಕಳೆದ ಮೂರು ವರ್ಷಗಳಿಂದ ಯುವತಿಯೊಬ್ಬರನ್ನು ಪ್ರೀತಿಸುತ್ತಿದ್ದರು. ಶನಿವಾರ, ಆತ ತನ್ನ ಪ್ರೇಯಸಿಯನ್ನು ಭೇಟಿಯಾದಾಗ, ಆಕೆ ಇನ್ನೊಬ್ಬ ವ್ಯಕ್ತಿಯೊಂದಿಗೆ ತನಗೆ ನಿಶ್ಚಿತಾರ್ಥವಾಗಿರುವ ಬಗ್ಗೆ ತಿಳಿಸಿದ್ದಾರೆ.

ಈ ಸುದ್ದಿಯಿಂದ ಅಸಮಾಧಾನಗೊಂಡ ಆತ, ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಮನೆಗೆ ಮರಳಿದ್ದಾರೆ. ತನ್ನ ಕೊಠಡಿಯೊಳಗೆ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾರೆ.

ಕೊಠಡಿಯಿಂದ ಹೊರಬರದಿದ್ದಾಗ, ಅವರ ಕುಟುಂಬ ಸದಸ್ಯರು ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

Kiran was a bodybuilder and gym trainer by profession.
ಹುಡುಗಿ ಜೊತೆ ಅನುಚಿತವಾಗಿ ವರ್ತಿಸಿದ್ದನ್ನು ಪ್ರಶ್ನಿಸಿದ ಬಾಡಿಬಿಲ್ಡರ್ ಹತ್ಯೆಗೈದ ದುಷ್ಕರ್ಮಿಗಳು!

ಕಿರಣ್ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕಿರಣ್ ಅವರ ಕೊಠಡಿಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಪ್ರಕರಣವನ್ನು ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com